Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಪುಸ್ತಕ ವಿಮರ್ಶೆ – ಪೀಳಿಗೆಯ ಯೋಚನೆಗಳನ್ನು ಬದಲು ಮಾಡಬಲ್ಲ ಕೃತಿ – ‘ಮಾತು ಎಂಬ ವಿಸ್ಮಯ’

    July 15, 2025

    ನಟನದಲ್ಲಿ ‘ಸುಬ್ಬಣ್ಣ ಸ್ಮರಣೆ 2025’ | ಜುಲೈ 16

    July 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕ ಸ್ಮೃತಿ – 18’
    Literature

    ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕ ಸ್ಮೃತಿ – 18’

    July 15, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು: ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ), ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನ ಕೇಂದ್ರ ಮತ್ತು ಐಕ್ಯೂಎಸಿ ಘಟಕದ ಸಹಭಾಗಿತ್ವದಲ್ಲಿ ಜಗತ್ತಿಗೆ ಭಾರತದ ಆಧ್ಯಾತ್ಮಿಕ ಚಿಂತನೆಯನ್ನು ಪರಿಚಯಿಸಿದ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದ ಕುರಿತಾದ ಚಿಂತನೆಗಳ ಉಪನ್ಯಾಸ ಮಾಲಿಕೆ, ವಿವೇಕ ಸ್ಮೃತಿಯ 18ನೇ ಕಾರ್ಯಕ್ರಮವು ದಿನಾಂಕ 14 ಜುಲೈ 2025ರಂದು ನಡೆಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಂತ ವೈದ್ಯ ಹಾಗೂ ಮಂಗಳೂರಿನ ರಾಮಕೃಷ್ಣ ಮಿಷನ್ ಇದರ ತರಬೇತುದಾರರಾದ ಡಾ. ರಾಹುಲ್ ಜಿ. ಟಿ. ಮಾತನಾಡಿ “ನಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಹಲವಾರು ಅವಕಾಶಗಳಿವೆ. ಆದರೆ ಅವಕಾಶ ಎಂದಿಗೂ ನಮ್ಮನ್ನು ಹುಡುಕಿಕೊಂಡು ಬರುವುದಿಲ್ಲ. ಸದಾವಕಾಶ ಸಿಕ್ಕಾಗ ಅದನ್ನು ಸದುಪಯೋಗಗೊಳಿಸಿಕೊಳ್ಳಬೇಕು. ನಮ್ಮ ದೇಶದ, ಜಗತ್ತಿನ ಭವಿಷ್ಯವನ್ನು ನಿರ್ಧರಿಸುವವರು ವಿದ್ಯಾರ್ಥಿಗಳು. ಆದ್ದರಿಂದ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ತಮ್ಮ ಗುರಿಯತ್ತ ಯೋಚಿಸಬೇಕು” ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ. ಕೆ. ಎನ್. ಮಾತನಾಡಿ “ಶಿಕ್ಷಣ ಪಡೆಯುವುದು ಎಂದರೆ ನಮ್ಮತನವನ್ನು ಕಳೆದುಕೊಳ್ಳುವುದಲ್ಲ ಬದಲಾಗಿ ಜ್ಞಾನವನ್ನು ಪಡೆದುಕೊಂಡು ಬೌದ್ಧಿಕವಾಗಿ, ಶಾರೀರಿಕವಾಗಿ ವಿಕಾಸಗೊಳ್ಳುವುದು. ಮನುಷ್ಯ ಜನ್ಮ ಬಹುದೊಡ್ಡದು ಅದನ್ನು ಹಾಳು ಮಾಡದಿರಿ ಎಂಬ ಪುರಂದರದಾಸರ ವಚನದಂತೆ, ಮಾನವ ಜನ್ಮ ಸಾರ್ಥಕವಾಗುವಂತೆ ಬದುಕಬೇಕು” ಎಂದರು.
    ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ಬಿ., ಉಪ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್, ಸ್ನಾತಕೋತ್ತರ ಪದವಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕಿ ಡಾ. ವಿಜಯ ಸರಸ್ವತಿ, ಭಾರತೀಯ ಸಂಸ್ಕೃತಿ ಮತ್ತು ಲಲಿತಾ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ ಎಸ್. ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಕಾಲೇಜಿನ ಆಂಗ್ಲಭಾಷ ವಿಭಾಗದ ಮುಖ್ಯಸ್ಥ ಬಾಲಕೃಷ್ಣ.ಎಚ್ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ.ಟಿ ನಿರ್ವಹಿಸಿ, ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಸೌಮಿತ್ರ. ಕೆ ವಂದಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleವಿಶ್ವದಾಖಲೆ ಮೂಡಿಸಿರುವ ಗಾಯಕನಿಗೆ ‘ಯಶೋಭಿನಂದನೆ’ ಸನ್ಮಾನ ಸಮಾರಂಭ
    Next Article ಬೆಳಾಲು ಶಾಲೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತ ಉಪನ್ಯಾಸ ಮಾಲೆ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಪುಸ್ತಕ ವಿಮರ್ಶೆ – ಪೀಳಿಗೆಯ ಯೋಚನೆಗಳನ್ನು ಬದಲು ಮಾಡಬಲ್ಲ ಕೃತಿ – ‘ಮಾತು ಎಂಬ ವಿಸ್ಮಯ’

    July 15, 2025

    ನಟನದಲ್ಲಿ ‘ಸುಬ್ಬಣ್ಣ ಸ್ಮರಣೆ 2025’ | ಜುಲೈ 16

    July 15, 2025

    ಗಮಕ ಹಾಗೂ ಯಕ್ಷಗಾನಕ್ಕಾಗಿ ಮಧೂರು ಕಲ್ಲೂರಾಯರಿಗೆ ಪ್ರಶಸ್ತಿ.

    July 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.