Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ
    Yakshagana

    ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ

    March 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ಎನ್‌. ಎಸ್‌. ಕಿಲ್ಲೆ ಪ್ರತಿಷ್ಠಾನಗಳ ಸಂಯುಕ್ತ ಆಶ್ರಯದಲ್ಲಿ ಯಕ್ಷ ಸಂವಾದ ಕಾರ್ಯಕ್ರಮವು ದಿನಾಂಕ 09-03=2024ರಂದು ಪುತ್ತೂರಿನ ಸಂತ ಫಿಲೊಮಿನ ಕಾಲೇಜಿನಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ “ಪರಮ ಶಿಷ್ಯ ಭೀಷ್ಮ” ಎಂಬ ಯಕ್ಷಗಾನ ತಾಳಮದ್ದಳೆಯನ್ನು ಪ್ರಸ್ತುತಪಡಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಿಲ್ಲೆ ಪ್ರತಿಷ್ಠಾನ ಕೆದಂಬಾಡಿ ಇದರ ಅಧ್ಯಕ್ಷರು ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಕಡಮಜಲು ಸುಭಾಷ್‌ ರೈ “ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರವು ಭಾರತೀಯ ಮಹಾ ಕಾವ್ಯ ಹಾಗೂ ಕಲಾ ಶ್ರೀಮಂತಿಕೆಯನ್ನು ಯಕ್ಷಪ್ರೇಮಿಗಳಿಗೆ ಯಕ್ಷಸಂವಾದ ಸರಣಿ ಕಾರ್ಯಕ್ರಮಗಳ ಮೂಲಕ ಉಣಬಡಿಸುತ್ತಿದೆ. ಯಕ್ಷ ಕಲಾ ಕೇಂದ್ರದ ವತಿಯಿಂದ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳು ಮೂಡಿಬರಲಿ. ಕೇಂದ್ರವು ಆಯೋಜಿಸುವ ಎಲ್ಲಾ ಕರ‍್ಯಕ್ರಮಗಳಿಗೆ ಕಿಲ್ಲೆ ಪ್ರತಿಷ್ಠಾನದ ವತಿಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ.” ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟೊನಿ ಪ್ರಕಾಶ್‌ ಮೊಂತೆರೋ ಮಾತನಾಡಿ “ಸಂಭಾಷಣೆಯೇ ತಾಳಮದ್ದಳೆಯ ಜೀವಾಳ. ತಾಳಮದ್ದಳೆಯಲ್ಲಿ ಪ್ರಮುಖವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವುದು ಕಲಾವಿದರ ವಾಕ್ಚಾತುರ್ಯದಿಂದ. ಸಂಗೀತ ಹಾಗೂ ಸಂಭಾಷಣೆಯ ಮೂಲಕ ತಾಳಮದ್ದಳೆಯು ಪೌರಾಣಿಕ ಪಾತ್ರಗಳಿಗೆ ಜೀವತುಂಬುತ್ತದೆ. ಕಲಾವಿದರು ತಮ್ಮ ಅರ್ಥಗಾರಿಕೆಯ ಮೂಲಕ ಪ್ರೇಕ್ಷಕರನ್ನು ಬೇರೇ ಲೋಕಕ್ಕೆ ಕೊಂಡೊಯ್ಯತ್ತಾರೆ. ಕಲೆಯ ಮುಖಾಂತರ ಸಮಾಜಕ್ಕೆ ಉತ್ತಮ ಸಂದೇಶ ಸಾರೋಣ.” ಎಂದು ಹೇಳಿದರು.

    ಕಲಾವಿದರಾದ ಪ್ರಶಾಂತ ರೈ, ಲವ ಕುಮಾರ್, ವಿಷ್ಣು ಶರಣ, ಪ್ರೊ. ಗಣರಾಜ ಕುಂಬ್ಳೆ, ವೆಂಕಟೇಶ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉಪಪ್ರಾಂಶುಪಾಲರಾದ ಡಾ. ವಿಜಯ್ ಕುಮಾರ್ ಎಂ. ಸ್ವಾಗತಿಸಿ, ಯಕ್ಷ ಕಲಾಕೇಂದ್ರದ ಸಂಚಾಲಕ ಪ್ರಶಾಂತ ರೈ ವಂದಿಸಿದರು. ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಭಿಷೇಕ್ ಸುವರ್ಣ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಸುರಾನ ಕಾಲೇಜಿನಲ್ಲಿ ಕವಿ ಕುಮಾರವ್ಯಾಸ ಕುರಿತ ವಿಚಾರ ಸಂಕಿರಣ ಹಾಗೂ ಕಾವ್ಯ ವಾಚನ
    Next Article ‘ತೌಳವಸಿರಿ’ ಪ್ರಶಸ್ತಿ, ಡಾ‌. ಸಾರಾ ದತ್ತಿ ಪ್ರಶಸ್ತಿ ಮತ್ತು ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.