Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    “ಭಜನೆಯಿಂದ ಮನಶಾಂತಿ” – ಪ್ರಭಾಕರ್ ಜೀ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡು ಕನ್ನಡ ಗ್ರಾಮದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ, ಬೆಂಗಳೂರು ಕನ್ನಡ ನಾಟಕೋತ್ಸವ ಮತ್ತು ಗಡಿನಾಡ ಉತ್ಸವ
    Bharathanatya

    ಕಾಸರಗೋಡು ಕನ್ನಡ ಗ್ರಾಮದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ, ಬೆಂಗಳೂರು ಕನ್ನಡ ನಾಟಕೋತ್ಸವ ಮತ್ತು ಗಡಿನಾಡ ಉತ್ಸವ

    January 15, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕರ್ನಾಟಕ ರಾಜ್ಯ ಮಟ್ಟದ ಹಿರಿಯ ನಾಟಕ ಮತ್ತು ಸಾಂಸ್ಕೃತಿಕ ಸಂಘಟನೆಯಾದ ವಿ.ಕೆ.ಎಂ ಕಲಾವಿದರು (ರಿ.) ಬೆಂಗಳೂರು ಇದರ 44ನೇ ಸಂಸ್ಥಾಪನಾ ವರ್ಷಾಚರಣೆಯ ಅಂಗವಾಗಿ ಹಾಗೂ ಇದರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಬೆಂಗಳೂರು ಇದರ ಸಹಯೋಗದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ ಕಾಸರಗೋಡು, ಇದರ ಸಹಕಾರದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 27 ಮಾರ್ಚ್ 2025ರಂದು ಅಪರಾಹ್ನ 4-00 ಗಂಟೆಗೆ ವಿಶ್ವರಂಗ ಭೂಮಿ ದಿನಾಚರಣೆಯ ಅಂಗವಾಗಿ ಹಳೆ ನಾಟಕಗಳ ಸವಿನೆನಪು, ಕಾಸರಗೋಡು ಬೆಂಗಳೂರು ಕನ್ನಡ ನಾಟಕೋತ್ಸವ ಮತ್ತು ಗಡಿನಾಡ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    ವಿ.ಕೆ.ಎಂ.ಕಲಾವಿದರು (ರಿ.) ಬೆಂಗಳೂರು ಇದರ ನೇತೃತ್ವದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ ಸಿ.ಎಂ. ತಿಮ್ಮಯ್ಯ ಬೆಂಗಳೂರು ಇವರ ಸಾರಥ್ಯದಲ್ಲಿ 1) ಎನ್.ಎಸ್. ರಾವ್ ವಿರಚಿತ, ಡಿ. ವೆಂಕಟರಮಣಯ್ಯ (ಅಪ್ಪಾಜಿ) ಇವರ ನಿರ್ದೇಶನದಲ್ಲಿ ಬೆಂಗಳೂರಿನ ರೂಪ ಕಲಾನಿಕೇತನ ಅಭಿನಯಿಸುವ ‘ವರ ಭ್ರಷ್ಟ’ ಕನ್ನಡ ನಾಟಕ. 2) ವಿ.ಕೆ.ಎಂ. ಅರ್ಪಿಸುವ ರಂಗಸೇತುವೆ ಟ್ರಸ್ಟ್ ಬೆಂಗಳೂರು ಅಭಿನಯಿಸುವ, ಡಾ. ಪ್ರಭುಶಂಕರ ರಚನೆಯ ಐ.ಟಿ.ಐ. ರಾಮಮೂರ್ತಿ ಸಂಗೀತ ಮತ್ತು ನಿರ್ದೇಶನದಲ್ಲಿ ‘ಅಂಗುಲೀಮಾಲ’ ಕನ್ನಡ ನಾಟಕ. 3) ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ಅಭಿನಯಿಸುವ ಸಿ.ಎಂ.ಟಿ. ನಿರ್ದೇಶನದಲ್ಲಿ ಬೇಲೂರು ಕೃಷ್ಣಮೂರ್ತಿಯವರ’ ಲಚ್ಚಿ’ ಸಾಮಾಜಿಕ ನಾಟಕ. 4) ರಂಗ ಪರಿಸರ ಧಾರವಾಡ ಅಭಿನಯಿಸುವ ವಿಠಲ್ ಕೊಪ್ಪದ್ ನಿರ್ದೇಶನದಲ್ಲಿ ‘ಖರೇ ಖರೇ ಸಂಗ್ಯಾ ಬಾಳ್ಯ’ – ನಾಟಕ ಹಾಗೂ ಭರತನಾಟ್ಯ, 5) ಬೆಂಗಳೂರಿನ ಕೆ.ಆರ್. ಪುರಂ ಇಲ್ಲಿರುವ ಜ್ಞಾನವಿ ಸಂಗೀತ ವಿದ್ಯಾಲಯದವರಿಂದ ‘ಸಂಗೀತ ಮತ್ತು ಭರತನಾಟ್ಯ’, 6) ಬೆಂಗಳೂರಿನ ಲಕ್ಷ್ಮಣ ಸುವರ್ಣ ಇವರಿಂದ ಸುಗಮ ಸಂಗೀತ ಕಾರ್ಯಕ್ರಮಗಳನ್ನು ಸಾದರಪಡಿಸಲಿದ್ದಾರೆ.

    ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ಇದರ ಸಂಸ್ಥಾಪಕರಾದ ಸಿ.ಎಂ. ತಿಮ್ಮಯ್ಯ ಅವರು ಗಡಿನಾಡು, ಹೊರನಾಡು ಮತ್ತು ವಿವಿಧ ರಾಜ್ಯಗಳಲ್ಲಿ ವರ್ಷಂಪ್ರತಿ ನೂರಾರು ನಾಟಕ ಮತ್ತು ಸಾಂಸ್ಕೃತಿಕ ಉತ್ಸವಗಳನ್ನು ಸಂಘಟಿಸಿ ಕರ್ನಾಟಕ ರಾಜ್ಯದಿಂದ ವಿವಿಧ ನಾಟಕ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆಗಳ ಕಾರ್ಯಕ್ರಮಗಳನ್ನು ತಮ್ಮ ನೇತೃತ್ವದಲ್ಲಿ ಸಾಂಸ್ಕೃತಿಕ ನಿಯೋಗದೊಂದಿಗೆ ಕೊಂಡೊಯ್ಯುತ್ತಿದ್ದಾರೆ. ಸಿ.ಎಂ. ತಿಮ್ಮಯ್ಯರವರಿಗೆ 2025ರ ಅವಧಿಯ ಕರ್ನಾಟಕ ರಾಜ್ಯದ ಪ್ರತಿಷ್ಠಿತ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲ್ಪಡಲು ಈಗಾಗಲೇ ವಿವಿಧ ಸಂಘ-ಸಂಸ್ಥೆಗಳು ಶಿಫಾರಸ್ಸು ಮಾಡುತ್ತಿದ್ದಾರೆ. ಸಿ.ಎಂ. ತಿಮ್ಮಯ್ಯ ಬೆಂಗಳೂರು ಅವರಿಗೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರತಿಷ್ಠಿತ ಕೇರಳ ರಾಜ್ಯ ಮಟ್ಟದ ವಿಶ್ವರಂಗ ಭೂಮಿ ದಿನಾಚರಣೆ ಪ್ರಶಸ್ತಿ – 2025 ನೀಡಿ ಗೌರವಿಸಲಾಗುವುದು.

    ವಿಶ್ವರಂಗ ಭೂಮಿ ದಿನಾಚರಣೆಯ ಅಂಗವಾಗಿ ಕಾಸರಗೋಡು ಬೆಂಗಳೂರು ಕನ್ನಡ ನಾಟಕೋತ್ಸವ ಮತ್ತು ಗಡಿನಾಡ ಉತ್ಸವದಲ್ಲಿ 100 ಮಂದಿ ಗಾಯಕ, ಗಾಯಕಿಯರಿಂದ ಏಕಕಂಠ ಗಾಯನ, ನೂರಾರು ಗಾಯಕ ಗಾಯಕಿಯರಿಂದ ಏಕಕಾಲದಲ್ಲಿ ಸಮೂಹ ಕನ್ನಡ ನಾಡ ಗೀತಾಗಾಯನ, ರೈತ ಗೀತಾಗಾಯನ, ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಕನ್ನಡ ಚಿತ್ರ ಗೀತಾ ಗಾಯನವನ್ನು ಏರ್ಪಡಿಸಲಾಗಿದೆ. ಕಾಸರಗೋಡು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಯ ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕರು, ಗಾಯಕರು ಏಕಕಂಠ ಗಾಯನದಲ್ಲಿ ಜೊತೆಗೂಡಿ ಭಾಗವಹಿಸಲಿದ್ದಾರೆ.

    ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 27 ಮಾರ್ಚ್ 2025ರಂದು ಬೆಳಿಗ್ಗೆ 9-00 ಗಂಟೆಯಿಂದ ಸಂಜೆ 4-00 ಗಂಟೆಯವರೆಗೆ ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ-2025 ಕಾರ್ಯಕ್ರಮಗಳು ನಡೆಯಲಿದೆ. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ, ಮೈಸೂರು, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಮಂಗಳೂರು ಇದರ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕನ್ನಡ ಗ್ರಾಮ, ಕಾಸರಗೋಡು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ಮತ್ತು ವಿವಿಧ ಕನ್ನಡ ಸಂಘಟನೆಗಳು ಸಹಕಾರ ನೀಡಲಿದೆ.

    ಸಂಪರ್ಕ ವಿಳಾಸ :
    ಸಿ.ಎಂ. ತಿಮ್ಮಯ್ಯ, ಸಂಸ್ಥಾಪಕರು – ಪ್ರಧಾನ ಕಾರ್ಯದರ್ಶಿ ವಿ.ಕೆ.ಎಂ. ಕಲಾವಿದರು (ರಿ.), ನಂ. 21, ಜಗಜೀವನ ರಾಂನಗರ (ದಕ್ಷಿಣ), 4ನೇ ಕ್ರಾಸ್, ಬೆಂಗಳೂರು-560018. ಮೊಬೈಲ್ :-9741460396
    ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಕರ್ನಾಟಕ ರಾಜ್ಯ, ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕೇರಳ ರಾಜ್ಯ ದಾಸ ಸಾಹಿತ್ಯ ಪರಿಷತ್ತು, ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ, ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ ಕಾಸರಗೋಡು -671121, ಮೊಬೈಲ್ : 9448572016, 9901951965

    Share. Facebook Twitter Pinterest LinkedIn Tumblr WhatsApp Email
    Previous Articleಕುಂದಾಪುರ ಬೋರ್ಡ್ ಹೈಸ್ಕೂಲ್ ಕಲಾಮಂದಿರದಲ್ಲಿ ‘ತಿಂಡಿಗೆ ಬಂದ ತುಂಡೇರಾಯ’ ನಾಟಕ ಪ್ರದರ್ಶನ | ಜನವರಿ 18
    Next Article ಗಂಗೊಳ್ಳಿಯಲ್ಲಿ ಕುಮಾರವ್ಯಾಸ ಸ್ಮೃತಿ ಹಾಗೂ ಗಮಕ ಪ್ರಾತ್ಯಕ್ಷಿಕೆ
    roovari

    Add Comment Cancel Reply


    Related Posts

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    “ಭಜನೆಯಿಂದ ಮನಶಾಂತಿ” – ಪ್ರಭಾಕರ್ ಜೀ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    ಬ್ಯಾರಿ ಜಾನಪದ ಕಥೆಗಳ ಇಂಗ್ಲೀಷ್ ಅನುವಾದಿತ ಕೃತಿ ಬಿಡುಗಡೆ

    May 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.