Subscribe to Updates

    Get the latest creative news from FooBar about art, design and business.

    What's Hot

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025

    ತಿಂಗಳ ನಾಟಕ ಸಂಭ್ರಮದಲ್ಲಿ ‘ದಿ ಫೈಯರ್’ ನಾಟಕ ಪ್ರದರ್ಶನ | ಮೇ 17

    May 15, 2025

    ಸಾಹಿತಿ ರತ್ನ ಕುಮಾರ್ ಎಂ. ಇವರಿಗೆ ಕ.ಸಾ.ಪ.ದಿಂದ ಸನ್ಮಾನ

    May 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪತ್ರಕರ್ತ ರವಿ ಹೆಗಡೆಗೆ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
    Awards

    ಪತ್ರಕರ್ತ ರವಿ ಹೆಗಡೆಗೆ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

    January 14, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ರಜತೋತ್ಸವ ಸಮಿತಿಯ ಸಹಕಾರದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 11 ಜನವರಿ 2025ರ ಶನಿವಾರದಂದು ಬ್ರಹ್ಮಾವರದ ಬಂಟರ ಭವನದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಮೂಡಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್‌ ಆಳ್ವಾ ಮಾತನಾಡಿ “ಸಮುದಾಯದ ಧ್ವನಿಯಾಗಿ, ಸಮಾಜದ ಸಾಧ್ಯತೆಗಳನ್ನು ಬದುಕಿನ‌ ವೈವಿಧ್ಯತೆಯ ಚಿತ್ರಣವಾಗಿ, ಸಾಮಾಜಿಕ ಜವಾಬ್ದಾರಿಯ ಎಚ್ಚರಿಕೆಯ ಗಂಟೆಯಾಗಿ ಪತ್ರಿಕೆ ಕೆಲಸ ಮಾಡುತ್ತಿದೆ.” ಎಂದು ಹೇಳಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ “ಪತ್ರಿಕೋದ್ಯಮ ಇಂದು ಸಂದಿಗ್ಧ ಸ್ಥಿತಿಯಲ್ಲಿದೆ. ಪ್ರಾಮಾಣಿಕ ಸುದ್ದಿ ಮತ್ತು ಪ್ರಾಮಾಣಿಕ ನಿರ್ಭೀತ ಪತ್ರಿಕೋದ್ಯಮ ಇಂದು ಅಗತ್ಯವಾಗಿದೆ. ಇಂದಿನ ಪತ್ರಿಕೆ ಮತ್ತು ಪತ್ರಕರ್ತರಿಗೆ ಅತಿಯಾಗಿ ವಿಜೃಂಭಿಸದೇ ವಾಸ್ತವವನ್ನು ಬಿಂಬಿಸುವ ಪತ್ರಕರ್ತರನ್ನಾಗಿ ಮಾಡಲು ವಡ್ಡರ್ಸೆ ಅವರು ಮಾದರಿ ಹಾಕಿ ಕೊಟ್ಟಿದ್ದಾರೆ” ಎಂದು ಹೇಳಿದರು.
    ಸಂಘದ ಅಧ್ಯಕ್ಷರಾದ ರಾಜೇಶ ಗಾಣಿಗ ಅಚ್ಲಾಡಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ
    ಹಿರಿಯ ಪತ್ರಕರ್ತ ರವಿ ಹೆಗಡೆ ಇವರಿಗೆ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಇವರನ್ನು ಅಭಿನಂದಿಸಲಾಯಿತು.
    ಪತ್ರಕರ್ತರಾದ ಜೋಗಿ(ಗಿರೀಶ್‌ ರಾವ್‌ ಹತ್ವಾರ್‌) ಕೆ. ಸಿ. ರಾಜೇಶ ಅಭಿನಂದನಾ ಭಾಷಣ ಮಾಡಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶಪಾಲ್‌ ಸುವರ್ಣ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೈಕಲ್ ರಾಡ್ರಿಗಸ್, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಬ್ರಹ್ಮಾವರ ಬಂಟರ ಭವನದ ಸಂಚಾಲಕ ಭುಜಂಗ ಶೆಟ್ಟಿ ಉಪಸ್ಥಿತರಿದ್ದರು.

    ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸ್ವಾಗತಿಸಿ, ಕಾರ್ಯಕ್ರಮದ ಸಂಚಾಲಕ ವಸಂತ ಗಿಳಿಯಾರು ಪ್ರಾಸ್ತಾವಿಕವಾಗಿ ಮಾತನಾಡಿ, ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಹರೀಶ ಕಿರಣ್‌ ತುಂಗ ವಂದಿಸಿದರು.ಕಾರ್ಯಕ್ರಮದಲ್ಲಿ ಉಡುಪಿ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ ನೀಲಾವರ, ವಿದ್ಯಾರ್ಥಿ ವಿಘ್ನೇಶ್ ಶೆಣೈ ಮತ್ತು ಇತರೆ ವಿದ್ಯಾರ್ಥಿಗಳ ಸಂಗ್ರಹದ ಅಮೂಲ್ಯ ʼಮುಂಗಾರುʼ ಪತ್ರಿಕೆಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

    award
    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳದಲ್ಲಿ ‘ರಾಮಸಾಗರಗಾಮಿನೀ’ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸ ಮಾಲೆ
    Next Article ಮಂಗಳೂರು ಸಾಹಿತ್ಯ ಉತ್ಸವದಲ್ಲಿ ‘ಕನ್ನಡ ಸಾಹಿತ್ಯ ವಿಮರ್ಶೆ – ಒಂದು ಅಕಾಡೆಮಿಕ್ ಚರ್ಚೆ’
    roovari

    Add Comment Cancel Reply


    Related Posts

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.