Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ

    September 13, 2025

    ಮಲ್ಲೇಶ್ವರದ ಸೇವಾಸದನದಲ್ಲಿ ‘ಸಡನ್ನಾಗ್ ಸತ್ಹೋದ್ರೆ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 14

    September 13, 2025

    ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಸ್ಮೃತಿ” ಉಪನ್ಯಾಸ ಮಾಲಿಕೆ ಕಾರ್ಯಕ್ರಮ

    September 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಸ್ಮೃತಿ” ಉಪನ್ಯಾಸ ಮಾಲಿಕೆ ಕಾರ್ಯಕ್ರಮ
    Kannada

    ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಸ್ಮೃತಿ” ಉಪನ್ಯಾಸ ಮಾಲಿಕೆ ಕಾರ್ಯಕ್ರಮ

    September 13, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ ವಿವೇಕಾನಂದ ಸಂಶೋಧನ ಕೇಂದ್ರ ಮತ್ತು ಐಕ್ಯೂಎಸಿ ಘಟಕ, ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ “ವಿವೇಕ ಸ್ಮೃತಿ” ಉಪನ್ಯಾಸ ಮಾಲಿಕೆ ಕಾರ್ಯಕ್ರಮವು ದಿನಾಂಕ 12 ಸೆಪ್ಟೆಂಬರ್ 2025ರಂದು ನಡೆಯಿತು.
    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಖ್ಯಾತ ವಾಗ್ಮಿ, ಚಿಂತಕ ಶ್ರೀಕಾಂತ ಶೆಟ್ಟಿ ಕಾರ್ಕಳ ಮಾತನಾಡಿ “ಎಲ್ಲರೊಳಗೆ ಒಳಗೊಳ್ಳುವ ಮಾನಸಿಕತೆ ಭಾರತೀಯರಿಗಿದೆ. ಅದನ್ನು ವಿಶ್ವದೆಲ್ಲೆಡೆ ಪಸರಿಸಿದ ಸ್ವಾಮಿ ವಿವೇಕಾನಂದರು ಶಾಂತಿ ಸಹಿಷ್ಣುತೆಗೆ ಹೊಸ ಆಯಾಮವನ್ನು ನೀಡಿದ್ದಾರೆ. ದೇಶಕ್ಕಾಗಿ, ಸಮಾಜಕ್ಕಾಗಿ ಪ್ರಾಣವನ್ನು ಮುಡಿಪಾಗಿಡುವ ಸಾವಿರಾರು ಯುವಕರಿಗೆ ವಿವೇಕಾನಂದರೇ ಪ್ರೇರಣೆ. ವಿವೇಕಾನಂದರು ಚಿಕಾಗೋ ಧರ್ಮ ಸಮ್ಮೇಳನದ ಮೂಲಕ ಭಾರತೀಯ ಸಂಸ್ಕೃತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದರು. ಅವರ ಭಾಷಣ ಪಾಶ್ಚಿಮಾತ್ಯ ದೇಶಗಳಿಗೆ ಭಾರತದ ಮೇಲಿರುವ ದೃಷ್ಟಿಕೋನ ಬದಲಿಸುತ್ತದೆ. ವಿವೇಕಾನಂದರು ನಾಯಕರಿಗೆ ನಾಯಕ. ಭಾರತದ ಋಷಿ ಪರಂಪರೆಯ ಪ್ರತಿನಿಧಿ ವಿವೇಕಾನಂದರು. ಮುಂದಿನ ಪೀಳಿಗೆಗೆ ವಿವೇಕಾನಂದರ ಚಿಂತನೆಗಳು ಹೊಸ ಬೆಳಕಾಗಲಿದೆ” ಎಂದು ಹೇಳಿದರು.
    ವಿವೇಕಾನಂದ ಸಂಶೋಧನಾ ಕೇಂದ್ರದ ಡೀನ್ ಡಾ. ವಿಜಯ ಸರಸ್ವತಿ ಪ್ರಾಸ್ತವಿಕವಾಗಿ ಮಾತಾನಾಡಿ “ಸ್ವಾಮಿ ವಿವೇಕಾನಂದರ ಚಿಂತನೆಗಳು ನಮ್ಮೆಲ್ಲರಲ್ಲೂ ಜಾಗೃತವಾಗಬೇಕು. ಜಗತ್ತಿಗೆ ಶಾಂತಿ ಸಂದೇಶ ನೀಡಿದ ಮಹಾನ್ ದಾರ್ಶನಿಕ ವಿವೇಕಾನಂದರು. ಸ್ವಾಮಿ ವಿವೇಕಾನಂದರ ಕುರಿತಾದ ಚಿಂತನೆಗಳ ಉಪನ್ಯಾಸ ಮಾಲಿಕೆ “ವಿವೇಕ ಸ್ಮೃತಿ”ಯ ಮೊದಲ 12 ಮಾಲಿಕೆಗಳು ಪುಸ್ತಕ ರೂಪದಲ್ಲಿ ಸಮಾಜಕ್ಕೆ ಕೊಡುಗೆಯಾಗಿ ಮೂಡಿಬಂದಿದೆ. ವಿವೇಕ ಸ್ಮೃತಿ ಸರಣಿ ಮಾಲಿಕೆ ಸಂಸ್ಥೆಗೆ ದಿಕ್ಸುಚಿಯಾಗಿ ಮೂಡಿಬರಲಿ” ಎಂದರು.
    ಕಾಲೇಜು ಆಡಳಿತ ಮಂಡಳಿ ಸಂಚಾಲಕ, ನ್ಯಾಯವಾದಿ ಮುರಳಿ ಕೃಷ್ಣ ಕೆ. ಎನ್. ಇವರ ಅದ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ನಾಯ್ಕ್ ಬಿ., ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಹೆಚ್. ಜಿ. ಶ್ರೀಧರ್, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್. ಉಪಸ್ಥಿತರಿದ್ದರು.
    ಆಂಗ್ಲ ವಿಭಾಗದ ಉಪನ್ಯಾಸಕಿ ಡಾ. ನಿಶಿತಾ ಸ್ವಾಗತಿಸಿ, ದ್ವೀತಿಯ ಎಂ. ಕಾಂ. ವಿದ್ಯಾರ್ಥಿ ಅನನ್ಯ ನಿರೂಪಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ವಂದಿಸಿದರು.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 16
    Next Article ಮಲ್ಲೇಶ್ವರದ ಸೇವಾಸದನದಲ್ಲಿ ‘ಸಡನ್ನಾಗ್ ಸತ್ಹೋದ್ರೆ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 14
    roovari

    Add Comment Cancel Reply


    Related Posts

    ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ

    September 13, 2025

    ಮಲ್ಲೇಶ್ವರದ ಸೇವಾಸದನದಲ್ಲಿ ‘ಸಡನ್ನಾಗ್ ಸತ್ಹೋದ್ರೆ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 14

    September 13, 2025

    ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 16

    September 13, 2025

    ಬಾಗಲಕೋಟೆ ಜಿಲ್ಲೆಯ ಕಮತಗಿಯಲ್ಲಿ ದಸರಾ ಉತ್ಸವ-2025 | ಕೊನೆಯ ದಿನಾಂಕ ಸೆಪ್ಟೆಂಬರ್ 20

    September 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.