Subscribe to Updates

    Get the latest creative news from FooBar about art, design and business.

    What's Hot

    ಪ್ರಸಿದ್ಧ ಚಿತ್ರಕಲಾವಿದ ಸಯ್ಯದ್ ಆಸಿಫ್ ಅಲಿ ಇನ್ನಿಲ್ಲ

    January 6, 2026

    ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ವಿದುಷಿ ದೀಕ್ಷಾ ರಾಮಕೃಷ್ಣ

    January 6, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್, ಸರಪಾಡಿ ಘಟಕದ ವಾರ್ಷಿಕೋತ್ಸವ ಹಾಗೂ ಯಕ್ಷಗಾನ ಸಾಧಕರಿಗೆ ಸನ್ಮಾನ
    Yakshagana

    ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್, ಸರಪಾಡಿ ಘಟಕದ ವಾರ್ಷಿಕೋತ್ಸವ ಹಾಗೂ ಯಕ್ಷಗಾನ ಸಾಧಕರಿಗೆ ಸನ್ಮಾನ

    April 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್, ಸರಪಾಡಿ ಘಟಕ ಸಮಿತಿ ವತಿಯಿಂದ 6ನೇ ವಾರ್ಷಿಕೋತ್ಸವ ಕಾರ್ಯಕ್ರಮ ದಿನಾಂಕ 18-04-2023 ಮಂಗಳವಾರದಂದು ಬಂಟ್ವಾಳ ತಾಲೂಕಿನ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು.

    ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಭಾಗವತ ಸತೀಶ್ ಶೆಟ್ಟಿ ಪಟ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಯಕ್ಷಗಾನ ಕಲಾವಿದರ ಬೆಳವಣಿಗೆಗೆ ಸರಪಾಡಿಯ ಕೊಡುಗೆ ಮಹತ್ತರವಾಗಿದೆ. ಕಲಾಭಿಮಾನಿಗಳ ಪ್ರೀತಿ, ಪ್ರೋತ್ಸಾಹದಿಂದ ಯಕ್ಷಗಾನ ಬೆಳೆಯಲು ಸಾಧ್ಯವಾಗಿದೆ” ಎಂದರು.

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಮಾತನಾಡಿ, “ಸತೀಶ್ ಶೆಟ್ಟಿ ಪಟ್ಲ ಅವರ ನೇತೃತ್ವದಲ್ಲಿ ಯಕ್ಷಗಾನ ಕಲಾವಿದರಿಗೆ ಭರವಸೆಯ ಬೆಳಕು ನೀಡಿ ಮುನ್ನಡೆಸುವ ಕಾರ್ಯ ಮಾಡುತ್ತಿರುವ ಯಕ್ಷಧ್ರುವ ಪಟ್ಟ ಫೌಂಡೇಶನ್ ಕಾರ್ಯ ಮಾದರಿಯಾಗಿದೆ” ಎಂದರು.

    ಇದೇ ಸಂದರ್ಭದಲ್ಲಿ ಯಕ್ಷಗಾನ ಸಾಧಕರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಶ್ರೀ ಅಶೋಕ್ ಶೆಟ್ಟಿ ಸರಪಾಡಿ, ಯಕ್ಷಗಾನ ಕಲಾವಿದ ಶ್ರೀ ದಿನೇಶ ಶೆಟ್ಟಿ ಕಾವಳಕಟ್ಟೆ ಮತ್ತು ಯಕ್ಷಾಭಿಮಾನಿ ಶ್ರೀಮತಿ ಗೋಪಿ ಮುನ್ನಲಾಯಿಪದವು ಅವರನ್ನು ಸನ್ಮಾನಿಸಲಾಯಿತು.

    ಸರಪಾಡಿ ಘಟಕ ಅಧ್ಯಕ್ಷ ಶಶಿಕಾಂತ ಶೆಟ್ಟಿ ಆರುಮುಡಿ, ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನ ಆಡಳಿತ ಟ್ರಸ್ಟ್ ಸಂಚಾಲಕ ಸಂಪತ್‌ ಕುಮಾರ್ ಶೆಟ್ಟಿ ಮುಂಡ್ರೇಲ್‌ ಗುತ್ತು, ಟ್ರಸ್ಟಿ ಶಿವಪ್ಪ ಪೂಜಾರಿ ಹಟದಡ್ಕ, ಭಾರತಿ ಅಮ್ಮ, ಶಿವಪ್ಪ ಪೂಜಾರಿ ಜೇಡರಬೆಟ್ಟು, ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಶೆಟ್ಟಿ, ಉದ್ಯಮಿ ಗಣೇಶ್ ಆಚಾರ್ಯ ಹಾಗೂ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಘಟಕ ಕಾರ್ಯದರ್ಶಿ ಧನಂಜಯ ಶೆಟ್ಟಿ ಎನ್. ಸ್ವಾಗತಿಸಿ, ನಿರೂಪಿಸಿದರು. ಸಂಯೋಜಕ ಡಾ. ಬಾಲಚಂದ್ರ ಶೆಟ್ಟಿ ವಂದಿಸಿದರು. ಬಳಿಕ ಶ್ರೀ ಕ್ಷೇತ್ರ ಪಾವಂಜೆ ಮೇಳದವರಿಂದ ‘ಬಪ್ಪನಾಡು ಕ್ಷೇತ್ರ ಮಹಾತ್ಮೆ’ ಯಕ್ಷಗಾನ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ  ಜರಗಿದ ‘ತಾಳ ಕಾರ್ಯಾಗಾರ’
    Next Article ವಿಶ್ವ ಕಲಾ ದಿನ | ಬೆಂಗಳೂರಿನಲ್ಲಿ “ದಾಕಹವಿಸ” ಚಿತ್ರಕಲಾ ಪ್ರಾತ್ಯಕ್ಷಿಕೆ ಮತ್ತು ಸಂವಾದ
    roovari

    Add Comment Cancel Reply


    Related Posts

    ಅಮೃತ ಮಹೋತ್ಸವದ ಅಂಗವಾಗಿ ತಾಳಮದ್ದಳೆ ಹಾಗೂ ‘ವಿವೇಕ ಚಿಂತನ’ ಉಪನ್ಯಾಸ | ಜನವರಿ 11

    January 6, 2026

    ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರದಲ್ಲಿ ತಿಂಗಳ ಸರಣಿ

    January 6, 2026

    ಬೆಂಗಳೂರಿನ ಸ್ವಾಮಿ ವಿವೇಕಾನಂದ ಶತಾಬ್ಧಿ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ | ಜನವರಿ 07

    January 5, 2026

    ಇಡ್ಯಾದಲ್ಲಿ ‘ದಶಮಾನ ವರ್ಷ ಸಂಭ್ರಮಾಚರಣೆ’ಯ ಸಮಾರೋಪ ಸಮಾರಂಭ

    January 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.