Subscribe to Updates

    Get the latest creative news from FooBar about art, design and business.

    What's Hot

    ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವಿಶ್ವನೇತ ಡಿ. ಇವರ ಭರತನಾಟ್ಯ ರಂಗಪ್ರವೇಶ

    February 27, 2026

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಕ್ಷಗಾನ ಕಲೆಯನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವ ಕೆಲಸವನ್ನು ಶ್ರೀಸ್ಕಂದ ಯಕ್ಷಗಾನ ಕೇಂದ್ರ ಮಾಡುತ್ತಿರುವುದು ಶ್ಲಾಘನೀಯ : ಕಾಸರಗೋಡು ಚಿನ್ನಾ
    Yakshagana

    ಯಕ್ಷಗಾನ ಕಲೆಯನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವ ಕೆಲಸವನ್ನು ಶ್ರೀಸ್ಕಂದ ಯಕ್ಷಗಾನ ಕೇಂದ್ರ ಮಾಡುತ್ತಿರುವುದು ಶ್ಲಾಘನೀಯ : ಕಾಸರಗೋಡು ಚಿನ್ನಾ

    October 25, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕಾಸರಗೋಡು : ಯಕ್ಷಗಾನ ಎಂಬ ಶ್ರೇಷ್ಠಕಲೆಯನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವ ಕೆಲಸವನ್ನು ಶ್ರೀಸ್ಕಂದ ಯಕ್ಷಗಾನ ಕೇಂದ್ರ, ಪಾಯಿಚ್ಚಾಲು ಎಂಬ ಗ್ರಾಮೀಣ ಪ್ರದೇಶದಲ್ಲಿ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಕಾಸರಗೋಡು ಚಿನ್ನಾರವರು ಅಭಿಪ್ರಾಯಪಟ್ಟರು. ಯಕ್ಷಗಾನವು ನಾಟ್ಯ, ಅಭಿನಯ, ಮುದ್ರೆ, ಮಾತುಗಾರಿಕೆ ಇವೆಲ್ಲವನ್ನೂ ಒಳಗೊಂಡ ಪರಿಪೂರ್ಣ ಕಲೆಯಾಗಿದೆ. ಭಾರತೀಯ ಯಾವುದೇ ಕಲಾಪ್ರಕಾರಗಳಲ್ಲಿ ಹೀಗೆ ಕಾಣುವುದಕ್ಕೆ ಸಾಧ್ಯವಿಲ್ಲ ಹಾಗಾಗಿಯೇ ಯಕ್ಷಗಾನವು ಈಗಲೂ ಉನ್ನತ ಸ್ಥಾನದಲ್ಲಿದೆ ಎಂದು ಹೇಳಿದರು, ಅವರು ದಿನಾಂಕ 20 ಅಕ್ಟೋಬರ್ 2024 ರಂದು ಸ್ಕಂದ ಯಕ್ಷಗಾನಕೇಂದ್ರದ ರಂಗಪ್ರವೇಶ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾದ್ಯಾಯರು, ಕ್ಷೇತ್ರಕಲೆಯಾದ ಯಕ್ಷಗಾನವನ್ನು ಬೆಳೆಸುವಲ್ಲಿ ಕ್ಷೇತ್ರದ ಪಾತ್ರಹಿರಿದು. ಅದನ್ನು ಪೂರೈಸುವಲ್ಲಿ ಶ್ರೀಸ್ಕಂದ ಯಕ್ಷಗಾನ ಕೇಂದ್ರಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸಿದರು. ಕೂಡ್ಲು ಯಕ್ಷಗಾನದ ತವರು. ಆ ಯಕ್ಷಗಾನವನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಯಕ್ಷಗಾನ ಕೇಂದ್ರಗಳು ಅನಿವಾರ್ಯ ಮಾತ್ರವಲ್ಲ ಮಕ್ಕಳಿಗೆ ಪುರಾಣಗಳ ಅರಿವೂ ಸಾಧ್ಯ ಎಂದು ಕೇಂದ್ರದ ಲಾಂಛನವನ್ನು ಬಿಡುಗಡೆ ಮಾಡಿ ಶ್ರೀಗೋಪಾಲಕೃಷ್ಣ ಕ್ಷೇತ್ರದ ಅನುವಂಶಿಕ ಮೊಕ್ತೇಸರರಾದ ಕೆ. ಜಿ. ಶಾನುಭೋಗ್ ಮಾತನಾಡಿದರು. ಶೇಷವನ ಕ್ಷೇತ್ರದ ಆಡಳಿತ ಮೊಕ್ತೇಸರ ವೇಣುಗೋಪಾಲ, ಅನುವಂಶಿಕ ಮೊಕ್ತೇಸರ ಸದಾಶಿವ, ಕೂಡ್ಲು ಮೇಳದ ವ್ಯವಸ್ಥಾಪಕರಾದ ರವಿರಾಜ ಅಡಿಗ ಶುಭಹಾರೈಸಿದರು.
    ಸಮಾರಂಭದ ಅಧ್ಯಕ್ಷತೆಯನ್ನು ಕೇಂದ್ರದ ಅಧ್ಯಕ್ಷ ಕಿರಣ್ ಪ್ರಸಾದ್ ಕೂಡ್ಲು ವಹಿಸಿದರು. ಈ ಸಂದರ್ಭದಲ್ಲಿ ನಾಟ್ಯಗುರುಗಳಾದ ರಂಜಿತ್ ಗೋಳಿಯಡ್ಕ ಇವರಿಗೆ ಶಾಲು, ಹಾರ, ಸ್ಮರಣಿಕೆ ಹಾಗೂ ಫಲಪುಷ್ಪನೀಡಿ ಗೌರವಿಸಲಾಯಿತು. ಸಭಾಕಾರ್ಯಕ್ರಮದ ಬಳಿಕ ಪ್ರಮೀಳಾರ್ಜುನ-ಷಣ್ಮಖ ವಿಜಯ ಎಂಬ ಯಕ್ಷಗಾನ ನಡೆಯಿತು ಹಿಮ್ಮೇಳದಲಿ ಭಾಗವತರಾಗಿ ತಲ್ಪನಜೆ ವೆಂಕಟ್ರಮಣ ಭಟ್, ರಾಮಪ್ರಸಾದ್ ಮಯ್ಯ, ಚೆಂಡೆ ಮದ್ದಳೆಯಲ್ಲಿ ಹರೀಶ್ ಅಡೂರು, ರಿತೇಶ್ ಅಡ್ಕ, ವಿಕ್ರಂ ಮಯ್ಯ, ಚಕ್ರತಾಳದಲ್ಲಿ ಅರ್ಪಿತ್ ಕೂಡ್ಲು ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ100ನೇ ತಿಂಗಳ ಕಾರ್ಯಕ್ರಮ | ಅಕ್ಟೋಬರ್ 27
    Next Article ಶ್ರೀ ನಂದನೇಶ್ವರ ದೇವಸ್ಥಾನದ ಆವರಣದಲ್ಲಿ ಲೋಕರ್ಪಣೆಗೊಂಡ ‘ಚಿವುಟುವ ಚುಟುಕಗಳು, ಕುಟು ಕುವ ಕವಿತೆಗಳು’ ಕೃತಿ 
    roovari

    Add Comment Cancel Reply


    Related Posts

    ಮಂಗಳೂರು ವಿ.ವಿ.ಯ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರಕಟ

    February 26, 2026

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    February 25, 2026

    ಯಶಸ್ವೀ ಕಲಾವೃಂದದ ವಾರ್ಷಿಕೋತ್ಸವ ಸಮಾರಂಭ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.