Subscribe to Updates

    Get the latest creative news from FooBar about art, design and business.

    What's Hot

    ತೆಕ್ಕಟ್ಟೆ ಹಯಗ್ರೀವದಲ್ಲಿ ಸಂಭ್ರಮದಿಂದ ನಡೆದ 2ದಿನಗಳ ನಾಟಕೋತ್ಸವ

    June 11, 2025

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ಎಂ. ಲಕ್ಷ್ಮೀನಾರಾಯಣ ಭಟ್ ಇವರಿಗೆ ನುಡಿನಮನ

    June 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ ಗೋವಿಂದದಾಸ ಕಾಲೇಜ್‌ನಲ್ಲಿ ‘ಯಕ್ಷ ದ್ಯುತಿ’ ಅಭಿನಂದನಾ ಸಮಾರಂಭ.
    Kannada

    ಸುರತ್ಕಲ್ ಗೋವಿಂದದಾಸ ಕಾಲೇಜ್‌ನಲ್ಲಿ ‘ಯಕ್ಷ ದ್ಯುತಿ’ ಅಭಿನಂದನಾ ಸಮಾರಂಭ.

    January 28, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸುರತ್ಕಲ್ ಗೋವಿಂದದಾಸ ಕಾಲೇಜ್‌ನಲ್ಲಿ ‘ಯಕ್ಷ ದ್ಯುತಿ’ ಅಭಿನಂದನಾ ಸಮಿತಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈಯವರ 35 ವರುಷಗಳ ಯಕ್ಷಯಾನದ ಸಂಭ್ರಮ ‘ಯಕ್ಷದ್ಯುತಿ’ ಕಾರ್ಯಕ್ರಮವು ದಿನಾಂಕ 12 ಜನವರಿ 2025 ರಂದು ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಗುರುದೇವದತ್ತ ಸಂಸ್ಥಾನಮ್ ಒಡಿಯೂರು ಕ್ಷೇತ್ರದ ಶ್ರೀಗುರುದೇವಾನಂದ ಸ್ವಾಮಿಜಿ ಮಾತನಾಡಿ “ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಗಂಡುಕಲೆ. ಆದರೆ ಈಗ ಮಹಿಳೆಯರೂ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಯಕ್ಷಗಾನವನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದಾರೆ. ಯಕ್ಷಗಾನದ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ನಡೆಯಬೇಕಾಗಿದೆ. ಯಕ್ಷಗಾನದಿಂದ ಸಂಸ್ಕೃತಿ ಆಚಾರ, ವಿಚಾರಗಳನ್ನು ತಿಳಿಯಬಹುದಾಗಿದೆ” ಎಂದರು.

    ಸಮಾರಂಭದಲ್ಲಿ ಹರಿನಾರಾಯಣದಾಸ ಅಸ್ರಣ್ಣ, ನಾಗೇಂದ್ರ ಭಾರದ್ವಾಜ್, ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಭುಜಬಲಿ ಧರ್ಮಸ್ಥಳ, ಪಟ್ಲ ಸತೀಶ್ ಶೆಟ್ಟಿ, ಶ್ರೀಪತಿ ಭಟ್ ಮೂಡಬಿದ್ರೆ, ಸುಧಾಕರ ಪೂಂಜ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಯಶಸ್ವಿನಿ ಶೆಟ್ಟಿ, ಪುರಂದರ ರೈ ಮಿತ್ರಂಪಾಡಿ, ಚಿತ್ತರಂಜನ್‌ ರೈ ನುಳಿಯಾಲು, ದೇವಿಪ್ರಸಾದ್ ಶೆಟ್ಟಿ ಬೆಂಗಳೂರು, ಮೋಹನ್ ಕೊಪ್ಪಳ, ಮಾಧವ ಶೆಟ್ಟಿ ಬಾಳ ಮಂತಾದ ಗಣ್ಯರು ಉಪಸ್ಥಿತರಿದ್ದರು.

    ಸಮಾರಂಭದಲ್ಲಿ ಗೌರವ ಪುರಸ್ಕಾರ, ಪ್ರತಿಭಾ ಪುರಸ್ಕಾರ ನಡೆಯಿತು. ಯಕ್ಷಸಾಧಕಿ ಪೂರ್ಣಿಮಾ ಯತೀಶ್ ರೈ ದಂಪತಿಗಳನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಪೂರ್ಣಿಮಾ ಯತೀಶ್ ರೈ ಮಾತನಾಡಿ “ಕಳೆದ 35 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಬಣ್ಣ ಹಚ್ಚಿದ್ದೇನೆ. ಮನೆಯವರ ಸಹಕಾರದ ಜೊತೆಗೆ ಎಲ್ಲರ ಸಹಕಾರವೂ ದೊರೆತಿದೆ. ಇದಕ್ಕೆ ನಾನು ಯಾವತ್ತೂ ಚಿರಋಣಿ” ಎಂದರು.

    ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಐ. ರಮಾನಂದ ಭಟ್, ವೆಂಕಟರಮಣ ಅಸ್ರಣ್ಣ, ರಮೇಶ ಭಟ್, ಶಾಸಕ ಡಾ. ವೈ. ಭರತ್ ಶೆಟ್ಟಿ, ವರುಣ್ ಚೌಟ, ಹರಿಕೃಷ್ಣ ಪುನರೂರು, ಗಿರೀಶ್ ಎಂ. ಶೆಟ್ಟಿ ಕಟೀಲು, ವಾಸುದೇವ ಐತಾಳ್, ಡಾ. ಸತ್ಯಮೂರ್ತಿ, ಗುಣವತಿ ರಮೇಶ್, ಶ್ರೀರಂಗ ಹೊಸಬೆಟ್ಟು, ಬಾಳ ಜಗನ್ನಾಥ ಶೆಟ್ಟಿ, ಲಕ್ಷ್ಮೀ ಹರೀಶ್ ಶೆಟ್ಟಿ ಹಾಗೂ ಆರತಿ ಆಳ್ವ ಭಾಗವಹಿಸಿದ್ದರು. ಮಧ್ಯಾಹ್ನ ನಡೆದ ಗೌರವ ಪುರಸ್ಕಾರದಲ್ಲಿ ಶಿವರಾಮ ಪಣಂಬೂರು, ರಮೇಶ್‌ ಶೆಟ್ಟಿ ಬಾಯಾರು, ಹರಿನಾರಾಯಣ ಬೈಪಾಡಿತ್ತಾಯ, ಶಂಕರ ನಾರಾಯಣ ಮೈರ್ಪಾಡಿ ಇವರನ್ನು ಸನ್ಮಾನಿಸಲಾಯಿತು.

    ಲೀಲಾಧರ ಶೆಟ್ಟಿ ಕಟ್ಲ ಸ್ವಾಗತಿಸಿ, ಗಂಗಾಧರ ಪೂಜಾರಿ ಚೇಳಾ‌ರ್ ವಂದಿಸಿದರು. ರಾತ್ರಿ ಯಕ್ಷಪೂರ್ಣಿಮಾ ಶಿಷ್ಯವೃಂದದವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ನಡೆಯಿತು.

    kannada yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕುತ್ತಾರಿನಲ್ಲಿ ವಿಜೃಂಭಣೆಯಿಂದ ಜರಗಿದ ‘ಗುರುಕುಲ ಉತ್ಸವ -2025’
    Next Article ಸಾಗರದ ಪವಿತ್ರಾ ಸಭಾಂಗಣದಲ್ಲಿ ಪರಸ್ಪರ ಸಾಹಿತ್ಯ ವೇದಿಕೆಯ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ.
    roovari

    Add Comment Cancel Reply


    Related Posts

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ಜನ ಮೆಚ್ಚುಗೆಗೆ ಪಾತ್ರವಾದ ‘ಚಿಣ್ಣರ ಗಾನ ಸುಧೆ’

    June 11, 2025

    ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ | ಸೆಪ್ಟೆಂಬರ್ 15 ಕೊನೆಯ ದಿನಾಂಕ

    June 11, 2025

    ಕನ್ನಡ ಸಾಹಿತ್ಯ ಪರಿಷತ್ತಿನ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಮಿತ್ರಾ ವೆಂಕಟ್ರಾಜು ಆಯ್ಕೆ

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.