ಉಡುಪಿ : ಉಡುಪಿಯ ಪಾಡಿಗಾರಿನ ಲಕ್ಷ್ಮೀನರಸಿಂಹ ಉಪಾಧ್ಯ ದಿನಾಂಕ 08 ಮಾರ್ಚ್ 2025ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರಿಗೆ 75 ವರ್ಷ ವಯಸ್ಸಾಗಿತ್ತು.
ಉಡುಪಿಯ ವಿದ್ಯಾದಾಯಿನಿ ಯಕ್ಷಗಾನ ಮಂಡಳಿಯಲ್ಲಿ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದಿದ್ದ ಇವರು, ಖ್ಯಾತ ಕಲಾವಿದ ಪಡ್ರೆ ಚಂದು ಇವರ ಶಿಷ್ಯರಾಗಿದ್ದರು. ಮಲ್ಪೆ ಶಂಕರನಾರಾಯಣ ಮತ್ತು ಕೊಳ್ಯೂರು ರಾಮಚಂದ್ರ ರಾಯರೊಂದಿಗೆ ಸಹವೇಷಧಾರಿಯಾಗಿ ಅನೇಕ ಪಾತ್ರ ನಿರ್ವಹಿಸಿದ್ದರು. ಕುತ್ಯಾಳ ಮೇಳದ ಪ್ರಧಾನ ಸ್ತ್ರೀವೇಷಧಾರಿಯಾಗಿ ವೇಷ ಮಾಡಿದ್ದ ಇವರು, ಬಳಿಕ ವಿವಿಧ ಮೇಳಗಳಲ್ಲಿ ,ಸಂಘಗಳಲ್ಲಿ ಅತಿಥಿ ಕಲಾವಿದರಾಗಿ ಕಾರ್ಯನಿರ್ವಹಿಸಿದ್ದರು. ಕೆಮ್ತೂರು ದೊಡ್ಡಣ್ಣ ಶೆಟ್ಟಿ ನಾಟಕ ಮಂಡಳಿಯಲ್ಲಿಯೂ ಸ್ತ್ರೀವೇಷಧಾರಿಯಾಗಿ ಪಾತ್ರ ನಿರ್ವಹಿಸಿದ್ದ ಇವರು ಉಡುಪಿಯ ಗೀತಾಂಜಲಿ ಥಿಯೇಟರ್ ನಲ್ಲಿ ಸಹಾಯಕ ಪ್ರಬಂಧಕರಾಗಿ ಕಾರ್ಯನಿರ್ವಹಿಸಿದ್ದರು. ವೈದಿಕರ ಸಹಾಯಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಶ್ರೀಯುತರು ಪತ್ನಿ, ಬಂಧು-ಬಳಗ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಮುಳ್ಳೇರಿಯದಲ್ಲಿ ‘ಕಯ್ಯಾರ ಕೃತಿ ಸಂಚಾರ’ ಕಾರ್ಯಕ್ರಮ