Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’
    Book Release

    ಮಂಗಳೂರಿನಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’

    August 14, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ವತಿಯಿಂದ ದಿನಾಂಕ 11 ಆಗಸ್ಟ್ 2024ನೇ ಆದಿತ್ಯವಾರದಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಕಾಲೇಜಿನ ವಠಾರದಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯು ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮವು ಬೆಳಿಗ್ಗೆ ಗ್ರಾಮೀಣ ಕ್ರೀಡಾ ಚಟುವಟಿಕೆಗಳೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮಕ್ಕೆ ರಾಮಕೃಷ್ಣ ಕಾಲೇಜಿನ ಸಂಚಾಲಕರಾದ ಡಾ. ಸಂಜೀವ ರೈ ಇವರು ಬಲೂನು ಹಾರಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ನಿಂಬೆ ಹಣ್ಣಿನ ಓಟ, ಮೂರು ಕಾಲಿನ ಓಟ, ಗೋಣಿಚೀಲದ ಓಟ, ಗೂಟ ಸುತ್ತಿ ಓಡುವುದು, ಹಗ್ಗಜಗ್ಗಾಟದ ಮುಂತಾದ ಕ್ರೀಡಾ ಚಟುವಟಿಕೆಗಳ ಜೊತೆಗೆ ಮಡಲು ನೇಯುವ ಸ್ಪರ್ಧೆಗಳು ನಡೆದವು. ಈ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರು ಸೇರಿ ಅಂದಾಜು 200 ಜನರು ಪಾಲ್ಗೊಂಡು ಸಂಭ್ರಮಿಸಿದರು.

    ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮಕ್ಕೆ ವಿಜಯ ಬ್ಯಾಂಕಿನ ನಿವೃತ್ತ ಡಿ.ಜಿ.ಎಂ. ಶ್ರೀ ಹಾಲಾಡಿ ಶಾಂತರಾಮ ಶೆಟ್ಟಿ ಇವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು ಹಾಗೂ ಕಳಸಿಗೆ ಭತ್ತ ಸುರಿದು ನೆಣೆಕೋಲು ಹಚ್ಚುವ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ತಾನು ಉದ್ಯೋಗ ನಿಮಿತ್ತ ರಾಜ್ಯದ ಬೇರೆ ಬೇರೆ ನೆಲಸಿದ್ದರೂ ನಾನು ಮಾತೃ ಭಾಷೆಯಾದ ಕುಂದಾಪ್ರ ಕನ್ನಡವನ್ನು ಈಗಲೂ ಮರೆತಿಲ್ಲ. ಮನೆಯಲ್ಲಿ ಕುಂದಗನ್ನಡವನ್ನೇ ಮಾತನಾಡುತ್ತೇನೆ. ನಾವು ಎಂದೆಂದಿಗೂ ನಮ್ಮ ಮಾತೃ ಭಾಷೆಯನ್ನು ಬಳಸಿ ಉಳಿಸಬೇಕು” ಎಂದು ಕರೆಕೊಟ್ಟರು. ಬಳಿಕ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಶ್ರೀ ಬಾಲಕೃಷ್ಣ ಶೆಟ್ಟಿ ಇವರು ಕುಂದಗನ್ನಡ ಶೈಲಿಯ ಲಘುಧಾಟಿಯ ಭಾಷಣದ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ಮಂತ್ರಮುಗ್ದರನ್ನಾಗಿಸಿದರು. ನಂತರ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರಾದ ಶೇಖರ್, ತಮನ್ವಿ ಕನ್ಸ್ಟ್ರಕ್ಷನ್ ಮಂಗಳೂರು ಮತ್ತು ಕುಂದಗನ್ನಡ ಕಲಾವಿದರಾದ ಶ್ರೀ ಚೇತನ್ ನೈಲಾಡಿ ಇವರನ್ನು ಸನ್ಮಾನಿಸಲಾಯಿತು.

    ಕರುಣಾಕರ ಬಳ್ಕೂರು ಸಂಪಾದಿತ ಕೃತಿ ಕುಂದಾಪ್ರ ಕನ್ನಡ ಕಥಾ ಸಂಕಲನ ‘ನುಡಿ ತೇರು’ ಹೊತ್ತಿಗೆಯನ್ನು ಸಾಂಕೇತಿಕವಾಗಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಸಂಸದರಾದ ಶ್ರೀ ಬ್ರಿಜೇಶ್ ಚೌಟ ಮತ್ತು ಬಂಟವರ ಯಾನೆ ನಾಡವರ ಸಂಘ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿಯವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವಿಶ್ವಕುಂದಾಪುರ ಕನ್ನಡ ದಿನಾಚರಣೆ ಆಯೋಜನಾ ಸಮಿತಿ ಗೌರವಾಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ, ಉಪಾಧ್ಯಕ್ಷರಾದ ಶ್ರೀ ಮಮತ ಜಿ. ಐತಾಳ್ ಇವರು ಸಭೆಯಲ್ಲಿ ಹಾಜರಿದ್ದರು. ಆಯೋಜನಾ ಸಮಿತಿ ಅಧ್ಯಕ್ಷರಾದ ಶ್ರೀ ಜಿ.ಕೆ. ಶೆಟ್ಟಿಯವರು ಪ್ರಸ್ತಾವನೆ ಗೈದು ಅತಿಥಿಗಳನ್ನು ಸ್ವಾಗತಿಸಿದರು. ಆರ್.ಜೆ. ನಯನ ಮತ್ತು ಆರ್.ಜೆ. ಪ್ರಸನ್ನ ಕಾರ್ಯಕ್ರಮ ನಿರ್ವಹಿಸಿದರು. ಆಯೋಜನಾ ಸಮಿತಿ ಕಾರ್ಯದರ್ಶಿಯಾದ ಶ್ರೀ ರಾಮಕೃಷ್ಣ ಮರಾಠೆಯವರು ವಂದಾನರ್ಪಣೆಗೈದರು.

    ಕುಡ್ಲದಗಿಪ್ಪ ಕುಂದಾಪುರದ ಎಲ್ಲಾ ಹಿರಿಯರು ಮತ್ತು ಮಾರ್ಗದರ್ಶಕರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯದಲ್ಲಿ ಕುಡ್ಲಗಿಪ್ಪ ಕುಂದಾಪುರದ ಸದಸ್ಯರು ವಿವಿಧ ನೃತ್ಯ, ಯಕ್ಷಗಾನ, ಹಾಡು ಮುಂತಾದ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಚೇತನ್ ನೈಲಾಡಿ ತಂಡದಿಂದ ‘ಹೆಂಗ್ಸ್ರ್ ಪಂಚೇತಿ’ ಎನ್ನುವ ಕುಂದಗನ್ನಡದ ವಿಶಿಷ್ಟವಾದ ಹಾಸ್ಯ ಚಟುವಟಿಕೆಯನ್ನು ನಡೆಸಿಕೊಟ್ಟರು. ಸಾಂಸ್ಕೃತಿಕ ಕಾರ್ಯಕ್ರಮದ ಮಧ್ಯದಲ್ಲಿ ಬೆಳಿಗ್ಗೆ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಧನ್ಯವಾದ ಸಮರ್ಪಣೆಯನ್ನು ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಇವರು ನೆರವೇರಿಸಿದರು. ಅಂದಾಜು 450 ಜನ ಕುಡ್ಲಗಿಪ್ಪ ಕುಂದಗನ್ನಡಿಗರು ಈ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ರಾತ್ರಿ ಕುಂದಾಪುರ ಶೈಲಿಯ ವಿಶೇಷ ಭೋಜನದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬಿ.ಸಿ. ರೋಡಿನಲ್ಲಿ ‘ರಾಣಿ ಅಬ್ಬಕ್ಕ ಕಥಾ ಕೀರ್ತನಾ’ ಕಾರ್ಯಕ್ರಮ | ಆಗಸ್ಟ್ 15
    Next Article ಮೈಸೂರಿನ ಶ್ರೀರಂಗ ವೇದಿಕೆಯಲ್ಲಿ ಬಿ. ಎಂ. ಮಹಾದೇವ್ ಮೂರ್ತಿ ಇವರ ಪುಸ್ತಕ ಲೋಕಾರ್ಪಣೆ 
    roovari

    Comments are closed.

    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.