Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೇಖಕ ಸಾಹಿತಿ ಪತ್ರಕರ್ತ ಶೇಖರ್ ಅಜೆಕಾರು ನಿಧನ 
    Literature

    ಲೇಖಕ ಸಾಹಿತಿ ಪತ್ರಕರ್ತ ಶೇಖರ್ ಅಜೆಕಾರು ನಿಧನ 

    October 31, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ  : ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದ ನಿವಾಸಿ ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು ಹೃದಯಾಘಾತದಿಂದ ದಿನಾಂಕ 31-10-2023ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಶೇಖರ್ ಅಜೆಕಾರ್ ಇವರಿಗೆ ಮಕ್ಕಳ ಸಾಹಿತ್ಯದ ಬಗ್ಗೆ ಆಸಕ್ತಿ ಇದ್ದು, ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು. ಇವರು ಪತ್ನಿ, ಓರ್ವ ಮಗ, ಓರ್ವ ಮಗಳನ್ನು ಅಗಲಿದ್ದಾರೆ.

    ಅಜೆಕಾರಿನಂತಹ ಸಣ್ಣ ಗ್ರಾಮದಲ್ಲಿ ಜನಿಸಿ ಮುಂಬಯಿಯಂತಹ ಬೃಹತ್ ನಗರದಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಡಿಪ್ಲೋಮಾವನ್ನು ಪೂರೈಸಿ ‘ಹರಿಕೃಷ್ಣ ಪುನರೂರು-ಕನ್ನಡದ ಕೆಲಸಗಳು ಒಂದು ಅಧ್ಯಯನ’ ಎಂಬ ವಿಷಯದಲ್ಲಿ ಎಂ.ಫಿಲ್ ಪದವಿ ಮುಗಿಸಿ, ಅಲ್ಲಿಯೇ ಪತ್ರಕರ್ತರಾಗಿ ಕಾರ‍್ಯಾರಂಭಿಸಿ, ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಉಪ ಸಂಪಾದಕರಾಗಿದ್ದರು.

    ಇವರ ಆಸಕ್ತಿಯ ಕ್ಷೇತ್ರಗಳು ಹಲವು. ವೃತ್ತಿಯಲ್ಲಿ ಪತ್ರಿಕೋದ್ಯಮಿಯಾಗಿ ಕನ್ನಡದ ಹಲವು ಪತ್ರಿಕೆಗಳ ಹಲವು ಮಜಲುಗಳಲ್ಲಿ ದುಡಿದು ಸೈಯೆನಿಸಿಕೊಂಡಿದ್ದಾರೆ. ಹವ್ಯಾಸಿ ಛಾಯಾಚಿತ್ರಕಾರರಾದ ಅವರ ಹಲವು ಉತ್ತಮ ಚಿತ್ರಗಳು ಪತ್ರಿಕೆಗಳ ಮುಖಪುಟವನ್ನು ಅಲಂಕರಿಸಿವೆ. ಮತ್ತು ಸರ್ವಜನಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನಗೊಂಡಿವೆ. ಕಂಪ್ಯೂಟರೀಕೃತ ಛಾಯಾಚಿತ್ರ ಪ್ರದರ್ಶನವೆಂಬ ವಿಶಿಷ್ಟ ಪ್ರಯೋಗವನ್ನು ಅವರು ಮಾಡಿದ್ದಾರೆ. ಕನ್ನಡದ ಪ್ರಸಿದ್ಧ ಕವಿಗಳ ಗೀತೆಗಳಿಗೆ ಯಕ್ಷಗಾನ ಸಂಗೀತವನ್ನು ಅಳವಡಿಸಿ, ಪ್ರದರ್ಶಿಸಿ ಮೆಚ್ಚುಗೆಗಳಿಸಿದ್ದಾರೆ.

    ಕನ್ನಡ ಕಿರುಚಿತ್ರಗಳಿಗೆ ವೇದಿಕೆಯಾಗುವಂತೆ ‘ಕರ್ನಾಟಕ ಮಿನಿ ಚಲನ ಚಿತ್ರೋತ್ಸವ’ವನ್ನು ವಿವಿಧೆಡೆಗಳಲ್ಲಿ ನಡೆಸಿಕೊಟ್ಟು ಸಿನಿಮಾ ದಿಗ್ಗಜರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸುಮಾರು 20ವರ್ಷಗಳ ಹಿಂದೆಯೇ ಆದಿಗ್ರಾಮೋತ್ಸವ ಪರಿಕಲ್ಪನೆಯಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸಿದ್ದು, ಮೊತ್ತಮೊದಲ ಬಾರಿಗೆ ಹೋಟೆಲ್ ಕಾರ್ಮಿಕರಿಗಾಗಿ ಮುಂಬೈಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿದ್ದು,  ಮುಂಬಯಿಯ ಪೊವಾಯಿಯಲ್ಲಿ ಕನ್ನಡ ಸಂಘ ಸ್ಥಾಪನೆ ಮಾಡಿದ್ದು ಇವೆಲ್ಲದರಲ್ಲಿ  ಅವರ ಸಾಮಾಜಿ ಕಾಳಜಿ ಹಾಗೂ ನಾಡುನುಡಿ ಪ್ರೇಮ ವ್ಯಕ್ತವಾಗುತ್ತದೆ.

    ‘ಬೆಳದಿಂಗಳ ಸಾಹಿತ್ಯ ಸಮ್ಮೇಳನ’ವೆಂಬ ವಿನೂತನ ಪರಿಕಲ್ಪನೆಯಲ್ಲಿ ಒಂದು ರಾತ್ರಿಯ ಸಾಹಿತ್ಯ ಸಮ್ಮೇಳನ ನಡೆಸಿ ಕನ್ನಡ ವಿದ್ವತ್‌ ಪ್ರಪಂಚದಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರು ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ಸಂಬಂಧಿಸಿ 5 ಕೃತಿಗಳ ರಚನೆ ಮಾಡಿ ಕಂಬಳ ಕ್ರೀಡಾಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದಾರೆ. ಇವೆಲ್ಲವೂ ಸಣ್ಣಪುಟ್ಟ ಕಾರ್ಯಕ್ರಮಗಳಾದರೂ ಹೊಸತನ ಮತ್ತು ನಿರ್ದಿಷ್ಟ ಉದ್ದೇಶದಿಂದ ಅವೆಲ್ಲವುಗಳಿಗೂ ಶ್ರೇಷ್ಠತ್ವ ಪ್ರಾಪ್ತಿಯಾಗಿವೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನ ಗೆಜ್ಜೆಗಿರಿಯಲ್ಲಿ ಶ್ರೀ ಗೆಜ್ಜೆಗಿರಿ ಮೇಳದ ಪ್ರಥಮ ಸೇವೆಯಾಟ | ನವೆಂಬರ್ 16ರಂದು  
    Next Article ‘ಅರಿಷಡ್ವೈರಿಗಳ ಗೊಂದಲಾಪುರದಾಚೆ’ – ಚಿಂತನ ಸಂಕಲನದ ಲೋಕಾರ್ಪಣೆ | ನವೆಂಬರ್ 4ರಂದು 
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಕೇಳು ಪಾಪಕ್ಕ’

    May 23, 2025

    ‘ಮಲೆಯಾಳದ ಆಧುನಿಕ ಸಣ್ಣ ಕಥೆಗಳು’ ಅನುವಾದಿತ ಕೃತಿ ಲೋಕಾರ್ಪಣೆ

    May 23, 2025

    ಉಡುಪಿಯ ರವೀಂದ್ರ ಮಂಟಪದಲ್ಲಿ ‘ಸಾಮರಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ | ಮೇ 24

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.