Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ‘ಯಕ್ಷ ಸುಮತಿ 2024’ | ಮಾರ್ಚ್ 16
    Dance

    ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ‘ಯಕ್ಷ ಸುಮತಿ 2024’ | ಮಾರ್ಚ್ 16

    March 15, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ವಂಡಾರು ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಯಕ್ಷಾವಾಸ್ಯಮ್ ಕಾರಿಂಜ (ರಿ.), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ಮಂಗಳೂರು ವಿಶ್ವವಿದ್ಯಾನಿಲಯ, ತುಳು ಸ್ನಾತಕೋತ್ತರ ವಿಭಾಗ ಮತ್ತು ವಿ.ವಿ. ಸಂಧ್ಯಾ ಕಾಲೇಜು ಮಂಗಳೂರು ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ‘ಯಕ್ಷ ಸುಮತಿ 2024’ ರಾಜ್ಯ ಮಟ್ಟದ ಯಕ್ಷಗಾನ ಮಹಿಳಾ ಕಲಾವಿದೆಯರ ಸಾಧನೆಯ ಸಂಭ್ರಮದ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 16-03-2024ರಂದು ಬೆಳಿಗ್ಗೆ ಗಂಟೆ 9-00ರಿಂದ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಸಮಾರಂಭವನ್ನು ಮಾನ್ಯ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ಉದ್ಘಾಟನೆ ಮಾಡಲಿದ್ದು, ಮೂಡಬಿದ್ರೆಯ ಆಳ್ವಾಸ್ ಎಜುಕೇಶನ್ ಫೌಂಡೇಷನ್ ಇವರ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಇವರು ದೀಪೋಜ್ವಲನ ಮಾಡಲಿರುವರು. ಬೆಳಗ್ಗೆ ಗಂಟೆ 9-45ರಿಂದ ‘ಯಕ್ಷಗಾನದಲ್ಲಿ ಮಹಿಳೆ : ನಿನ್ನೆ-ಇಂದು-ನಾಳೆ’, ‘ಯಕ್ಷಗಾನದಲ್ಲಿ ಮಹಿಳಾ ಸಂವೇದನೆ’ ಹಾಗೂ ‘ಯಕ್ಷಗಾನದ ವಿವಿಧ ವಿಭಾಗಗಳಲ್ಲಿ ಮಹಿಳೆ’ ಎಂಬ ವಿಷಯಗಳ ಬಗ್ಗೆ ವಿಚಾರಗೋಷ್ಠಿಗಳು ನಡೆಯಲಿವೆ. ಮಧ್ಯಾಹ್ನ 1.45ರಿಂದ ಕಲಾವಿಸ್ಮಯ ಸಾಲಿಗ್ರಾಮ ಇವರು ಯಕ್ಷ ಸುಮತಿ ಪರಿಕಲ್ಪನೆಯ ಯಕ್ಷಗಾನ ನೃತ್ಯ ರೂಪಕವನ್ನು ಪ್ರಸ್ತುತ ಪಡಿಸಲಿದ್ದಾರೆ. ಗಂಟೆ 2.30ರಿಂದ ವಿಚಾರಗೋಷ್ಠಿ ನಡೆಯಲಿದೆ. ಗಂಟೆ 3.30ಕ್ಕೆ ‘ಅಬ್ಬರತಾಳ’ವನ್ನು ಶ್ರೀ ಹರಿನಾರಾಯಣ ಬೈಪಾಡಿತ್ತಾಯ ಇವರ ನಿರ್ದೇಶನದಲ್ಲಿ ಶ್ರೀಶ ಯಕ್ಷಗಾನ ಕಲಿಕಾ ಕೇಂದ್ರ ತಳಕಲ ಇದರ ಮಹಿಳಾ ಕಲಾವಿದೆಯವರು ಪ್ರಸ್ತುತ ಪಡಿಸಲಿದ್ದಾರೆ.

    ಸಂಜೆ 4-00 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಖ್ಯಾತ ಮಹಿಳಾ ಭಾಗವತರಾದ ಶ್ರೀಮತಿ ಲೀಲಾವತಿ ಬೈಪಾಡಿತ್ತಾಯ ಇವರಿಗೆ ‘ಗೌರವ ಸಮರ್ಪಣೆ’, ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಎಂ.ಕೆ. ರಮೇಶ್ ಆಚಾರ್ಯ, ಬೆಂಗಳೂರಿನ ಚಾರ್ಟರ್ಡ್ ಅಕೌಂಟೆಂಟ್ ಶ್ರೀ ನಿಶಾಂತ್ ಆಗಶೆ ಹಾಗೂ ಉದ್ಯಮಿಯಾದ ಶ್ರೀ ನಿರಂಜನ್ ಜೈನ್ ಇವರಿಗೆ ‘ಸಂಸ್ಥೆಯ ಗೌರವ’ ಮತ್ತು ಮಣಿಪಾಲದ ಎಂ.ಐ.ಟಿ.ಯ ಉಪನ್ಯಾಸಕರಾದ ಪ್ರೊ. ಎಸ್.ವಿ. ಉದಯ ಕುಮಾರ ಶೆಟ್ಟಿ, ಯಕ್ಷಗಾನ ವಿಮರ್ಶಕರಾದ ಶ್ರೀ ಎಂ. ಶಾಂತಾರಾಮ ಕುಡ್ವ ಹಾಗೂ ಶಿರೂರು ಫಣಿಗಿರಿ ಪ್ರತಿಷ್ಠಾನದ ನಿರ್ದೇಶಕರಾದ ಶ್ರೀ ಉಮೇಶ್ ಶಿರೂರು ಇವರುಗಳಿಗೆ ‘ನಾದ ನೂಪುರ ಪತ್ರಿಕಾ ಗೌರವ’ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಸಂಜೆ ಗಂಟೆ 6ಕ್ಕೆ ಶ್ರೀಮತಿ ಪೂರ್ಣಿಮ ಯತೀಶ್ ರೈ ಇವರ ನಿರ್ದೇಶನದಲ್ಲಿ ಶುಭಾಶಯ ಜೈನ ವಿರಚಿತ ‘ತ್ಯಾಗೊದ ತಿರ್ಲ್’ ತುಳು ಯಕ್ಷಗಾನ ಪ್ರದರ್ಶನ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕಲಾವಿದೆ, ತಾಳಮದ್ದಳೆ ಅರ್ಥದಾರಿ ಜಯಶ್ರೀ ಶೆಟ್ಟಿಯವರಿಗೆ ಸನ್ಮಾನ
    Next Article ಪುತ್ತೂರಿನಲ್ಲಿ ‘ಸಾರ್ವಜನಿಕ ಅಭಿನಂದನಾ ಸಮಾರಂಭ’ | ಮಾರ್ಚ್ 17
    roovari

    Add Comment Cancel Reply


    Related Posts

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025

    ಉದ್ಘಾಟನೆಗೊಂಡ ಪುತ್ರಕಾಮೇಷ್ಠಿ ಯಕ್ಷಗಾನ ತಾಳಮದ್ದಳೆ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.