Subscribe to Updates

    Get the latest creative news from FooBar about art, design and business.

    What's Hot

    ದೀಪಾವಳಿ ಸಂಗೀತ ಉತ್ಸವಕ್ಕೆ ಸಜ್ಜಾದ ಗೋಕುಲಂ ಗೋಶಾಲೆ | ಅಕ್ಟೋಬರ್ 20ರಿಂದ ನವೆಂಬರ್ 01

    October 13, 2025

    ಉಡುಪಿಯಲ್ಲಿ ಡಾ. ಜನಾರ್ದನ ಹಾವಂಜೆಯವರ ‘ಯಕ್ಷ’ ಕಲಾಕೃತಿಯ ಪ್ರದರ್ಶನ

    October 13, 2025

    ಮಂಗಳೂರಿನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ‘ಕಾರಂತ ಹುಟ್ಟುಹಬ್ಬ’ | ಅಕ್ಟೋಬರ್ 14

    October 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಣ್ಮೂರು ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗಾನ ತರಗತಿ ಆರಂಭ
    Yakshagana

    ಎಣ್ಮೂರು ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗಾನ ತರಗತಿ ಆರಂಭ

    September 5, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ಯಕ್ಷ ಧ್ರುವ ಯಕ್ಷ ಶಿಕ್ಷಣ ಅಭಿಯಾನದ ಅಂಗವಾಗಿ ತೆಂಕುತಿಟ್ಟು ಯಕ್ಷಗಾನ ತರಗತಿಯ ಉದ್ಘಾಟನಾ ಸಮಾರಂಭ 30-08-2023ರಂದು ಎಣ್ಮೂರು ಪ್ರೌಢಶಾಲೆಯಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದ ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಉಮೇಶ್ ಶೆಟ್ಟಿ ಉಬರಡ್ಕ “ಯಕ್ಷಗಾನ ಕಲಿಕೆಯಿಂದ ಶಾಲಾ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಇದು ನಮ್ಮಲ್ಲಿ ಏಕಾಗ್ರತೆ ವೃದ್ಧಿಸಿ ಕಲಿಕೆಯನ್ನು ದೃಢೀಕರಿಸುತ್ತದೆ” ಎಂದು ಹೇಳಿದರು. ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಶ್ರೀ ಎಂ.ಎಲ್ ಸಾಮಗ ಇವರು ಮಾತನಾಡಿ “ಯಕ್ಷಗಾನ ಕಲಿಕೆಯಿಂದ ಪುರಾಣ ಜ್ಞಾನ, ಭಾಷಾ ಶುದ್ಧಿ ಹಾಗೂ ಉತ್ತಮ ಸಂವಹನ ಕೌಶಲ ಬೆಳೆಯುತ್ತದೆ. ಇದು ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ ಪೂರಕ” ಎಂದರು. ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುರುಳ್ಯ ಗ್ರಾಮ ಪಂಚಾಯತ್ತಿನ ನಿಕಟಪೂರ್ವ ಅಧ್ಯಕ್ಷರಾದ ಕುಮಾರಿ ಜಾನಕಿ ಎಸ್, ಯಕ್ಷ ಶಿಕ್ಷಣದ ಸಂಚಾಲಕರಾದ ಶ್ರೀ ವಾಸು ಐತಾಳ್, ಶಾಲಾ ಎಸ್ಟಿಎಂಸಿ ಅಧ್ಯಕ್ಷರಾದ ಶ್ರೀ ಪದ್ಮನಾಭ ಗೌಡ ಪೂದೆ, ಯಕ್ಷ ಗುರು ಶ್ರೀ ಪ್ರಸಾದ ಸವಣೂರು ಉಪಸ್ಥಿತರಿದ್ದರು.
    ಕುಮಾರಿ ಭಕ್ತಿ ಗೌಡ ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ಅತಿಥಿಗಳನ್ನು ಸ್ವಾಗತಿಸಿದರು. ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಪುತ್ತೂರು ಘಟಕದ ಸಂಚಾಲಕರಾದ ಶ್ರೀ ಪ್ರಶಾಂತ ರೈ ಪಲ್ಲೋಡಿ ವಂದಿಸಿ, ಶಿಕ್ಷಕ ಶ್ರೀ ಲಿಂಗಪ್ಪ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಆರಂಭಿಕ ಹೆಜ್ಜೆಯನ್ನು ಅಭ್ಯಾಸ ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ನಾಟ್ಯ ತರಬೇತಿಯನ್ನು ಪ್ರಾರಂಭಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಶಿಕ್ಷಕರ ದಿನಾಚರಣೆ ವಿಶೇಷ ಲೇಖನ | ಕಲೆ ಹಾಗೂ ಶಿಕ್ಷಣದ ಸಮಪಾಕದ ವ್ಯಕ್ತಿತ್ವ ಶ್ರೀ ಸುಜಯೀಂದ್ರ ಹಂದೆ ಎಚ್. 
    Next Article ಶಿಕ್ಷಕರ ದಿನಾಚರಣೆ ವಿಶೇಷ ಲೇಖನ | ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ನೆಮ್ಮದಿ ಕಂಡ ಗುರು – ಶ್ರೀಮತಿ ವಿಜಯಲಕ್ಷ್ಮೀ ಎಚ್.ಎನ್. 
    roovari

    Add Comment Cancel Reply


    Related Posts

    ಲೀಲಾವತಿ ಬೈಪಾಡಿತ್ತಾಯ ಸಂಸ್ಮರಣಾ ಗೋಷ್ಠಿ ಮತ್ತು ಯಕ್ಷಗಾನ ಪ್ರದರ್ಶನ | ಅಕ್ಟೋಬರ್ 12

    October 11, 2025

    ಪರ್ಲಡ್ಕದ ಬಾಲವನ ಬಯಲು ರಂಗಮಂದಿರದಲ್ಲಿ ತಾಳಮದ್ದಳೆ

    October 11, 2025

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    October 11, 2025

    ಉಡುಪಿ ಯಕ್ಷಗಾನ ಕಲಾರಂಗದ ಸಭಾಂಗಣದಲ್ಲಿ ‘ಸರ್ಪಂಗಳ ಯಕ್ಷೋತ್ಸವ -2025’ | ಅಕ್ಟೋಬರ್ 11

    October 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.