Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುಮನಸಾ ಕೊಡವೂರು ಸಂಸ್ಥೆಯ ರಂಗಹಬ್ಬದ 4ನೇ ದಿನದ ಕಾರ್ಯಕ್ರಮದಲ್ಲಿ ‘ಸಮುದ್ರೋಲ್ಲಂಘನ’ ಯಕ್ಷ ನಾಟಕ ಪ್ರದರ್ಶನ
    Drama

    ಸುಮನಸಾ ಕೊಡವೂರು ಸಂಸ್ಥೆಯ ರಂಗಹಬ್ಬದ 4ನೇ ದಿನದ ಕಾರ್ಯಕ್ರಮದಲ್ಲಿ ‘ಸಮುದ್ರೋಲ್ಲಂಘನ’ ಯಕ್ಷ ನಾಟಕ ಪ್ರದರ್ಶನ

    February 29, 2024Updated:March 1, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬದ 4ನೇ ದಿನದ ಕಾರ್ಯಕ್ರಮವು ದಿನಾಂಕ 28-02-2024ರಂದು ನಡೆಯಿತು. ಈ ದಿನದ ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎಲ್‌. ಸಾಮಗ ಅವರು ಮಾತನಾಡಿ “ಕಲಾಪ್ರಕಾರಗಳಲ್ಲಿ ನಾಟಕವೇ ಶ್ರೇಷ್ಠವಾದುದು. ಪ್ರೇಕ್ಷಕನಿಗೆ ಬೇಕಾದ ಎಲ್ಲವೂ ನಾಟಕ ಒಳಗೊಂಡಿರುತ್ತದೆ. ಕೊಡವೂರಿನಲ್ಲಿ ಹಿಂದೆ ಶಂಕರನಾರಾಯಣ ನಾಟಕ ಮಂಡಳಿ ಇತ್ತು. ಬಳಿಕ ಅದು ನಿಂತು ಹೋಯಿತು. ಕೊಡವೂರು ಯಕ್ಷಗಾನ ಕಲೆಗೆ ಪ್ರಸಿದ್ಧವಾಗಿತ್ತು. ಈಗ ಸುಮನಸಾ ಕೊಡವೂರು ಸಂಸ್ಥೆಯಿಂದಾಗಿ ನಾಟಕ ರಂಗದಲ್ಲಿಯೂ ಹೆಸರುವಾಸಿಯಾಗುತ್ತಿದೆ. ಕಲಾ ಪ್ರದರ್ಶನಗಳನ್ನು ನೋಡಲು ಹಿರಿಯರೇ ಹೆಚ್ಚಾಗಿ ಬರುತ್ತಾರೆ. ಮಕ್ಕಳು ಇರುವುದಿಲ್ಲ. ಆದರೆ ಇಲ್ಲಿ ಸಣ್ಣ ಮಕ್ಕಳನ್ನೂ ತೊಡಗಿಸಿಕೊಂಡಿದ್ದಾರೆ. ಇದು ಇತರರಿಗೂ ಪ್ರೇರಣೆ. ಕಲಾ ವೇದಿಕೆ ಎಷ್ಟು ಮುಖ್ಯವೋ ಸುತ್ತಲ ಪರಿಸರವೂ ಅಷ್ಟೇ ಮುಖ್ಯ. ಈ ಬಯಲು ರಂಗಮಂದಿರದಲ್ಲಿ ಪರಿಸರವನ್ನು ಉಳಿಸಿಕೊಂಡೇ ರಂಗಪ್ರದರ್ಶನಗಳು ನಡೆಯುತ್ತಿವೆ. ತೆರೆದ ಆಕಾಶದಡಿಯಲ್ಲಿ ಪ್ರೇಕ್ಷಕರು ವೀಕ್ಷಿಸುತ್ತಾರೆ. ಇತ್ತೀಚೆಗೆ ಕಾಂಕ್ರೀಟ್‌ ಸಭಾಂಗಣಗಳು, ಹವಾನಿಯಂತ್ರಿತ ವ್ಯವಸ್ಥೆಗಳ ನಡುವೆ ನಿದ್ದೆ ಹೋಗುವುದಕ್ಕಿಂತ ಮುಕ್ತವಾಗಿ ಇರುವ ಈ ಪ್ರದೇಶ ರಂಗಚಟುವಟಿಕೆಗೆ ಪೂರಕವಾಗಿದೆ” ಎಂದು ವಿಶ್ಲೇಷಿಸಿದರು.
    ರಂಗಸನ್ಮಾನವನ್ನು ಸ್ವೀಕರಿಸಿದ ಕಲಾವಿದ ಉಮೇಶ್ ಶೆಟ್ಟಿ ಮಾತನಾಡಿ, “ಈ ಸನ್ಮಾನವು ಸಂತೋಷ ಮತ್ತು ಸಂಕೋಚವನ್ನು ಉಂಟು ಮಾಡಿದೆ. ಸನ್ಮಾನ ಸ್ವೀಕರಿಸುವ ಯೋಗವನ್ನು ಕಲ್ಪಿಸಿದ್ದಕ್ಕೆ ಸಂತೋಷವಾಗುತ್ತಿದೆ. ಇದಕ್ಕೆ ಅರ್ಹನೇ ಎಂಬ ಜಿಜ್ಞಾಸೆಯು ಸಂಕೋಚವನ್ನು ಉಂಟು ಮಾಡುತ್ತಿದೆ” ಎಂದು ಹೇಳಿದರು.
    ಸಿತಾರಾ ಎಂಟರ್‌ಪ್ರೈಸಸ್‌ ಪ್ರಭಾಕರ ತಿಂಗಳಾಯ ಮಾತನಾಡಿ, “ಶಾಲೆಯಲ್ಲಿ ಓದಿದರೆ ಪರೀಕ್ಷೆ ಮುಗಿದ ಮೇಲೆ ಮರೆತು ಹೋಗುತ್ತದೆ. ನಾಟಕಗಳ ಮೂಲಕ ತಿಳಿಸುವ ವಿಚಾರಗಳು ಮನಸ್ಸಿನಲ್ಲಿ ಅಚ್ಚೊತ್ತಿ ನಿಲ್ಲುತ್ತದೆ. ಆ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ” ಎಂದು ತಿಳಿಸಿದರು.
    ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ, ಕೊಡವೂರು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀನಿವಾಸ ಉಪಾಧ್ಯ, ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಪ್ರಬಂಧಕ ಸುಧಾಕರ್‌ ಜತ್ತನ್‌, ಸುಮನಸಾ ಕೊಡವೂರು ಸಂಸ್ಥೆಯ ಜಗದೀಶ್‌, ಮನೋಹರ್‌ ಉಪಸ್ಥಿತರಿದ್ದರು. ಪ್ರವೀಣ್‌ಚಂದ್ರ ಸ್ವಾಗತಿಸಿ, ಮುರುಗೇಶ್‌ ವಂದಿಸಿ, ಕಾರ್ತಿಕ್‌ ಕಾರ್ಯಕ್ರಮ ನಿರೂಪಿಸಿದರು. ಸುಮನಸಾ ಕೊಡವೂರು ಸಂಸ್ಥೆಯ ಕಲಾವಿದರಿಂದ ‘ಸಮುದ್ರೋಲ್ಲಂಘನ’ ಯಕ್ಷ ನಾಟಕ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಪುಟ್ಟರಾಜ ಗವಾಯಿ ಪ್ರತಿಷ್ಠಾನದಿಂದ ‘ಪುಟ್ಟರಾಜ ಸಮ್ಮಾನ-2024’ ಪ್ರದಾನ ಸಮಾರಂಭ | ಮಾರ್ಚ್ 3
    Next Article ದಕ್ಷಿಣ ಕನ್ನಡ ಜಿಲ್ಲೆಯ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಭುವನೇಶ್ವರಿ ಹೆಗಡೆ 
    roovari

    Add Comment Cancel Reply


    Related Posts

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.