Subscribe to Updates

    Get the latest creative news from FooBar about art, design and business.

    What's Hot

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಸರಯೂ ಸಪ್ತಾಹದಲ್ಲಿ ಸಿ. ಎಸ್. ಭಂಡಾರಿ ಇವರಿಗೆ ಸನ್ಮಾನ.

    June 2, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ಬಡಗು ಹಿಮ್ಮೇಳ ಮುಮ್ಮೇಳ ತರಗತಿ ಉದ್ಘಾಟನೆ

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಯಕ್ಷಭಾರತಿ’ಯ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 10ರಂದು  
    Awards

    ‘ಯಕ್ಷಭಾರತಿ’ಯ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 10ರಂದು  

    September 5, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಬೆಳ್ತಂಗಡಿ ಯಕ್ಷಭಾರತಿಯ 9ನೇ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಭಾರತಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ ಮತ್ತು ಯಕ್ಷಗಾನ ಪ್ರದರ್ಶನ ದಿನಾಂಕ 10-09-2023ರಂದು ಅಪರಾಹ್ನ ಗಂಟೆ 2ಕ್ಕೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮವನ್ನು ಕಣಿಯೂರು ರೈತಬಂಧು ಆಹಾರೋದ್ಯಮ ಸಂಸ್ಥೆಯ ಶ್ರೀ ಶಿವಶಂಕರ ನಾಯಕ್‌ ಇವರು ಉದ್ಘಾಟಿಸಲಿದ್ದಾರೆ. ಉಜಿರೆ ಶ್ರೀ ಜನಾರ್ದನ ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ, ಉಜಿರೆ ಗ್ರಾ.ಪಂ. ಅಧ್ಯಕ್ಷೆಯಾದ ಶ್ರೀಮತಿ ಉಷಾ ಕಿರಣ್ ಕಾರಂತ್, ಧರ್ಮಸ್ಥಳ ಗ್ರಾ.ಪ. ಉಪಾಧ್ಯಕ್ಷರಾದ ಶ್ರೀನಿವಾಸ ರಾವ್, ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾದ ಶ್ರೀ ಪ್ರೀತಮ್‌ ಡಿ. ಅತಿಥಿಗಳಾಗಿರುವರು.

    ಇದೇ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ, ಸಂಘಟಕ ಶ್ರೀ ಭಾಸ್ಕರ ಬಾರ್ಯ ಅವರಿಗೆ ‘ಯಕ್ಷ ಭಾರತಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಲಿದ್ದಾರೆ.

    ಸಂಜೆ 5ರಿಂದ ವಾರ್ಷಿಕ ಸಭಾ ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಜನಾರ್ದನ ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ ಕೃಷ್ಣ ಪಡುವೆಟ್ನಾಯ, ಶಾಸಕರಾದ ಶ್ರೀ ಹರೀಶ್ ಪೂಂಜ, ಮೂಡಬಿದಿರೆ ಧನಲಕ್ಷ್ಮೀ ಕ್ಯಾಶೂ ಇಂಡಸ್ಟ್ರೀಸ್‌ನ ಶ್ರೀಪತಿ ಭಟ್, ಮೂಡುಬಿದ್ರಿ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶ್ರೀ ಸುಬ್ರಹ್ಮಣ್ಯ ಭಟ್, ಬೆಳ್ತಂಗಡಿ ನ್ಯಾಯವಾದಿ ಶ್ರೀ ಧನಂಜಯ್ ರಾವ್, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಶ್ರೀ ಕೆ. ಮೋಹನ ಕುಮಾರ್ ಭಾಗವಹಿಸಲಿರುವರು.

    ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಡಾ. ಮೋಹನದಾಸ ಗೌಡ ವೈದ್ಯರು ಕೊಕ್ಕಡ, ಶ್ರೀ ರಮೇಶ ಕಾರಂತ, ನಿವೃತ್ತ ದೈಹಿಕ ಶಿಕ್ಷಕರು, ಶ್ರೀ ಕೇಶವ ಭಟ್ ಅತ್ತಾಜೆ ಸಮಾಜ ಸೇವಕರು, ಶ್ರೀ ಆನಂದ ಶೆಟ್ಟಿ ಗುರುವಾಯನಕೆರೆ ಕಲಾವಿದರು, ಸಂಘಟಕರಿಗೆ ಸೇವಾ ಗೌರವಾರ್ಪಣೆ ನಡೆಯಲಿದ್ದು, ಯಕ್ಷ ಭಾರತಿ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ ಅವರನ್ನು ಅಭಿನಂದಿಸಲಿದ್ದಾರೆ.

    ಅಪರಾಹ್ನ 2.30ರಿಂದ ಜಿಲ್ಲಾ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ‘ವೀರಸಮೀರಜಾತ’ (ಪುರುಷಾಮೃಗ-ದುಶ್ಯಾಸನ ವಧೆ-ಗದಾಯುದ್ಧ) ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleರಂಗಭೂಮಿ ಉಡುಪಿ ಅಂಬಾತನಯ ಮುದ್ರಾಡಿ ಪ್ರಶಸ್ತಿಗಾಗಿ ನಾಟಕ ರಂಗ ಸಂಬಂಧಿತ ಕೃತಿಗಳಿಗೆ ಆಹ್ವಾನ | ಕೊನೆಯ ದಿನಾಂಕ ಒಕ್ಟೋಬರ್ 31
    Next Article ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನಿಂದ ‘ಗ್ರಾಮ ಸಾಹಿತ್ಯ ಸಂಭ್ರಮ’
    roovari

    Add Comment Cancel Reply


    Related Posts

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಸರಯೂ ಸಪ್ತಾಹದಲ್ಲಿ ಸಿ. ಎಸ್. ಭಂಡಾರಿ ಇವರಿಗೆ ಸನ್ಮಾನ.

    June 2, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ಬಡಗು ಹಿಮ್ಮೇಳ ಮುಮ್ಮೇಳ ತರಗತಿ ಉದ್ಘಾಟನೆ

    June 2, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.