ಮಧೂರು : ಉಳಿಯ ದನ್ವಂತರಿ ಯಕ್ಷಗಾನ ಕಲಾಸಂಘ ಮಧೂರು ಇದರ ವಾರದ ಕೂಟ ಉಳಿಯ ಮನೆಯ ಸುಧಾ ಮಂದಿರದಲ್ಲಿ ದಿನಾಂಕ 07 ಸೆಪ್ಟೆಂಬರ್ 2025 ಭಾನುವಾರದಂದು ‘ಯಾಗ ಸನ್ನಾಹ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರು ಶ್ರೀ ವಾಸುದೇವ ಕಲ್ಲೂರಾಯ ಮಧೂರು ಹಾಗೂ ಮದ್ದಳೆಯಲ್ಲಿ ಬ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಇವರುಗಳು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಕೃಷ್ಣ : ಬ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಧರ್ಮರಾಯ : ಶ್ರೀ ಗೋಪಾಲ ಅಡಿಗಳು ಕೂಡ್ಲು, ಭೀಮ : ಶ್ರೀ ಮಯೂರ ಆಸ್ರ ಉಳಿಯ, ಅರ್ಜುನ : ಶ್ರೀಮತಿ ರಕ್ಷಾ ರಾಮ್ ಕಿಶೋರ ಆಸ್ರ, ಇಂದ್ರಸೇನ : ಶ್ರೀಮತಿ ಧನ್ಯಮುರಳಿ ಕೃಷ್ಣ ಆಸ್ರ ಇವರುಗಳು ಭಾಗವಹಿಸಿದ್ದರು.