Subscribe to Updates

    Get the latest creative news from FooBar about art, design and business.

    What's Hot

    ಲೋಕಾರ್ಪಣೆಗೊಂಡ “ನದಿ ತಟದ ವೃಕ್ಷ” ಕವನ ಸಂಕಲನ

    June 25, 2025

    ಮಂಗಳೂರು ವಿ. ವಿ. ಯಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 27

    June 25, 2025

    ಉದ್ಘಾಟನೆಗೊಂಡ ತುಳು ನಾಟಕ ಕಾರ್ಯಾಗಾರ

    June 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಲೋಕದ ಖ್ಯಾತ ಸಾಹಿತಿ ನಾ. ಡಿ’ಸೋಜ ಶ್ರದ್ಧಾಂಜಲಿ ಸಭೆ
    Commemoration

    ಕನ್ನಡ ಸಾಹಿತ್ಯ ಲೋಕದ ಖ್ಯಾತ ಸಾಹಿತಿ ನಾ. ಡಿ’ಸೋಜ ಶ್ರದ್ಧಾಂಜಲಿ ಸಭೆ

    January 8, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ದಿನಾಂಕ 5 ಜನವರಿ 2025ರಂದು ನಿಧನರಾದ ರಾಜ್ಯದ ಹಿರಿಯ ಸಾಹಿತಿ ಹಾಗೂ ಮಡಿಕೇರಿಯಲ್ಲಿ 2014ರಂದು ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾ. ಡಿಸೋಜ ಅವರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಿ ಸಂತಾಪ ಸೂಚಕ ಸಭೆಯು ಕನ್ನಡ ಸಾಹಿತ್ಯ ಪರಿಷತ್ ಮಡಿಕೇರಿ ವತಿಯಿಂದ ದಿನಾಂಕ 06 ಜನವರಿ 2025ರಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಸಭಾಂಗಣದಲ್ಲಿ ನಡೆಯಿತು.

    ಸಭೆಯಲ್ಲಿ ಸಾಹಿತಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾದ ಎಸ್. ಐ. ಮುನೀರ್ ಅಹಮದ್ ಮಾತನಾಡಿ “ಸಾಹಿತ್ಯ ಲೋಕ ಕಂಡಂತಹ ಸೃಜನಶೀಲ ಪರಿಸರ ಕಾಳಜಿಯುಳ್ಳ ಕಥೆಗಾರರೆನಿಸಿದ ನಾ. ಡಿಸೋಜಾ ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಸಾಹಿತ್ಯ ಕೃಷಿ ನಡೆಸಿದ್ದಾರೆ. ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿರುತ್ತಾರೆ. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತಾ ಬಂದಿದ್ದರು.” ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ಎಂ. ಪಿ. ಕೇಶವ ಕಾಮತ್ ಮಾತನಾಡಿ “40ಕ್ಕೂ ಅಧಿಕ ಕಾದಂಬರಿ, ಕಥೆ, ಕವನ ಸಂಕಲನ ರಚಿಸಿದ್ದ ಡಿ’ಸೋಜ ಶಿವಮೊಗ್ಗ ಜಿಲ್ಲೆಯ ಸಾಗರದವರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಸಾಹಿತ್ಯ ಲೋಕದ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಇವರಿಗೆ ಲಭಿಸಿದೆ ಮಡಿಕೇರಿಯಲ್ಲಿ 2014ರಲ್ಲಿ ಆಯೋಜಿತವಾಗಿದ್ದ 80ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಯಶಸ್ವಿ ಸಮ್ಮೇಳನಕ್ಕೆ ಕಾರಣಕರ್ತರಾಗಿದ್ದರು. ಅವರ ಹೆಸರಿನಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನೆನಪಿಗೋಸ್ಕರ ದತ್ತಿ ನಿಧಿ ಸ್ಥಾಪಿಸಿದ್ದು, ಮಕ್ಕಳ ಕಥೆ ನಾಟಕ ಸಂಬಂಧಿಸಿದಂತೆ ಈಗ 10 ವರ್ಷಗಳಿಂದ ದತ್ತಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ.” ಎಂದರು.

    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀಮತಿ ರೇವತಿ ರಮೇಶ್, ಗೌರವ ಕೋಶಾಧಿಕಾರಿಗಳಾದ ಎಸ್. ಎಸ್. ಸಂಪತ್ ಕುಮಾರ್, ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಹೋಬಳಿ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ನಿರ್ದೇಶಕರುಗಳಾದ ಕೆ. ಟಿ. ಬೇಬಿ ಮ್ಯಾಥ್ಯು, ಸುನೀತಾ ಪ್ರೀತು, ಮಡಿಕೇರಿ ತಾಲೂಕು ನಿಕಟ ಪೂರ್ವ ಅಧ್ಯಕ್ಷರಾದ ಅಂಬೆಕಲ್ ನವೀನ್, ಅಹಿಂದ ಒಕ್ಕೂಟದ ಅಧ್ಯಕ್ಷರಾದ ಟಿ. ಎಂ. ಮುದ್ದಯ್ಯ, ಶಿಕ್ಷಣ ಇಲಾಖೆಯ ಗುರುರಾಜ್ ಕೆ. ಪಿ., ಎಂ. ಕೃಷ್ಣಪ್ಪ, ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ , ಸಾಹಿತಿಗಳಾದ ಡಾ.ಜೆ ಸೋಮಣ್ಣ, ಸರ್ಕಾರಿ ಪ್ರೌಢಶಾಲಾ ಮುಖ್ಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಶಿಕಲಾ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಶೀಲ ಮಡಿಕೇರಿಯ ನಗರದ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕರು ಹಾಗೂ ಸಾಹಿತ್ಯ ಪರಿಷತ್ ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.

    commemoration Literature
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ಮೇರು ಪಾಂಡಿತ್ಯದ ಕಲಾವಿದ ಪಂಡಿತ್ ಆರ್. ಕೆ. ಬಿಜಾಪುರೆ
    Next Article ಪರಿಚಯ ಲೇಖನ | ‘ಯಕ್ಷ ದಂಪತಿ’ ಶ್ರೀಮತಿ ವಿದ್ಯಾ ಮತ್ತು ಶ್ರೀ ಆನಂದ ಭಟ್ ಕೆಕ್ಕಾರು
    roovari

    Add Comment Cancel Reply


    Related Posts

    ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26

    June 25, 2025

    Book Review | ‘The Aquarium’

    June 25, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ‘ವಾಚನ ವಾರಾಚರಣೆ ಸಮಾರಂಭ’ | ಜೂನ್ 27

    June 25, 2025

    ಧಾರವಾಡದ ಮನೋಹರ ಗ್ರಂಥ ಮಾಲಾದಲ್ಲಿ ದತ್ತಿ ಉಪನ್ಯಾಸ | ಜೂನ್ 26

    June 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.