Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ವಿದ್ವಾಂಸ ಬಿ. ಗೋಪಾಲಕೃಷ್ಣ ಕುರುಪ್‌ ನಿಧನ
    Kannada

    ಯಕ್ಷಗಾನ ವಿದ್ವಾಂಸ ಬಿ. ಗೋಪಾಲಕೃಷ್ಣ ಕುರುಪ್‌ ನಿಧನ

    March 19, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಗಾನ ಕ್ಷೇತ್ರದ ವಿದ್ವಜ್ಜನ ಪಂಕ್ತಿ ಭಾಜನರಾಗಿದ್ದ ಮದ್ದಲೆಗಾರ ಬರ್ಗುಳ ಗೋಪಾಲಕೃಷ್ಣ ಕುರುಪ್‌ ದಿನಾಂಕ 19 ಮಾರ್ಚ್ 2025ರಂದು ನಿಧನರಾದರು. ಇವರಿಗೆ 90 ವರ್ಷ ವಯಸ್ಸಾಗಿತ್ತು.
    ಚೆಂಡೆ-ಮದ್ದಲೆ ನುಡಿತಗಳಲ್ಲಿ ಶಾಸ್ತ್ರಜ್ಞಾನವನ್ನು ಪಡೆದುಕೊಂಡಿದ್ದ ಕುರುಪರು ಅದನ್ನು ಅಧಿಕೃತ ಪಠ್ಯರೂಪದಲ್ಲಿ ಪ್ರಕಟಿಸಿದ ಮೊದಲಿಗರಾಗಿದ್ದರು. ಅವರಿಗೆ ಭಾಗವತಿಕೆಯ ಬಗ್ಗೆಯೂ ಆಳವಾದ ಜ್ಞಾನವಿತ್ತು. 1952ರಲ್ಲಿ ಕೂಡ್ಲು ಮೇಳದಲ್ಲಿ ಪೂರ್ವರಂಗಕ್ಕೆ ಹಾಡುವ ಅವಕಾಶ ದೊರೆತು ಮದ್ಲೆಗಾರ ಕುದ್ರೆಕೂಡ್ಲು ರಾಮಭಟ್ಟರ ಮೆಚ್ಚುಗೆಗಳಿಸಿ, ಮುಂದೆ ವೃತ್ತಿಪರರಾಗಿ ಯಕ್ಷಗಾನ ಕ್ಷೇತ್ರವನ್ನು ಪ್ರವೇಶಿಸಿದ್ದರು. ಹಿರಿಯ ಬಲಿಪ ನಾರಾಯಣ ಭಾಗವತ, ಹಿರಿಯ ಅಗರಿ ಶ್ರೀನಿವಾಸ ಭಾಗವತ, ಹಿರಿಯ ಕುದ್ರೆಕೂಡ್ಲು ರಾಮ ಭಟ್ಟ, ನಾಂಬಾಡಿ ಸುಬ್ಬಯ ಶೆಟ್ಟಿ, ನೆಡ್ಲೆ ನರಸಿಂಹ ಭಟ್ಟ ಮೊದಲಾದವರ ಗುರುತ್ವದಲ್ಲಿ ಜ್ಞಾನವನ್ನು ಸಿದ್ಧಿಸಿಕೊಂಡು, ಅದೇ ಶ್ರದ್ಧೆಯಲ್ಲಿ ಗುರುಗಳಾಗಿ ಅನೇಕ ಮಂದಿ ಶಿಷ್ಯರನ್ನು ಸಿದ್ಧಗೊಳಿಸಿದ್ದರು. ಮೃದಂಗ ವಿದ್ವಾನ್‌ ಟಿ. ಆರ್‌. ಕೃಷ್ಣನ್‌ರಲ್ಲಿ ಮೃದಂಗ ನುಡಿತದ ಸೂಕ್ಷ್ಮಗಳನ್ನು ಕಲಿತಿದ್ದ ಇವರು ಅನೇಕ ಯಕ್ಷಗಾನ ಕಮ್ಮಟಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. 80ರ ದಶಕದಲ್ಲಿ ಕು. ಶಿ. ಹರಿದಾಸ ಭಟ್ಟ, ಮುಳಿಯ ಮಹಾಬಲ ಭಟ್ಟರ ನೇತೃತ್ವದಲ್ಲಿ ಎಂ. ಜಿ. ಎಂ. ಕಾಲೇಜಿನ ಆರ್‌. ಆರ್‌. ಸಿ. ಯಲ್ಲಿ ಜರಗಿದ ಹಿಮ್ಮೇಳದ ದಾಖಲಾತಿ ಕಮ್ಮಟದಲ್ಲಿ ಓರ್ವ ಪ್ರಮುಖ ಆಕರ ವ್ಯಕ್ತಿಯಾಗಿದ್ದರು. ಸುಳ್ಯದ ತೆಂಕುತಿಟ್ಟು ಹಿತರಕ್ಷಣ ವೇದಿಕೆಯ ದಾಖಲಾತಿಯಲ್ಲಿ ಬಲಿಪ ನಾರಾಯಣ ಭಾಗವತರ ಹಾಡುಗಳಿಗೆ ಕುರುಪರು ನೀಡಿದ ಮದ್ದಲೆ ಸಾಥಿಯ ಕೌಶಲ, ಅವರ ತಾಳ-ಲಯಗಳ ಕುರಿತ ಅವರ ತಳಸ್ಪರ್ಶಿ ಅನುಭವವನ್ನು ಅನಾವರಣಗೊಳಿಸುತ್ತದೆ.
    ಯಕ್ಷಗಾನದ ಹಿಮ್ಮೇಳ ವಿಭಾಗಕ್ಕೊಂದು ಲಕ್ಷಣ ಗ್ರಂಥವನ್ನು ರಚಿಸುವ ಪ್ರಯತ್ನವಾಗಿ ‘ತೆಂಕುತಿಟ್ಟು-ಪ್ರಾಥಮಿಕ ಯಕ್ಷಗಾನ ಪಾಠಗಳು’ ಕೃತಿಯನ್ನು ಬರೆದು ಪ್ರಕಟಿಸಿದ್ದರು. ಆ ಬಳಿಕ ‘ತೆಂಕುತಿಟ್ಟು ಯಕ್ಷಗಾನದ ಮದ್ದಲೆವಾದನ ಕ್ರಮ’ ಮತ್ತು ‘ತೆಂಕುತಿಟ್ಟು ಯಕ್ಷಗಾನದ ಚೆಂಡೆವಾದನ ಕ್ರಮ’ ಎಂಬ ಪ್ರಮುಖ ಕೃತಿಗಳನ್ನು ರಚಿಸಿದ್ದರು. ಯಕ್ಷಗಾನದ ತಾಳ ಸಂಬಂಧಿ ಅಧ್ಯಯನದ ಭಾಗವಾಗಿ ‘ತ್ತಿತ್ತಿತ್ತೆ’ ಎಂಬ ಪ್ರತ್ಯೇಕ ಕೃತಿ ಬರೆದಿರುವುದು ಅವರ ವಿದ್ವತ್ತಿನ ಪ್ರತೀಕವಾಗಿತ್ತು. ಮೈಸೂರಿನ ಮಹಾಮಹೋಪಾಧ್ಯಾಯ ಡಾ. ರಾ. ಸತ್ಯನಾರಾಯಣ ಅವರು ಕುರುಪರ ಕೃತಿಗಳನ್ನು ಯಕ್ಷಗಾನ ಕ್ಷೇತ್ರದ ಪಾಂಡಿತ್ಯಪೂರ್ಣ ಕೊಡುಗೆಗಳೆಂದು ಶ್ಲಾಘಿಸಿದ್ದರು. ‘ಚೆಂಡೆ-ಮದ್ದಲೆಗಳ ನಡುವೆ’ ಎಂಬ ಶಿೀರ್ಷಿಕೆಯಲ್ಲಿ ಆತ್ಮಕಥನವನ್ನು ಕೂಡ ಪ್ರಕಟಿಸಿದ್ದಾರೆ.
    ‘ಧರ್ಮಸ್ಥಳ’,’ ಕರ್ನಾಟಕ’, ‘ಬಳ್ಳಂಬೆಟ್ಟು’, ‘ಇರಾ’, ‘ಕರ್ನಾಟಕ-ಕಲಾವಿಹಾರ’ ಮೇಳಗಳಲ್ಲಿ ತಿರುಗಾಟ ನಡೆಸಿರುವ ಕುರುಪ್‌ ಸುತ್ತಮುತ್ತಲ ಊರುಗಳಲ್ಲಿ ಯಕ್ಷಗಾನ ಹಿಮ್ಮೇಳ ತರಗತಿಗಳನ್ನು ನಡೆಸಿ ಯಕ್ಷಗಾನ ಶಿಕ್ಷಕರಾಗಿ ಹೆಸರು ಪಡೆದವರು. ಆಸಕ್ತರು, ಜಿಜ್ಞಾಸುಗಳು ಸಿಕ್ಕಿದರೆ ಎಲ್ಲೆಂದರಲ್ಲಿ ತಾಳ-ಲಯ-ಛಂದಸ್ಸು ಇತ್ಯಾದಿ ವಿಷಯಗಳ ಬಗ್ಗೆ ಅವಿಶ್ರಾಂತವಾಗಿ ಚರ್ಚಿಸುತ್ತಿದ್ದರು. ಧರ್ಮಸ್ಥಳ ಯಕ್ಷಗಾನ ಕೇಂದ್ರದಲ್ಲಿ ಮೂರು ವರ್ಷ ಹಿಮ್ಮೇಳದ ಗುರುಗಳಾಗಿ ಸೇವೆ ಸಲ್ಲಿಸಿದ್ದರು.

    ಕೇರಳ ಮೂಲದವರಾದ ಕುರುಪ್‌ ಅವರ ಹಿರಿಯರು ದಕ್ಷಿಣ ಕನ್ನಡ ಜಿಲ್ಲೆಯ ಶಿಶಿಲದಲ್ಲಿ ನೆಲೆಸಿದವರು. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಳದಲ್ಲಿ ಬಹುಕಾಲ ವಾಸವಿದ್ದ ಇವರು ಇತ್ತೀಚೆಗಿನ ದಿನಗಳಲ್ಲಿ ಕೇರಳದ ನಿಲೇಶ್ವರದ ಮಕ್ಕಳ ಮನೆಯಲ್ಲಿ ನೆಲೆಸಿದ್ದರು. ಯಕ್ಷಗಾನ ಕಲಾರಂಗದ ನೇತೃತ್ವದಲ್ಲಿ ಒಂದು ತಿಂಗಳ ಕಾಲ ಜರಗಿದ ‘ಕೋಳ್ಯೂರು ರಾಮಚಂದ್ರ ರಾವ್‌- 90’ ಸಂಭ್ರಮಕ್ಕಾಗಿ ನಿಲೇಶ್ವರದ ಮನೆಯಲ್ಲಿಯೇ ಗೋಪಾಲಕೃಷ್ಣ ಕುರುಪ್‌ ಅವರ ಅಭಿನಂದನೆಯ ನುಡಿಗಳನ್ನು ದಾಖಲಿಸಿದ್ದು ಇಲ್ಲಿ ಸ್ಮರಣೀಯ. ಯಕ್ಷಗಾನ ಕಲಾರಂಗದ ಪ್ರಶಸ್ತಿಗೂ ಅವರು ಭಾಜನರಾಗಿದ್ದರು.

    ಗೋಪಾಲಕೃಷ್ಣ ಕುರುಪ್‌ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರ ‘ತಂಬೂರಿ’ ಮತ್ತು ‘ಕಾಯ ತಂಬೂರಿ’ ಕೃತಿ ಬಿಡುಗಡೆ ಕಾರ್ಯಕ್ರಮ | ಮಾರ್ಚ್ 21
    Next Article ವಿಶೇಷ ಲೇಖನ | ಬಹುಮುಖ ವ್ಯಕ್ತಿತ್ವದ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.