Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

    June 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ
    Yakshagana

    ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

    July 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಬಡಗುತಿಟ್ಟಿನ ಪ್ರಸಿದ್ದ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ (75) ಇವರು ದಿನಾಂಕ 09-07-2024ರಂದು ರಾತ್ರಿ ಹೊನ್ನಾವರದಲ್ಲಿ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು ಇದ್ದಾರೆ. ಹೊನ್ನಾವರ ತಾಲೂಕಿನ ಹಡಿನಬಾಳ ಸಮೀಪದ ಕಪ್ಪೆಕೆರೆ ನಿವಾಸಿಯಾದ ಈಶ್ವರ ಹೆಗಡೆ ಮತ್ತು ಗೋಪಿ ದಂಪತಿಗಳ ಸುಪುತ್ರರಾಗಿರುವ ಮಹಾದೇವ ಹೆಗಡೆ 18ನೇ ವಯಸ್ಸಿನಲ್ಲಿ ಬಣ್ಣದ ಲೋಕ ಪ್ರವೇಶಿಸಿದವರು. ಅವರ ಕುಟುಂಬವೇ ಯಕ್ಷಗಾನ ರಂಗದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಗಣನೀಯ ಕೊಡುಗೆ ನೀಡಿದೆ. ಭೀಮ, ವಲಲ, ಸುಗ್ರೀವ, ವಾಲಿ, ರಾಮ, ಮಹೋಗ್ರ, ಜಮದಗ್ನಿ, ರಾವಣ, ಮಾಗದ, ಹರಿಶ್ಚಂದ್ರ, ವಿಶ್ವಾಮಿತ್ರ ಮುಂತಾದ ಪಾತ್ರಗಳ ಮೂಲಕ ಕಲಾಸೇವೆಗೈದ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನದಿಂದ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

    ಸಹೋದರರಾದ ಪ್ರಸಿದ್ದ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಲ್ಲಿ ಯಕ್ಷಗಾನ ಕಲಿತು, ಕೆರೆಮನೆ ಮಹಾಬಲ ಹೆಗಡೆಯವರ ಗರಡಿಯಲ್ಲಿ ಪಳಗಿದ ಇವರು ಶ್ರೇಷ್ಠ ಕಲಾವಿದರಾಗಿ ರೂಪುಗೊಂಡಿದ್ದರು. ಗುಂಡುಬಾಳ, ಇಡಗುಂಜಿ, ಬಚ್ಚಗಾರು, ಅಮೃತೇಶ್ವರಿ, ಶಿರಸಿ, ಪಂಚಲಿಂಗ, ಮಂದಾರ್ತಿ ಮೇಳಗಳಲ್ಲಿ ಐದು ದಶಕಗಳ ಕಾಲ ಕಲಾ ಸೇವೆ ಮಾಡಿದ್ದರು. ಶಿರಸಿ ಮೇಳದಲ್ಲಿ ವ್ಯವಸ್ಥಾಪಕರಾಗಿಯೂ ಕಾರ್ಯನಿರ್ವಹಿಸಿದ್ದರು. ಖಳ ಮತ್ತು ಸಾತ್ವಿಕ ಪಾತ್ರಗಳನ್ನು ಸಮರ್ಥವಾಗಿ ಪ್ರಸ್ತುತಪಡಿಸುತ್ತಾ ಕಲಾಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ, ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಬಾಯಾರು ಇವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ
    Next Article ಪುತ್ತೂರಿನಲ್ಲಿ ‘ತುಳು ಭಾಷೆ – ಸಂಸ್ಕೃತಿ ಕಾರ್ಯಾಗಾರ’ | ಜುಲೈ 13
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಮಂಗಳಾದೇವಿ ದೇವಸ್ಥಾನದಲ್ಲಿ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 14

    June 12, 2026

    ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಅರ್ಥಾಂಕುರ-20’ ಸರಣಿ ತಾಳಮದ್ದಳೆ

    June 11, 2026

    ತೆಕ್ಕಟ್ಟೆ ಯಶಸ್ವಿ ಯಕ್ಷಗಾನ ಕೇಂದ್ರದ ತರಗತಿ ಶುಭಾರಂಭ

    June 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.