Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷ ಸಂಗಮದ 25ನೇ ವರ್ಷದ ಯಕ್ಷಗಾನ, ತಾಳಮದ್ದಳೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ
    Uncategorized

    ಯಕ್ಷ ಸಂಗಮದ 25ನೇ ವರ್ಷದ ಯಕ್ಷಗಾನ, ತಾಳಮದ್ದಳೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ

    August 15, 2024Updated:August 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ‘ಯಕ್ಷ ಸಂಗಮ’ ಇದರ 25ನೇ ವರ್ಷದ ಯಕ್ಷಗಾನ, ತಾಳಮದ್ದಳೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮವು 10 ಆಗಸ್ಟ್ 2024ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು.

    ಜೈನ ಮಠದ ಡಾ . ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಯಕ್ಷಗಾನ ಬೆಳವಣಿಗೆಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಮಹತ್ತರವಾಗಿದೆ.”  ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ತೆಂಕು ಬಡಗು ತಿಟ್ಟಿನ ಚಾರ್ಲಿ ಚಾಪ್ಲಿನ್ ಎಂದೇ ಖ್ಯಾತರಾದ ಪ್ರಸಿದ್ಧ ಹಾಸ್ಯಗಾರ ಸೀತಾರಾಮ ಕುಮಾರ್ ಕಟೀಲು ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿದ್ದರು.

    ಅಭಿನಂದನಾ ಭಾಷಣ ಮಾಡಿದ ಯಕ್ಷ ಸಂಗಮದ ಶಾಂತರಾಮ ಕುಡ್ವ “ತಮ್ಮ ನಿಜ ಜೀವನದಲ್ಲಿ  ನೋವಿನ ಬೇಗುದಿಯಲ್ಲಿ ಸಿಲುಕಿದರೂ ಯಕ್ಷಗಾನ ಲೋಕದಲ್ಲಿ ಅದನ್ನೆಲ್ಲಾ ಮರೆತು ಪ್ರೇಕ್ಷಕರನ್ನು  ಹಾಸ್ಯದ ಹೊನಲಿನಲ್ಲಿ ತೇಲಿಸಿಬಿಡುವ  ಸೀತಾರಾಮ ಕುಮಾರರದ್ದು ಮೇರು ವ್ಯಕ್ತಿತ್ವ. ಯಕ್ಷಗಾನವನ್ನೇ ಉಸಿರಾನ್ನಾಗಿಸಿರುವ ಸೀತಾರಾಮರು  ಗಾಡ್ ಫಾದರ್ ಇಲ್ಲದೇ ಬೆಳೆದವರು. ಆದರೂ ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿಯವರನ್ನು ಮಾನಸಿಕ ಗುರುಗಳನ್ನಾಗಿಸಿ ತಮ್ಮ ಸ್ವಂತ ಪರಿಶ್ರಮದಿಂದ ಸ್ತ್ರೀ ವೇಷ ಪುಂಡು ವೇಷ, ಹಾಸ್ಯ ಪಾತ್ರಗಳನ್ನು ಮಾಡಿ ಚಾರ್ಲಿ ಚಾಪ್ಲಿನ್ ಖ್ಯಾತಿ ಗಳಿಸಿದವರು. ವೇಷ ಮಾಡಿ ಜನರನ್ನು ರಂಜಿಸಲು ಅಪಾಯಗಳನ್ನು ಕೂಡ ಎದುರು ಹಾಕಿಕೊಂಡಿರುವವರು ಸೀತಾರಾಮರು.” ಎಂದರು.

    ಕಾರ್ಯಕ್ರಮದಲ್ಲಿ ಸುದರ್ಶನ್ ಎಂ, ಸ್ವಾಗತಿಸಿ, ಮಹಾವೀರ ಪಾಂಡಿ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ‘ಪಣಿಯಾಡಿ ಕಾದಂಬರಿ ಪ್ರಶಸ್ತಿ’ ಪ್ರದಾನ | ಆಗಸ್ಟ್ 18
    Next Article ಮಂಗಳೂರಿನ ಪುರಭವನದಲ್ಲಿ ‘ಸನಾತನ ನೃತ್ಯೋತ್ಸವ’ | ಆಗಸ್ಟ್ 17
    roovari

    Comments are closed.

    Related Posts

    ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ‘ಸಾಹಿತ್ಯ ಮತ್ತು ಕಲಾ ಉತ್ಸವ – 2025’ | ಜೂನ್ 28

    June 27, 2025

    ಯಕ್ಷಶಿಕ್ಷಣ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ

    June 26, 2025

    ಕಯ್ಯಾರಿನಲ್ಲಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ | ಜೂನ್ 18

    June 16, 2025

    ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’

    April 4, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.