Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ

    June 18, 2025

    ಮುಂಡಾಜೆಯಲ್ಲಿ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣೆ | ಜೂನ್ 19

    June 18, 2025

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  
    Artist

    ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  

    October 21, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಯಕ್ಷಗಾನದ ಹಾಸ್ಯಚಕ್ರವರ್ತಿ ಎಂದು ಹೆಸರಾಗಿ ಹಾಸ್ಯ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ ಬೆಳಗ್ಗೆ ಬೆಂಗಳೂರಿನಲ್ಲಿ ಬಂದು ಇಳಿದ ತಂಡದಲ್ಲಿದ್ದ ಬಂಟ್ವಾಳರು ಮುಂಜಾನೆ ತೀವ್ರತರವಾದ ಹೃದಯ ಸ್ತಂಭನವಾದಾಗ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ದಿ. ಗಣಪತಿ ಆಚಾರ್ಯ ಹಾಗೂ ದಿ. ಭವಾನಿ ದಂಪತಿಗಳ ಸುಪುತ್ರನಾಗಿ ದಿನಾಂಕ 12 ಅಕ್ಟೋಬರ್ 1957ರಂದು ಜನಿಸಿ, ತಮ್ಮ ಹದಿಮೂರನೇ ವಯಸ್ಸಿನಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ಪಾದಾರ್ಪಣೆಗೈದು, ಸುಮಾರು ಐದು ದಶಕಗಳ ಸುದೀರ್ಘ ತಿರುಗಾಟದಲ್ಲಿ ಆಡ್ವಾಡಿ, ಸುಂಕದಕಟ್ಟೆ, ಸೊರ್ನಾಡು, ಕಟೀಲು, ಪುತ್ತೂರು, ಕದ್ರಿ, ಸುರತ್ಕಲ್‌, ಹೊಸನಗರ, ಹನುಮಗಿರಿ ಮೊದಲಾದ ಮೇಳಗಳಲ್ಲಿ  ತಿರುಗಾಟವನ್ನು ಮಾಡಿದ ಯಕ್ಷರಂಗದ ಅನೂಹ್ಯ ಅನುಭವದ ಸರದಾರರು ಶ್ರೀ ಬಂಟ್ವಾಳ ಜಯರಾಮ ಆಚಾರ್ಯರು.

     

    ಪ್ರಸಂಗಜ್ಞಾನ, ಶುದ್ಧ ಹಾಗೂ ಸರಳ ಮಾತುಗಾರಿಕೆ, ಪಾತ್ರವೈವಿಧ್ಯಗಳ ಪೋಷಣೆ, ವಿಶಿಷ್ಟ ಶೈಲಿಯ ಹಾಸ್ಯ ಪ್ರಸ್ತುತಿಯ ಮೂಲಕ ಮನೆಮಾತಾಗಿರುವ ಜಯರಾಮ ಆಚಾರ್ಯರು, ಸ್ತ್ರೀಪಾತ್ರ, ಕಿರೀಟ ವೇಷ, ಭಾಗವತಿಕೆ ಹಾಗೂ ಚೆಂಡೆ ಮದ್ದಳೆ ವಾದನದಲ್ಲೂ ಆಳವಾದ ಜ್ಞಾನವನ್ನು ಹೊಂದಿರುವ ಯಕ್ಷಸವ್ಯಸಾಚಿ.

    ದಕ್ಷಿಣ ಕನ್ನಡ ರಾಜ್ಯೋತ್ಸ ಪ್ರಶಸ್ತಿ ಹಾಗೂ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸೇರಿದಂತೆ ನೂರಾರು ಸನ್ಮಾನ-ಪ್ರಶಸ್ತಿಗಳಿಗೆ ಶ್ರೀಯುತರು ಭಾಜನರಾಗಿದ್ದರು. ಇವರು ಪತ್ನಿ, ಮಗ, ಮಗಳು ಹಾಗೂ ಸಹಸ್ರಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ಅಗಲುವಿಕೆ ಯಕ್ಷಗಾನ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕಲಾಕೇಂದ್ರದ ಐವತ್ತರ ಸಂಭ್ರಮ ಪ್ರಯುಕ್ತ ‘ಯಕ್ಷ ಸಪ್ತೋತ್ಸವ 2024’ | ಅಕ್ಟೋಬರ್ 21ರಿಂದ 27
    Next Article ಬೆಂಗಳೂರಿನ ಎಂ.ಇ.ಎಸ್. ಕಿಶೋರ ಕೇಂದ್ರದಲ್ಲಿ ‘ನಾಟಕೋತ್ಸವ 2024’ | ಅಕ್ಟೋಬರ್ 25ರಿಂದ 27
    roovari

    Add Comment Cancel Reply


    Related Posts

    ಕೊಯ್ಯೂರು ಪಂಚದುರ್ಗಾಪರಮೇಶ್ವರಿ ದೇವಾಲಯದಲ್ಲಿ ಯಕ್ಷಗಾನ ತಾಳಮದ್ದಳೆ

    June 18, 2025

    ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ‘ಯಕ್ಷ ಸಿಂಧೂರ’ | ಜೂನ್ 21 

    June 18, 2025

    ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ‘ಲಂಕಾ ದಹನ’ ಯಕ್ಷಗಾನ | ಜೂನ್ 21

    June 18, 2025

    ಬಲಮುರಿ ಶ್ರೀ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಳೆ

    June 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.