Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭಾಸ್ಕರ ಬಾರ್ಯರಿಗೆ ಯಕ್ಷ ಭಾರತಿ ಪ್ರಶಸ್ತಿ ಪ್ರದಾನ
    Awards

    ಭಾಸ್ಕರ ಬಾರ್ಯರಿಗೆ ಯಕ್ಷ ಭಾರತಿ ಪ್ರಶಸ್ತಿ ಪ್ರದಾನ

    September 16, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಜಿರೆ: ಯಕ್ಷ ಭಾರತಿ ಕನ್ಯಾಡಿ (ರಿ)ಬೆಳ್ತಂಗಡಿ ಇದರ 9ನೇ ವಾರ್ಷಿಕೋತ್ಸವು ದಿನಾಂಕ 10-09 2023 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರು ಬೊಳುವಾರಿನ ಆಂಜನೇಯ  ಯಕ್ಷಗಾನ ಕಲಾ ಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಇವರಿಗೆ ಯಕ್ಷಭಾರತಿ ಪ್ರಶಸ್ತಿ 2023 ಪ್ರದಾನ ಮಾಡಿ ಗೌರವಿಸಲಾಯಿತು. ಯಕ್ಷ ಭಾರತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಅಭಿನಂದನ ನುಡಿಗಳನ್ನಾಡಿದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀಯುತರು “ಯಕ್ಷಗಾನ ನನ್ನ ಉಸಿರು, ಇದು ಬರೀ ಮನೋರಂಜನೆ ಅಲ್ಲ ಇದು ಮನಃ ಪರಿವರ್ತನೆಗೊಳ್ಳುವ ವಿಧಾನ. ಇತ್ತೀಚೆಗಿನ ದಿನಗಳಲ್ಲಿ ಅಧಿಕವಾದ ನೃತ್ಯ, ಭಾಗವತರು ಇನ್ನೊಬ್ಬರ ಅನುಕರಣೆ ಮಾಡುವ ಮೂಲಕ ಚಪ್ಪಾಳೆ ಗಿಟ್ಟಿಸಿಕೊಳ್ಳುವ ಸನ್ನಿವೇಶಗಳು ಬಹಳ ಬೇಸರವನ್ನುಂಟುಮಾಡಿದೆ. ನಾವು ಒಂದು ಮೂರ್ತಿಯನ್ನು ಕಂಡಾಗ ಹೇಗೆ ಅದನ್ನು ಪೂಜಿಸುತ್ತೇವೆಯೋ, ಹಾಗೆಯೇ ಅಂತಹ ದೇವರ ಪುರಾಣಗಳನ್ನು ಜನರಿಗೆ ತಲುಪಿಸುವ ಸನಾತನ ಧರ್ಮದ ಒಂದು ಭಾಗ ನಾವು. ಇದನ್ನು ಹಿಂದಿನಿಂದ ಹಾಗೂ ಪ್ರತ್ಯಕ್ಷದರ್ಶಿಗಳಾಗಿ ಗಮನಿಸುವ ಜನರಿದ್ದಾರೆ. ಜೊತೆಗೆ ಮಕ್ಕಳು ಇವೆಲ್ಲವನ್ನೂ ಗಮನಿಸಿ ಮುಂದುವರಿಸಿಕೊಂಡು ಹೋಗುವವರಾಗಿದ್ದು ಅವರಿಗೆ ಸನಾತನ ಧರ್ಮದ ಎಚ್ಚರಿಕೆಯನ್ನು ನೀಡುವ ಜವಾಬ್ದಾರಿ ಕಲಾವಿದರ ಮೇಲಿದೆ.” ಎಂದು ಹೇಳಿದರು.

    ಸಮಾರಂಭದ ಅಧ್ಯಕ್ಷತೆಯನ್ನು ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಕಲಾಪೋಷಕ ಶ್ರೀಪತಿ ಭಟ್ ಮೂಡಬಿದಿರೆ, ನ್ಯಾಯವಾದಿ ಧನಂಜಯ ರಾವ್ ಬೆಳ್ತಂಗಡಿ, ಸುಬ್ರಹ್ಮಣ್ಯ ಭಟ್ ಅರ್ಚಕರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಲಂಂಗಾರು ಮತ್ತು ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ಘಟಕದಿಂದ ಕಟೇಲಿನಲ್ಲಿ ಹಿರೇಮಗಳೂರು ಕಣ್ಣನ್ ಜೊತೆ ಹರಟೆ 
    Next Article ಉಡುಪಿಯಲ್ಲಿ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ‘ಕಿಶೋರ ಪ್ರತಿಭೋತ್ಸವ 2023’
    roovari

    Add Comment Cancel Reply


    Related Posts

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ತಾಳಮದ್ದಳೆ ಜ್ಞಾನಯಜ್ಞ’ | ಮೇ 26

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.