Subscribe to Updates

    Get the latest creative news from FooBar about art, design and business.

    What's Hot

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ವಿಶೇಷ ಲೇಖನ – ಗಾಯಕ ರತ್ನ ಡಾ. ಬಿ. ದೇವೇಂದ್ರಪ್ಪ

    June 3, 2025

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ
    Dance

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಪ್ರತಿವರ್ಷ ಯಕ್ಷಗಾನ ಕಲಾರಂಗ ಮೇ 31ರಂದು ನಡೆಸುವ ಕಲಾವಿದರ ಸಮಾವೇಶಕ್ಕ ಈ ವರ್ಷ ಸುವರ್ಣದ ಮೆರಗು. ಶ್ರೀಕೃಷ್ಣಮಠ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ದಿನಪೂರ್ತಿ ಕಾರ್ಯಕ್ರಮವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 31 ಮೇ 2025ರಂದು ಸಂಪನ್ನಗೊಂಡಿತು. ಅಪರಾಹ್ನದವರೆಗಿನ ಕಲಾಪಗಳು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ಜರಗಿತು. ಬೆಳಿಗ್ಗೆ 10-00 ಗಂಟೆಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಉದ್ಯಮಿ ಗೋಪಾಲ ಸಿ. ಬಂಗೇರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಅಕಾಡೆಮಿಯ ಸದಸ್ಯ ಸತೀಶ ಅಡಪ ಉಪಸ್ಥಿತರಿದ್ದರು. ಅಕಾಡೆಮಿಯ ರಿಜಿಸ್ಟ್ರಾರ್ ನಮೃತ ಸ್ವಾಗತಿಸಿ, ಗಣೇಶ ಎಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಪೂರ್ವಾಹ್ನ 10-30 ಗಂಟೆಗೆ ಮಾಧವ ಮಾತೃಗ್ರಾಮಂ ಕೂಡಿಯಾಟ್ಟಮ್ ಗುರುಕುಲಂ, ತ್ರಿಶೂರ್ ಇವರಿಂದ ‘ಸೀತಾಪಾರಣಂ-ಜಟಾಯುವಧಂ ಕೂಡಿಯಾಟ್ಟಮ್’ ಪ್ರದರ್ಶನಗೊಂಡಿತು. ಪ್ರೊ. ಕೆ. ಸದಾಶಿವ ರಾವ್ ಕಾರ್ಯಕ್ರಮ ನಿರೂಪಿಸಿ, ಗಣೇಶ್ ಬ್ರಹ್ಮಾವರ ವಂದಿಸಿದರು.

    ಅಪರಾಹ್ನ 11.30 ಗಂಟೆಗೆ ‘ಕಲೆ ಪೂರ್ಣಾವಧಿ ಉದ್ಯೋಗವಾಗಿರಬೇಕೆ? ಉಪವೃತ್ತಿಯಾಗಿರಬೇಕೆ?’ ಎಂಬ ವಿಷಯದ ಕುರಿತು ಕಲಾವಿದರಿಂದ ಸಮಾಲೋಚನೆ ನಡೆಯಿತು. ಅರ್ಥಧಾರಿ ಪವನ್ ಕಿರಣ್ ಕೆರೆ ಸಮನ್ವಯಕಾರರಾಗಿದ್ದರು. ಕೊಂಡದಕುಳಿ ರಾಮಚಂದ್ರ ಹೆಗಡೆ, ವಾಸುದೇವ ರಂಗಾಭಟ್, ಪೆರ್ಮುದೆ ಜಯಪ್ರಕಾಶ್ ಶೆಟ್ಟಿ, ವಿದ್ಯಾಧರ ಜಲವಳ್ಳಿ, ಡಾ. ಶ್ರುತಕೀರ್ತಿ, ರಾಮ್ ಪ್ರಕಾಶ್ ಕಲ್ಲೂರಾಯ, ಪ್ರಸನ್ನ ಶೆಟ್ಟಿಗಾರ್, ಮಹೇಶ್ ಮಂದಾರ್ತಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ನಾರಾಯಣ ಎಂ. ಹೆಗಡೆ ನಿರೂಪಿಸಿದರು. ಬೆಳಿಗ್ಗೆ 9-00 ಗಂಟೆಯಿಂದ ಅಪರಾಹ್ನ 1-00 ಗಂಟೆಯವರೆಗೆ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಣಿಪಾಲ ಇಲ್ಲಿನ ವೈದ್ಯರಿಂದ ಕಲಾವಿದರಿಗೆ ಉಚಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಡಾ. ರಾಜೇಶ್ ನಾವುಡ, ಡಾ. ಶೈಲಜಾ ಇದನ್ನು ಸಂಯೋಜಿಸಿದರು.

    ಅಪರಾಹ್ನ 2-30ರಿಂದ ನಾಡೋಜ ಡಾ. ಜಿ. ಶಂಕರ್ ಅಧ್ಯಕ್ಷತೆಯಲ್ಲಿ ಐವತ್ತು ಜನ ಹಿರಿಯ ಕಲಾವಿದರಿಗೆ ತಲಾ ಐವತ್ತು ಸಾವಿರ ಸುವರ್ಣ ನಿಧಿಯೊಂದಿಗೆ ಸುವರ್ಣ ಪ್ರಶಸ್ತಿ ಪ್ರದಾನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಸುವರ್ಣ ಉಡುಗೊರೆ ವಿತರಿಸಿದರು. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಎಚ್.ಎಸ್. ಶೆಟ್ಟಿ ಸುವರ್ಣ ನುಡಿ ನುಡಿದರು. ಇದೇ ಸಂದರ್ಭದಲ್ಲಿ ಹನ್ನೆರಡು ಜನ ಕಲಾವಿದರಿಗೆ ತಲಾ 20,000 ರೂಪಾಯಿಯಂತೆ ಗೃಹ ನಿರ್ಮಾಣದ ಉಡುಗೊರೆ, ಓರ್ವ ಕಲಾವಿದರಾದ ನಾರಾಯಣ ಪೂಜಾರಿ ಪತ್ನಿಗೆ ರೂ.30,000 ಸಾಂತ್ವನ ನಿಧಿ ಹಾಗೂ ಮೂವರು ಕಲಾವಿದರಿಗೆ ವೈದ್ಯಕೀಯ ನೆರವು ವಿತರಿಸಲಾಯಿತು. ವಿದ್ಯಾ ಪೋಷಕ್ ಮೂಲಕ ಅಮೇರಿಕದ ಶಿವಳ್ಳಿ ಕುಟುಂಬದವರು ಕೊಡಮಾಡಿದ ರೂ.2,10,438/- ನಗದನ್ನು ಆದಿಉಡುಪಿಯ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಆಡಳಿತ ಮಂಡಳಿಗೆ ನೀಡಲಾಯಿತು.

    ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಶ್ರೀ ಯಶಪಾಲ್ ಸುವರ್ಣ, ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಕಿರಣಕುಮಾರ್ ಕೊಡ್ಗಿ, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ, ಉದ್ಯಮಿಗಳಾದ ಶ್ರೀ ಪಿ. ಪುರುಷೋತ್ತಮ ಶೆಟ್ಟಿ, ಶ್ರೀ ಹರಿಯಪ್ಪ ಕೋಟ್ಯಾನ್ ಅಭ್ಯಾಗತರಾಗಿ ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್ ಸ್ವಾಗತಿಸಿ, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಎಂ. ಹೆಗಡೆ ಮತ್ತು ವಿದ್ಯಾಪ್ರಸಾದ್ ಕಲಾವಿದರ ಪರಿಚಯವನ್ನು ಮಾಡಿದರು. ವಿವಿಧ ವೃತ್ತಿ ಮೇಳಗಳ 700ಕ್ಕೂ ಹೆಚ್ಚು ಕಲಾವಿದರು ಪಾಲ್ಗೊಂಡಿದ್ದರು. ಎಲ್ಲರಿಗೂ ರೂ.750/- ಮೊತ್ತದ ಜಮಖಾನೆಯನ್ನು ಉಡುಗೊರೆಯಾಗಿ ನೀಡಲಾಯಿತು. 70 ರಿಂದ 90 ವಯೋಮಾನದ 50 ಹಿರಿಯ ಕಲಾವಿದರಿಗೆ ತಲಾ ರೂ.50,000/- ನಗದು ನೀಡಿ ಗೌರವಿಸಿದಾಗ ಆ ಹಿರಿಯ ಜೀವಿಗಳಿಗಾದ ಸಂಭ್ರಮವೇ ಕಾರ್ಯಕರ್ತರಿಗೆ ಧನ್ಯತೆಯ ಕ್ಷಣವಾಗಿತ್ತು. ಈ ಸಮಾರಂಭ ನಿಜಕ್ಕೂ ಸುವರ್ಣಾಕ್ಷರದಲ್ಲಿ ಬರೆಯಬೇಕಾದ ಸುವರ್ಣ ಸಡಗರ.

    baikady dance Literature Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20
    Next Article ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04
    roovari

    Add Comment Cancel Reply


    Related Posts

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025

    ಕೊಂಡೆವೂರಿನಲ್ಲಿ ತುಲುವೆರೆ ಕಲ ಸಂಘಟನೆಯ ಎರಡನೇ ‘ವರ್ಸೋಚ್ಚಯ’

    June 3, 2025

    ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿಯವರಿಗೆ ಗೃಹ ಸನ್ಮಾನ

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.