Subscribe to Updates

    Get the latest creative news from FooBar about art, design and business.

    What's Hot

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು | ಜನವರಿ 15

    January 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀರಾಮ ಪದವಿ ಕಾಲೇಜಿನಲ್ಲಿ ‘ವ್ಯಕ್ತಿತ್ವ ನಿರ್ಮಾಣದಲ್ಲಿ ಸಮಯಪ್ರಜ್ಞೆ’ ಎಂಬ ವಿಷಯದಲ್ಲಿ ಉಪನ್ಯಾಸ
    Kannada

    ಶ್ರೀರಾಮ ಪದವಿ ಕಾಲೇಜಿನಲ್ಲಿ ‘ವ್ಯಕ್ತಿತ್ವ ನಿರ್ಮಾಣದಲ್ಲಿ ಸಮಯಪ್ರಜ್ಞೆ’ ಎಂಬ ವಿಷಯದಲ್ಲಿ ಉಪನ್ಯಾಸ

    August 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕಲ್ಲಡ್ಕ : ವಿವೇಕಾನಂದ ಅಧ್ಯಯನ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಯೋಜಿತ ‘ವ್ಯಕ್ತಿತ್ವ ನಿರ್ಮಾಣದಲ್ಲಿ ಸಮಯಪ್ರಜ್ಞೆ’ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವು 14 ಆಗಸ್ಟ್ 2024ರಂದು ಕಲ್ಲಡ್ಕದ ಶ್ರೀರಾಮ ಪದವಿ ಕಾಲೇಜಿನಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಸಂಸ್ಥೆ ಮೈಸೂರು ಇದರ ಮುಖ್ಯಸ್ಥರಾದ  ಸ್ವಾಮಿ ಡಾ. ಮಹಾಮೇಧಾನಂದಜೀ ಮಾತನಾಡಿ “ತ್ಯಾಗ ಮತ್ತು ಸೇವೆ ಇವೆರಡು ಉತ್ತಮ ವ್ಯಕ್ತಿತ್ವದ ಎರಡು ಮುಖಗಳು. ಸತ್ಯ ಪರಿಪಾಲನೆ ಹಾಗೂ ಪರೋಪಕಾರ ಇತ್ಯಾದಿ ಮೌಲ್ಯಗಳ ಅಳವಡಿಕೆಯ ಜೊತೆಗೆ ನಿಸ್ವಾರ್ಥಿಯಾಗಿ ಸಮಯ ನಿರ್ವಹಣೆ ಮಾಡುವುದು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಹಾದಿ.” ಎಂದು ತಿಳಿಸಿದರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ  ಡಾ. ಪ್ರಭಾಕರ ಭಟ್ ಭಾರತೀಯ ಸಂಸ್ಕೃತಿಯಲ್ಲಿ ವ್ಯಕ್ತಿತ್ವದ ಮಹತ್ವವನ್ನು ಕೆಲವು ದೃಷ್ಟಾಂತಗಳ ಮೂಲಕ ತಿಳಿಸಿದರು.
    ವಿವೇಕಾನಂದ ಅಧ್ಯಯನ ಕೇಂದ್ರದ ಸಂಚಾಲಕ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಗಣಿತ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರು ಹೆಗಡೆ, ರಾಮಕೃಷ್ಣ ಸಂಸ್ಥೆಯ ಜೊತೆ ಕೈಜೋಡಿಸಿ ಸ್ವಚ್ಛ ಭಾರತ ಅಭಿಯಾನ ನಡೆಸುತ್ತಿರುವ ಕ್ಯಾ. ಗೋಪಿನಾಥ್ ಬೆಳ್ಳಾಲ, ಹೊಯ್ಸಳ ಪ್ರಾಂತ್ಯದ ಕಾರ್ಯಕಾರಿಣಿ ಸದಸ್ಯೆ ಡಾ. ಕಮಲಾ ಪ್ರಭಾಕರ ಭಟ್ ಹಾಗೂ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ವಿದ್ಯಾರ್ಥಿಗಳು ಮೇಧಾಸೂಕ್ತ ಪಠಿಸಿದರು. ವಿದ್ಯಾರ್ಥಿಗಳಾದ ಯತೀಶ್ ಆಚಾರ್ಯ ಸ್ವಾಗತಿಸಿ, ಕು. ದಿವ್ಯಾಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿ, ಕು. ಮನ್ವಿತಾ ವಂದಿಸಿದರು.  ಶ್ರೀ ಸ್ವಾಮೀಜಿಯವರು ಶ್ರೀರಾಮ ವಿದ್ಯಾಕೇಂದ್ರದ ವಿವಿಧ ವಿಭಾಗಗಳನ್ನು ವೀಕ್ಷಿಸಿ ಮುಕ್ತ ಕಂಠದಿಂದ ಪ್ರಶಂಸೆ ವ್ಯಕ್ತಪಡಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ | ಆಗಸ್ಟ್ 17
    Next Article ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ‘ಪದ್ಮ ಪಲ್ಲವ’ | ಆಗಸ್ಟ್ 18
    roovari

    Comments are closed.

    Related Posts

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಕುಳಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಕಲಿಕಾ ಹಬ್ಬ’

    January 3, 2026

    ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ

    January 2, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.