Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಂ. ಜಿ. ಎಂ. ಕಾಲೇಜಿನಲ್ಲಿ ಯಕ್ಷಗಾನ ಭಾಗವತಿಕೆಯ ಪ್ರಾತ್ಯಕ್ಷಿಕೆ ಹಾಗೂ ದಾಖಲೀಕರಣ
    Music

    ಎಂ. ಜಿ. ಎಂ. ಕಾಲೇಜಿನಲ್ಲಿ ಯಕ್ಷಗಾನ ಭಾಗವತಿಕೆಯ ಪ್ರಾತ್ಯಕ್ಷಿಕೆ ಹಾಗೂ ದಾಖಲೀಕರಣ

    April 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಾಹೆ, ಯಕ್ಷಗಾನ ಕೇಂದ್ರ ಇಂದ್ರಾಳಿ ಹಾಗೂ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ “ಬಡಗುತಿಟ್ಟು ಯಕ್ಷಗಾನ ಭಾಗವತಿಕೆಯ ವಿವಿಧ ಶೈಲಿ-ಮಟ್ಟುಗಳ ಪ್ರಾತ್ಯಕ್ಷಿಕೆ ಹಾಗೂ ದಾಖಲೀಕರಣ ಕಾರ್ಯಕ್ರಮವು ದಿನಾಂಕ 07-04-2024ರ ರವಿವಾರದಂದು ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಹೆಯ ಸಹ ಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ “ಕಲೆಯ ಉಳಿವಿಗಾಗಿ ಯುವ ಸಮುದಾಯದ ಒಳಗೊಳ್ಳುವಿಕೆ ಪ್ರಮುಖವಾಗಿದ್ದು, ಮುಂದಿನ ಪೀಳಿಗೆಗೂ ಉತ್ತಮ ಭಾಗವತರು ರೂಪುಗೊಳ್ಳಬೇಕು. ಯಕ್ಷಗಾನಕಲಾಪ್ರಕಾರದಲ್ಲಿ ಭಾಗವತಿಕೆ ಕಲೆಯೂ ಮಹತ್ವದ ಭಾಗವಾಗಿದ್ದು, ಯುವ ಜನರಲ್ಲಿ ಈ ಬಗ್ಗೆ ಆಸಕ್ತಿ ಮೂಡಿಸಿ ಭವಿಷ್ಯದಲ್ಲಿ ಉತ್ತಮ ಗಮನ ಸೆಳೆಯುವ ಶಾಸ್ತ್ರೀಯ ಭಾಗವತರನ್ನು ಸಿದ್ಧಪಡಿಸಬೇಕಿದೆ.” ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ. ಜಿ. ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀ ನಾರಾಯಣ್ ಕಾರಂತ್ ಮತ್ತು ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಾನಂದ ಪೈ ಮಾತನಾಡಿ “ಯಕ್ಷಗಾನ ಭಾಗವತಿಕೆಯ ವಿವಿಧ ಶೈಲಿ ಹಾಗೂ ಮಟ್ಟುಗಳ ಪ್ರಾತ್ಯಕ್ಷಿಕೆ ಮತ್ತು ದಾಖಲೀಕರಣ ಪ್ರಶಂಸನೀಯ.” ಎಂದರು.

    ಯಕ್ಷಗಾನ ಗುರು, ಹಿರಿಯ ಭಾಗವತ ಹೆರಂಜಾಲು ಗೋಪಾಲ ಗಾಣಿಗ, ಯಕ್ಷಗಾನ ಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಉಪಸ್ಥಿತರಿದ್ದರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಸದಸ್ಯ ಪ್ರೋ. ಎಸ್. ವಿ. ಉದಯ್ ಕುಮಾರ್ ಶೆಟ್ಟಿ ಪ್ರಸ್ತಾವನೆಗೈದರು. ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಸ್ವಾಗತಿಸಿ, ಉಪನ್ಯಾಸಕರಾದ ರಾಘವೇಂದ್ರ ತುಂಗ ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವತರಾದ ವಿಷ್ಣು ಸುಬ್ರಾಯ ಹೆಗಡೆ ಹಿರೇಮಕ್ಕಿ, ಹಿರಿಯಣ್ಣ ಆಚಾರ್ಯ ಕಿಗ್ಗ, ಉದಯ ಕುಮಾರ್ ಹೊಸಾಳ, ನಾಗೇಶ್ ಕುಲಾಲ್ ನಾಗರಕೋಡಿಗೆ, ಮರವಂತೆ ಕೃಷ್ಣವಾಸ್, ಮದ್ದಳೆಯಲ್ಲಿ ಮಹೇಶ್ ಕುಮಾರ್ ಮಂದಾರ್ತಿ, ರಾಘವೇಂದ್ರ ಹೆಗಡೆ ಯಲ್ಲಾಪುರ ಹಾಗೂ ಚಂಡೆಯಲ್ಲಿ ಶ್ರೀಕಾಂತ ಶೆಟ್ಟಿ ಎಡಮೊಗೆ ಭಾಗವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleರಾಸಾ ಕನ್ನಡ ಮತ್ತು ಕಲಾ ಸಂಸ್ಕೃತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ಸಾಹಿತ್ಯ ಕವಿಗೋಷ್ಠಿ ಹಾಗೂ ‘ಕರ್ನಾಟಕ ಸೇವಾರತ್ನ ಪ್ರಶಸ್ತಿ’ 2024 ಪ್ರದಾನ ಸಮಾರಂಭ
    Next Article ಗೋವಿಂದದಾಸ ಕಾಲೇಜಿನಲ್ಲಿ ಅಭಿನಂದನಾ ಸಮಾರಂಭ ಮತ್ತು ‘ಗುರುಭ್ಯೋ ನಮಃ’ ಕೃತಿ ಬಿಡುಗಡೆ ಸಮಾರಂಭ
    roovari

    Add Comment Cancel Reply


    Related Posts

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    ಬೆಂಗಳೂರಿನ ಸೇವಾ ಸದನದಲ್ಲಿ ‘ಗಾಯನ ಸನ್ಮಾನ ವಂದನ’ ಕಾರ್ಯಕ್ರಮ | ಜೂನ್ 21

    June 16, 2025

    ಡಾ.ತಲ್ಲೂರು ಶಿವರಾಮ ಶೆಟ್ಟರಿಗೆ ‘ಕರುನಾಡ ಸೇವಾ ಕಣ್ಮಣಿ’ ರಾಜ್ಯ ಪ್ರಶಸ್ತಿ

    June 16, 2025

    ಪ್ರಸಿದ್ಧ ಚಂಡೆ ವಾದಕರಾದ ಸೂರ್ಯ ದೇವಾಡಿಗ ನಿಧನ

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.