ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರವು ದಿನಾಂಕ 21, 22, 28 ಮತ್ತು 29 ಮಾರ್ಚ್ 2026ರಂದು (ಶನಿವಾರ ಮತ್ತು ಭಾನುವಾರ) ಸಂಜೆ 7-30 ಗಂಟೆಯಿಂದ 9-30ರವೆರೆಗೆ ಆನ್ ಲೈನ್ ನಲ್ಲಿ ನಡೆಯಲಿದೆ. ವಿದ್ವಾನ್ ಶ್ರೀಕಾಂತ್ ಗೋಪಾಲಕೃಷ್ಣನ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ವಿವಿಧ ಸಂಯೋಜಕರ ಪದಂ ಮತ್ತು ಜಾವಳಿಗಳನ್ನು ಕಲಿಸಲಾಗುವುದು. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 74119 16098 ಸಂಖ್ಯೆಯನ್ನು ಸಂಪರ್ಕಿಸಿರಿ.

