Subscribe to Updates

    Get the latest creative news from FooBar about art, design and business.

    What's Hot

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ
    Literature

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ, ಕಥೆಗಾರ, ಸಂಭಾಷಣಕಾರ ಎಚ್. ಎಸ್. ವೆಂಕಟೇಶಮೂರ್ತಿ ದಿನಾಂಕ 30 ಮೇ 2025ರ ಶುಕ್ರವಾರ ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
    1944ರ ಜೂನ್ 23ರಂದು ವೆಂಕಟೇಶಮೂರ್ತಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆ ಎಂಬ ಹಳ್ಳಿಯಲ್ಲಿ ಜನಿಸಿದರು. ಅವರದ್ದು ಮಧ್ಯಮವರ್ಗದ ಕುಟುಂಬ. ಇವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿ. ಎ. ಪದವಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎ ಪದವಿ ಪಡೆದರು. ‘ಕನ್ನಡದಲ್ಲಿ ಕಥನ ಕವನಗಳು’ ಮಹಾಪ್ರಬಂಧ ಮಂಡಿಸಿ ಪಿಎಚ್.ಡಿ. ಪದವಿ ಪಡೆದರು. 1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ನೇಮಕ ಆದರು. 2000ರಲ್ಲಿ ಅವರು ನಿವೃತ್ತಿ ಹೊಂದಿದರು. ಆ ಬಳಿಕವೂ ಬೆಂಗಳೂರನಲ್ಲೇ ನೆಲಿಸಿದ್ದ ಅವರು, ಬರಹ ಕೃಷಿಯಲ್ಲಿ ತೊಡಗಿಕೊಂಡಿದ್ದರು.
    ವೆಂಕಟೇಶಮೂರ್ತಿ ಅವರಿಗೆ ಬಣ್ಣದ ಲೋಕದ ಮೇಲೆ ಒಲವು ಮೂಡಲು ಕಾರಣ ಆಗಿದ್ದು ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು. ಅವರು ಬಾಲ್ಯದಲ್ಲಿ ಇದ್ದಾಗ ಸಾಕಷ್ಟು ಕೃತಿಗಳನ್ನು ಅವರು ಓದುತ್ತಿದ್ದರು. ಅವರು ಕವಿಯಾಗಿ, ನಾಟಕಕಾರನಗಿಯೂ ಗುರುತಿಸಿಕೊಂಡಿದ್ದಾರೆ.
    ಕನ್ನಡ ಅಧ್ಯಾಪಕರಾಗಿದ್ದ ನರಸಿಂಹ ಶಾಸ್ತ್ರಿಗಳು ವೆಂಕಟೇಶಮೂರ್ತಿ ಮೇಲೆ ಸಾಕಷ್ಟು ಪ್ರಭಾವ ಬೀರಿದರು. ತಮ್ಮ ಬಳಿಯಿದ್ದ ಕುವೆಂಪು, ಬೇಂದ್ರೆ, ಗೋರೂರು, ಮಾಸ್ತಿ, ಕಾರಂತ ಮೊದಲಾದವರ ಕೃತಿಗಳನ್ನು ಮೂರ್ತಿಯವರಿಗೆ ನೀಡಿದರು. ತಾವು ಬರೆದ ಮೊದಲ ಕವನ ಸಂಕಲನ ‘ಪರಿವೃತ್ತ’ವನ್ನು ವೆಂಕಟೇಶಮೂರ್ತಿ ಅವರು ನರಸಿಂಹ ಶಾಸ್ತ್ರಿಗಳಿಗೆ ಅರ್ಪಿಸಿದ್ದಾರೆ.
    ‘ಪರಿವೃತ್ತ’, ‘ಬಾಗಿಲು ಬಡಿವ ಜನಗಳು’ ಸೇರಿದಂತೆ 15ಕ್ಕೂ ಹೆಚ್ಚು ಕವನ ಸಂಕಲಗಳನ್ನು ಅವರು ರಚಿಸಿದ್ದಾರೆ. ‘ಬಾನಸವಾಡಿಯ ಬೆಂಕಿ’, ‘ಪುಟ್ಟಾರಿಯ ಮತಾಂತರ’ ಕಥಾ ಸಂಕಲನ ಇವರಿಂದ ರಚಿತವಾಗಿದೆ. ‘ತಾಪಿ’, ‘ಅಮಾನುಷರು’, ‘ಕದಿರಿನ ಕೋಟೆ’, ‘ಅಗ್ನಿಮುಖಿ’ ಇವರಿಂದ ರಚಿತವಾದ ಕಾದಂಬರಿಗಳು.
    ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ‘ಚಿನ್ನಾರಿ ಮುತ್ತ’ಗೆ ಇವರೇ ಕಥೆ, ಸಂಭಾಷಣೆ ಹಾಗೂ ಎಲ್ಲಾ ಹಾಡುಗಳನ್ನು ಬರೆದಿದ್ದರು. ‘ಅಮೆರಿಕ ಅಮೆರಿಕ’ ಚಿತ್ರದ ‘ಬಾನಲ್ಲಿ ಓಡೋ ಮೋಡ..’ ಹಾಡು ಇವರ ಬರಹದಲ್ಲೇ ಮೂಡಿ ಬಂದಿದೆ. ಪುನೀತ್ ನಟನೆಯ ‘ಮೈತ್ರಿ’ ಚಿತ್ರಕ್ಕೆ ಹಾಡು ಬರೆದಿದ್ದರು. ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ತೂಗು ಮಂಚದಲ್ಲಿ ಕೂತು..’ ಇವರೇ ಬರೆದ ಹಾಡು.
    ಮಕ್ಕಳು, ಯುವಕರು ಮತ್ತು ಮಹಿಳೆಯರಿಗೆ ಬೇಕಾದ ಗೀತೆಗಳನ್ನು ರಚಿಸಿ, ಕವಿಯಾಗಿ ಗುರುತಿಸಿಕೊಂಡಿದ್ದಾರೆ. ಇವರು 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. ‘ಮುಕ್ತ’ ಧಾರಾವಾಹಿಯ ಟೈಟಲ್ ಸಾಂಗ್ ಸಾಕಷ್ಟು ಜನಪ್ರಿಯತೆ ಪಡೆದಿದೆ. ಇದನ್ನು ವೆಂಕಟೇಶಮೂರ್ತಿ ಅವರೇ ರಚಿಸಿದ್ದಾರೆ. ಸಾಹಿತ್ಯ ಲೋಕ ಹಾಗೂ ಚಿತ್ರ ಲೋಕಕ್ಕೆ ಕೊಡುಗೆಯನ್ನು ಗಮನಿಸಿ ಕೆಲವು ಪ್ರಶಸ್ತಿಗಳು ಕೂಡ ಲಭ್ಯವಾಗಿವೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31
    Next Article ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.