Subscribe to Updates

    Get the latest creative news from FooBar about art, design and business.

    What's Hot

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಅಕಾಡೆಮಿಯಿಂದ ಕಲಾವಿದರಿಗಾಗಿ ಕಲಾಪಗಳು
    Yakshagana

    ಯಕ್ಷಗಾನ ಅಕಾಡೆಮಿಯಿಂದ ಕಲಾವಿದರಿಗಾಗಿ ಕಲಾಪಗಳು

    June 4, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ `ವೃತ್ತಿಪರ ಕಲಾವಿದರಿಗಾಗಿ ಕಲಾಪಗಳು ‘ ಕಾರ್ಯಕ್ರಮ ದಿನಾಂಕ 31 ಮೇ 2025ರ ಶನಿವಾರದಂದು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಹಿಂದೆ ಶ್ರದ್ಧಾಭಕ್ತಿಯಿಂದ ಕಲಾವಿದರು ವೃತ್ತಿಪರರಾಗಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿದರು. ಇಂದು ಈ ಕ್ಷೇತ್ರಕ್ಕೆ ವೈದ್ಯರು, ಇಂಜೀನಿಯರ್, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಕಲೆಯ ತೇರನ್ನು ಮುಂದೆಳೆಯುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆದರೆ ಮತ್ತೊಂದೆಡೆ ಯಕ್ಷಗಾನ ತನ್ನ ಸಾಂಪ್ರಾದಾಯಿಕ ಚೌಕಟ್ಟನ್ನು ಮೀರುತ್ತಿದೆ ಎಂಬ ದೂರುಗಳು ಕೂಡಾ ಅಕಾಡೆಮಿಯ ಕದವನ್ನು ತಟ್ಟುತ್ತಿವೆ. ಆದ್ದರಿಂದ ಈ ಸಂಕ್ರಮಣ ಕಾಲದಲ್ಲಿ ಯಕ್ಷಗಾನ ಕಲೆಯ ಗರಿಮೆಗೆ ಚ್ಯುತಿ ಬಾರದಂತೆ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯಕ್ಷಗಾನ ಕಲಾವಿದರ ಮೇಲಿದೆ. ಯಕ್ಷಗಾನ ಕರಾವಳಿ ಮಾತ್ರವಲ್ಲದೆ ವಿವಿಧ ಜಿಲ್ಲೆಗಳಲ್ಲಿ, ರಾಜ್ಯಗಳಲ್ಲಿ ಅಲ್ಲದೆ ಅಂತರಾಷ್ಟ್ರೀಯ ಮಟ್ಟಕ್ಕೂ ಯಕ್ಷಗಾನವನ್ನು ಕೊಂಡೊಯ್ಯುವ ಕಾರ್ಯ ಅಕಾಡೆಮಿ ಮಾಡಲಿದೆ. ಕಲಾವಿದರ ಬೇಡಿಕೆಗಳು ಯಕ್ಷಗಾನದ ಚೌಕಟ್ಟಿನ ಒಳಗೆ ಇದ್ದರೆ ಮಾತ್ರ ಅಕಾಡೆಮಿಯಿಂದ ಮಾಡಲು ಸಾಧ್ಯ. ಇದನ್ನು ಕಲಾವಿದರು ಮನಗಾಣಬೇಕು. 60 ವರ್ಷ ಮೇಲ್ಪಟ್ಟವರು, ಅಶಕ್ತರು, ನಿವೃತ್ತಿಯಾದ ಕಲಾವಿದರನ್ನು ಗುರುತಿಸಬೇಕು. ಅವರು ಅರ್ಜಿ ಹಾಕದೆ ಅಕಾಡೆಮಿಯ ಪ್ರಶಸ್ತಿಗಳು ಮುಟ್ಟಬೇಕು ಎನ್ನುವ ಹಂಬಲ ನನ್ನದಾಗಿದೆ. ಇದನ್ನು ಈಗಾಗಲೇ ಜಾರಿ ಮಾಡಿದ್ದೇವೆ. ನನ್ನ ಅವಧಿಯ ಎರಡು ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳಲ್ಲಿ ಅರ್ಜಿ ಹಾಕದೇ ಅಕಾಡೆಮಿಯೇ ಕಲಾವಿದರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡುವ ಕಾರ್ಯ ಮಾಡಿದೆ. ಕಲಾವಿದರ ಶ್ರೇಯೋಭಿವೃದ್ಧಿಯ ಮಹಾತ್ವಾಕಾಂಕ್ಷೆಯನ್ನು ಇಟ್ಟುಕೊಂಡೇ ನಾನು ಅಕಾಡೆಮಿಯ ಅಧ್ಯಕ್ಷನಾಗಿದ್ದೇನೆ. ಇದರ ಸಾಕಾರಕ್ಕೆ ಕಲಾವಿದರು ಸಹಕಾರ, ಸಲಹೆಗಳನ್ನು ನೀಡಬೇಕು. ಯಕ್ಷಗಾನ ಕ್ಷೇತ್ರದಲ್ಲಿ ಕಲೆ ಹಾಗೂ ಕಲಾವಿದರ ಶ್ರೇಯೋಭಿವೃದ್ಧಿಗೆ ಹಗಲಿರುಳು ದುಡಿಯುತ್ತಿರುವ ಉಡುಪಿಯ ಯಕ್ಷಗಾನ ಕಲಾರಂಗ ಅಭಿನಂದನಾರ್ಹ, ಬಡ ಕಲಾವಿದರಿಗೆ ಮನೆ ಕೂಡಾ ಕಟ್ಟಿಸಿಕೊಡುತ್ತಿದ್ದಾರೆ. ಪ್ರಮುಖವಾಗಿ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಅವರನ್ನು ಅಭಿನಂದಿಸಲೇ ಬೇಕು. ಸ್ವಾರ್ಥವಿಲ್ಲದೆ ಸೇವೆ ಸಲ್ಲಿಸುತ್ತಿರುವ ಈ ಸಂಸ್ಥೆ ಇನ್ನಷ್ಟು ಬೆಳೆದು ಯಕ್ಷಗಾನ ಕಲಾವಿದರ ಸೇವೆ ಮಾಡುವಂತಾಗಲಿ” ಎಂದು ಹಾರೈಸಿದರು.

     

    ಉದ್ಯಮಿ ಗೋಪಾಲ ಸಿ. ಬಂಗೇರ ಮಾತನಾಡಿ “ಡಾ.ತಲ್ಲೂರು ಅವರ ನೇತೃತ್ವದಲ್ಲಿ ಯಕ್ಷಗಾನ ಅಕಾಡೆಮಿ ಇತ್ತೀಚಿಗಿನ ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ. ಸರಕಾರ ನೀಡುವ ಅನುದಾನವನ್ನು ಮಕ್ಕಳ ಯಕ್ಷಗಾನ, ಯಕ್ಷಗಾನ ತರಬೇತಿ, ವಿಚಾರಸಂಕಿರಣ ಮೊದಲಾದ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ವಿನಿಯೋಗಿಸುತ್ತಿರುವುದು ಪ್ರಶಂಸನೀಯ” ಎಂದರು.

    ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರ್, ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ಪ್ರೊ. ಸದಾಶಿವ ರಾವ್, ನಾರಾಯಣ ಎಂ. ಹೆಗಡೆ ಮತ್ತು ವಿ. ಜಿ. ಶೆಟ್ಟಿ ಉಪಸ್ಥಿತರಿದ್ದರು.

    ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತಾ ಎನ್. ಸ್ವಾಗತಿಸಿ, ಸದಸ್ಯರಾದ ಸತೀಶ್ ಹಡಪ ವಂದಿಸಿದರು.
    ಈ ಸಂದರ್ಭದಲ್ಲಿ ಯಕ್ಷಗಾನ ಅಕಾಡೆಮಿ ವತಿಯಿಂದ ಕೇರಳ ತ್ರಿಶೂರಿನ ಮಾಧವ ಮಾತೃಗ್ರಾಮಂ ಕೂಡಿಯಾಟ್ಟಂ ಗುರುಕುಲಂ ವತಿಯಿಂದ `ಸೀತಾಪಹರಣಂ -ಜಟಾಯು ವಧಂ ‘ ಕೂಡಿಯಾಟ್ಟಂ ಪ್ರದರ್ಶನ ಜನಮನಸೂರೆಗೊಂಡಿತು. ನಂತರ ಕಲೆ ಪೂರ್ಣಾವಧಿ ಉದ್ಯೋಗವಾಗಬೇಕೇ ? ಉಪವೃತ್ತಿಯಾಗಬೇಕೇ ? ಎಂಬ ವಿಷಯದಲ್ಲಿ ಮುಕ್ತ ಚರ್ಚೆ ನಡೆಯಿತು. ಆರಂಭದಲ್ಲಿ ಮಣಿಪಾಲದ ಕೆ. ಎಂ. ಸಿ. ವತಿಯಿಂದ ಕಲಾವಿದರಿಗಾಗಿ ಉಚಿತ ವೈದ್ಯಕೀಯ ತಪಾಸಣೆ ನಡೆಯಿತು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಯುವ ನೃತ್ಯೋತ್ಸವ-2025| ಜೂನ್ 08
    Next Article ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ
    roovari

    Add Comment Cancel Reply


    Related Posts

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.