Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ನೃತ್ಯ ನಿರಂತರತೆಯ ಅನಾವರಣ – ‘ನೃತ್ಯೋಲ್ಲಾಸ’

    January 5, 2026

    ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಕ್ಕಳಿಂದ ನಾಟಕ ಪ್ರದರ್ಶನ | ಜನವರಿ 06

    January 5, 2026

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷದೇವ ಮಿತ್ರಕಲಾ ಮಂಡಳಿಯ 27ನೇ ವರ್ಷದ ‘ಯಕ್ಷ ಸಂಭ್ರಮ’
    Yakshagana

    ಯಕ್ಷದೇವ ಮಿತ್ರಕಲಾ ಮಂಡಳಿಯ 27ನೇ ವರ್ಷದ ‘ಯಕ್ಷ ಸಂಭ್ರಮ’

    August 6, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡಬಿದಿರೆ : ಬೆಳುವಾಯಿಯ ಯಕ್ಷದೇವ ಮಿತ್ರಕಲಾ ಮಂಡಳಿಯ 27ನೇ ವರ್ಷದ ‘ಯಕ್ಷ ಸಂಭ್ರಮ’ ಕಾರ್ಯಕ್ರಮವು 27 ಜುಲೈ 2024ರಂದು ಮೂಡಬಿದಿರೆಯ ಬೆಳುವಾಯಿ ಇಲ್ಲಿನ ಪ್ರೀತಂ ಗಾರ್ಡನ್ ನಲ್ಲಿ ನಡೆಯಿತು.


    ಕಾರ್ಯಕ್ರಮದಲ್ಲಿ ಕಲಾವಿದರಿಗೆ ಪ್ರಶಸ್ತಿ ಪ್ರದಾನಿಸಿ ಆಶೀರ್ವಚನ ನೀಡಿದ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ “ಭಾರತೀಯ ಸಂಸ್ಕೃತಿ ಅನಾವರಣಗೊಳ್ಳುವುದೇ ಕಲೆಗಳಿಂದ. ಯಕ್ಷಗಾನವು ಪುರಾಣದ ಕತೆಗಳನ್ನು ಜನರಿಗೆ ತಲುಪಿಸುತ್ತದೆ. ಸಂಸ್ಕಾರ ಮತ್ತು ಸಂಸ್ಕೃತಿಯ ಚಟುವಟಿಕೆಗಳು ಹೆಚ್ಚಾದಾಗ ಸಮಾಜದಲ್ಲಿ ವಿಕೃತಿಗಳು ದೂರವಾಗುತ್ತದೆ.” ಎಂದು ಹೇಳಿದರು.
    ಯಕ್ಷದೇವ ಮಿತ್ರಕಲಾ ಮಂಡಳಿ ಗೌರವಾಧ್ಯಕ್ಷ ಕೆ. ಶ್ರೀಪತಿ ಭಟ್‌ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳವಾದಕ ಪೆರುವಾಯಿ ನಾರಾಯಣ ಭಟ್, ಹಿರಿಯ ವೇಷಧಾರಿ ರಾಮಕುಮಾ‌ರ್ ದಾಸನಡ್ಕ ಇವರುಗಳಿಗೆ ‘ಯಕ್ಷ ದೇವ ಪ್ರಶಸ್ತಿ’ ಹಾಗೂ ನಿವೃತ್ತ ಶಿಕ್ಷಕಿ ಕೆ. ಕಲಾವತಿ ಇವರಿಗೆ ‘ವನಜಾಕ್ಷಿ ಅಮ್ಮ ಸಂಸ್ಮರಣಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

    ಸಮಾರಂಭದಲ್ಲಿ ಬಿ. ಜೆ. ಪಿ. ಯ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಕರ್ಣಾಟಕ ಬ್ಯಾಂಕ್‌ನ ನಿವೃತ್ತ ಜಿ. ಎಂ. ಬೊಕ್ಕಸ ಚಂದ್ರಶೇಖರ ರಾವ್, ವಿದ್ವಾನ್ ಪ್ರಸನ್ನ ತಂತ್ರಿ, ಮುಡಾ ಅಧ್ಯಕ್ಷ ಹರ್ಷ ವರ್ಧನ ಪಡಿವಾಳ್‌, ಉದ್ಯಮಿ ಜನಾರ್ದನ ಎಸ್. ರಾವ್, ಪಡುಬಿದ್ರಿ ದಿವಾಕರ ರಾವ್, ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಬಹ್ಮನ್ ರಾಮಪ್ರಸಾದ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
    ಸಂಸ್ಥೆಯ ಅಧ್ಯಕ್ಷ ಎಂ. ದೇವಾನಂದ ಭಟ್ ಸ್ವಾಗತಿಸಿ, ಕಲಾವಿದ ಜನಾರ್ದನ ಅಮ್ಮುಂಜೆ ನಿರೂಪಿಸಿ, ಕಾರ್ಯದರ್ಶಿ ರವಿ ಪ್ರಸಾದ್‌ ಕೆ. ಶೆಟ್ಟಿ ವಂದಿಸಿದರು. ಸಭಾಕಾರ್ಯಕ್ರಮದ ಬಳಿಕ ಕಲಾವಿದರಿಂದ ತೆಂಕು ಬಡಗು ಕೂಡಾಟ, ‘ವೀರ- ವೈಷ್ಣವ’ ಹಾಗೂ ‘ನವರಸ ರಾಮಾಯಣ’ ತೆಂಕು ತಿಟ್ಟು ಯಕ್ಷಗಾನ ಪ್ರದರ್ಶನ ಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleರಂಗಭೂಮಿಯಿಂದ ವ್ಯಕ್ತಿತ್ವ ವಿಕಸನ
    Next Article ಕಾಸರಗೋಡಿನ ರಂಗಚಿನ್ನಾರಿ ವತಿಯಿಂದ ‘ರಂಗ ಸಂಸ್ಕೃತಿ’ ಕಾರ್ಯಾಗಾರ | ಆಗಸ್ಟ್ 8
    roovari

    Comments are closed.

    Related Posts

    ಇಡ್ಯಾದಲ್ಲಿ ‘ದಶಮಾನ ವರ್ಷ ಸಂಭ್ರಮಾಚರಣೆ’ಯ ಸಮಾರೋಪ ಸಮಾರಂಭ

    January 3, 2026

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಕವಿ, ಸಾಹಿತಿ ಯೋಗೀಶ್ ಕಾಂಚನ್ ಬೈಕಂಪಾಡಿ ನಿಧನ

    December 31, 2025

    ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಪ್ರಸ್ತುತಗೊಂಡ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

    December 31, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.