Subscribe to Updates

    Get the latest creative news from FooBar about art, design and business.

    What's Hot

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಸಂಭ್ರಮ 50 ಜ್ಯೋತಿ ರಥ ಯಾತ್ರೆಗೆ ಸ್ಥಳೀಯಾಡಳಿತ, ಕ.ಸಾ.ಪ.ದಿಂದ ಸ್ವಾಗತ
    Kannada

    ಕರ್ನಾಟಕ ಸಂಭ್ರಮ 50 ಜ್ಯೋತಿ ರಥ ಯಾತ್ರೆಗೆ ಸ್ಥಳೀಯಾಡಳಿತ, ಕ.ಸಾ.ಪ.ದಿಂದ ಸ್ವಾಗತ

    October 14, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೀರ್ಥಹಳ್ಳಿ : ಕಳೆದ ನವೆಂಬರ್ 2023ಕ್ಕೆ ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ಮರು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಕರ್ನಾಟಕ ಸಂಭ್ರಮ – 50 – ‘ಹೆಸರಾಯಿತು ಕನ್ನಡ, ಉಸಿರಾಗಲಿ ಕನ್ನಡ’ ಎಂಬ ಘೋಷಣೆಯೊಂದಿಗೆ ನಿರಂತರ ಒಂದು ವರ್ಷ ಕನ್ನಡದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ – ಕನ್ನಡಿಗ ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ರ ಆಯವ್ಯಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಪ್ರಕಟಿಸಿದ್ದರು.

    ಈ ಹಿನ್ನಲೆಯಲ್ಲಿ ಅಭಿಯಾನದ ನಿಮಿತ್ತವಾಗಿ 1 ನವೆಂಬರ್ 2023ರಿಂದ ನವೆಂಬರ್ 2024ರವರೆಗೆ ರಾಜ್ಯಾದ್ಯಂತ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಇದರ ಅಂಗವಾಗಿ 2 ನವೆಂಬರ್ 2023ರಂದು ವಿಜಯನಗರ ಜಿಲ್ಲೆಯ ಹಂಪಿಯಿಂದ ಪ್ರಾರಂಭವಾದ ಕರ್ನಾಟಕ ಸಂಭ್ರಮ –50 ಜ್ಯೋತಿ ರಥ ಯಾತ್ರೆಗೆ ಮುಖ್ಯಮಂತ್ರಿ ಚಾಲನೆ ನೀಡಿದ್ದರು.

    ಈ ಕರ್ನಾಟಕ- ಸಂಭ್ರಮ-50 ಜ್ಯೋತಿ ರಥಯಾತ್ರೆಯು 13 ಅಕ್ಟೋಬರ್ 2024ರಂದು ತೀರ್ಥಹಳ್ಳಿಗೆ ಹೊಸನಗರದಿಂದ ಆಗಮಿಸಿತು. ಇದನ್ನು ತಾಲೂಕು‌ ಆಡಳಿತ, ಪಟ್ಟಣ ಪಂಚಾಯತಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಇತರ ಕನ್ನಡ ಪರ ಸಂಘ ಸಂಸ್ಥೆಗಳು, ನಾಗರಿಕರು ಆಗುಂಬೆ ಹಾಗೂ ಸಾಗರ ರಸ್ತೆ ಕೂಡುವ ವೃತ್ತದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

    ಈ ಸಂದರ್ಭದಲ್ಲಿ ಮಾಜಿ ಗೃಹ ಸಚಿವರೂ ಹಾಲಿ ಶಾಸಕರಾಗಿರುವ ಆರಗ ಜ್ಞಾನೇಂದ್ರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ, ಉಪಾಧ್ಯಕ್ಷೆ ಗೀತಾ ರಮೇಶ್, ತಹಸಿಲ್ದಾರ್ ಜಕ್ಕಣ್ಣನವರ್, ಸರ್ಕಾರದ ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಟಾನ ಸಮಿತಿಯ ಅಧ್ಯಕ್ಷ ನಾಬಳ ಶಚ್ಚೀಂದ್ರ ಹೆಗ್ಡೆ, ಉಪ ತಹಸೀಲ್ದಾರ್ ಸತ್ಯಮೂರ್ತಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಟಿ.ಕೆ. ರಮೇಶ್ ಶೆಟ್ಟಿ, ಕ.ಸಾ.ಪ.ದ ಆರ್.ಎಂ. ಧರ್ಮಕುಮಾರ್, ಟಿ.ಜಿ. ಸೋಮಶೇಖರ್, ಪ್ರಸನ್ನ ತಿರಳೇಬೈಲು, ನಿರಂಜನ, ಪ‌.ಪಂ. ಸದಸ್ಯರಾದ ಸಂದೇಶ್ ಜವಳಿ, ರವೀಶ್ (ಬಾಬಿ) ಮುಂತಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನ ಅನುರಾಗ ವಠಾರದಲ್ಲಿ ಲೋಕಾರ್ಪಣೆಗೊಂಡ ಲೇಖನಗಳ ಸಂಗ್ರಹ ‘ತೆರೆದ ಗವಾಕ್ಷಿ’
    Next Article ಕವನ ಸ್ಪರ್ಧೆಗೆ ಕವನಗಳ ಆಹ್ವಾನ | ಅಕ್ಟೋಬರ್ 31
    roovari

    Add Comment Cancel Reply


    Related Posts

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.