Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ಚೇತನಾ ಬಾಲವಿಕಾಸ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ
    Yakshagana

    ಮಂಗಳೂರು ಚೇತನಾ ಬಾಲವಿಕಾಸ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    December 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ವಿಠೋಬಾ ದೇವಸ್ಥಾನ ರಸ್ತೆಯಲ್ಲಿರುವ ವಿಶೇಷ ವಿಕಲಚೇತನ ವಿದ್ಯಾರ್ಥಿಗಳಿಗಾಗಿರುವ ಸೇವಾ ಭಾರತಿ (ರಿ.)ಯ ವತಿಯಿಂದ ನಡೆಸಲ್ಪಡುವ ಚೇತನಾ ಬಾಲವಿಕಾಸ ಕೇಂದ್ರದ ವಿದ್ಯಾರ್ಥಿಗಳಿಂದ ಮಂಗಳೂರಿನ ಪುರಭವನದಲ್ಲಿ ದಿನಾಂಕ 15-12-2023ರಂದು ವಾರ್ಷಿಕೋತ್ಸವದ ಪ್ರಯುಕ್ತ ‘ಜಾಂಬವತಿ ಕಲ್ಯಾಣ’ವು ಪ್ರೇಕ್ಷಕರ ಮನ ಗೆದ್ದು ವಿಜೃಂಭಣೆಯಿಂದ ಜರಗಿತು.

    ವಿಕಲ ಚೇತನ ಮಕ್ಕಳಾದರೂ ಪರಾವಲಂಬನೆ ಇಲ್ಲದೇ ಸ್ವತಂತ್ರರಾಗಿ ನಟಿಸಿ ಪುರಭವನದಲ್ಲಿ ತುಂಬಿ ತುಳುಕಿದ ಕಲಾಪ್ರೇಮಿಗಳನ್ನು ನಿಬ್ಬೆರಗುಗೊಳಿಸಿದರು. ನೃತ್ಯ, ಹಾಡು, ಕುಣಿತ… ಹೀಗೆ ಬೇರೆ ಬೇರೆ ಕಾರ್ಯಕ್ರಮಗಳ ಮಧ್ಯೆಯೂ ಯಕ್ಷಗಾನ ರಂಜಿಸಿತು. ನೃತ್ಯ, ಅಭಿನಯ, ಕಲಾವಿದರ ಹೊಂದಾಣಿಕೆ ಎಲ್ಲೂ ರಾಜಿ ಮಾಡಿಕೊಳ್ಳದೇ ಸಶಕ್ತರಾಗಿ ; ಆತ್ಮಾಭಿಮಾನದಿಂದ ಪಾತ್ರಗಳೇ ಆಗಿ ಮೆರೆದು .. ಸಮಾಜದಲ್ಲಿ ತಮಗೆ ಯಾರದೇ ಅನುಕಂಪ ಬೇಡ; ಪ್ರೋತ್ಸಾಹ ನೀಡಿ ಸಾಕು… ಎನ್ನುವ ಹಾಗೆ ಯಕ್ಷಗಾನವನ್ನು ಕಳೆಗಟ್ಟಿಸಿದರು. ಜಾಂಬವಂತನಾಗಿ – ದೇವೇಶ, ಶ್ರೀಕೃಷ್ಣನಾಗಿ – ಶೀತಲ್, ಬಲರಾಮನಾಗಿ – ಕಿರಣ್, ನಾರದನಾಗಿ – ದಿವ್ಯಜ್ಯೋತಿ ಮತ್ತು ಜಾಂಬವತಿಯಾಗಿ – ಅನುಷಾ ಪಾತ್ರ ನಿರ್ವಹಣೆ ಮಾಡಿದರು.

    ಈ ಸಂಸ್ಥೆಯ ವಿಶ್ವಸ್ಥರಾದ ಶ್ರೀ ವಿನೋದ್ ಶೆಣೈ ಅವರು ಈ ವಿದ್ಯಾರ್ಥಿಗಳ ಬೆನ್ನು ತಟ್ಟಿ ಧೈರ್ಯ ತುಂಬಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಪ್ರೀತಾರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನಿರ್ದೇಶಕರಾಗಿ ವರ್ಕಾಡಿ ರವಿ ಅಲೆವೂರಾಯರು ಇದ್ದರು. ಸಹಕಾರಿಗಳಾಗಿ ವಿಜಯಲಕ್ಷ್ಮೀ ಯಲ್.ಎನ್., ಶ್ರೀಮತಿ ವಾಣಿ, ಶ್ರೀಮತಿ ಚಂಪಾ, ಶ್ರೀ ನರಸಿಂಹರಾಜು ವಿದ್ಯಾರ್ಥಿಗಳನ್ನು ಮುನ್ನಡೆಸಿದ್ದರು. ಯೂಶಾನ್ ಎ೦. ಪೂಜಾರಿ ವೇಷಭೂಷಣದಲ್ಲಿ ಸಹರಿಸಿದ್ದರು. ಹಿಮ್ಮೇಳ ಕಲಾವಿದರಾಗಿ ಲಕ್ಷೀನಾರಾಯಣ ಹೊಳ್ಳ, ಸ್ಕ೦ದ ಕೊನ್ನಾರ್, ವರ್ಕಾಡಿ ಮಧುಸೂದನ ಅಲೆವೂರಾಯ ಮಕ್ಕಳಿಗೆ ಸಾಥ್ ನೀಡಿದರು.

    ವಿಕಲ ಚೇತನರಾದರೂ ಉಳಿದವರಿಗೆ ಬಿಟ್ಟಿಲ್ಲ… ಇವರಿಗೆ ಸಮಾಜದ ಬೆಂಬಲ ಬೇಕು… ಎಂದು ಜನರಾಡುತ್ತಾ ಸಾಗುವುದು ಕಂಡುಬರುತ್ತಿತ್ತು. ಹೌದು! ಬನ್ನಿ ಬಾಂಧವರೇ ‘ಅವರಿಗಾಗಿ ಮಿಡಿಯೋಣ. ಅವರೇ ಸಿದ್ಧಪಡಿಸಿದ ಗೃಹ ಬಳಕೆಗೆ, ನಿತ್ಯೋಪಯೋಗಕ್ಕಾಗಿ ಬಳಸುವ ವಸ್ತುಗಳನ್ನು ಖರೀದಿಸಿ ಅವರಿಗೆ ಆರ್ಥಿಕ ಬೆಂಬಲ ನೀಡೋಣ. ದೇವರಂತಹಾ ಈ ಮಕ್ಕಳಿಗೆ ದೇವರ ಅನುಗ್ರಹವಿರಲಿ ಎಂದು ಕೋರೋಣ. ದಯವಿಟ್ಟು ಇದನ್ನು ವಿಶೇಷವಾಗಿ ವಿಶೇಷ ಚೇತನ ಮಕ್ಕಳಿಗಾಗಿ ಪ್ರಕಟಿಸಿ… ನಮ್ಮೀ ಅಳಿಲ ಸೇವೆಯನ್ನು ಅರ್ಪಿಸೋಣ.

    Share. Facebook Twitter Pinterest LinkedIn Tumblr WhatsApp Email
    Previous Articleಅಂಕಿತ ಪುಸ್ತಕ ಹಾಗೂ ಬುಕ್ ಬ್ರಹ್ಮ ಸಹಯೋಗದಲ್ಲಿ ಕೃತಿಗಳ ಲೋಕಾರ್ಪಣಾ ಸಮಾರಂಭ
    Next Article ‘ಕೊಗ್ಗ ದೇವಣ್ಣ ಕಾಮತ್‌’ ಪ್ರಶಸ್ತಿಗೆ ಏಳ್ ಜಿತ್ ಸದಾನಂದ ಪ್ರಭು ಆಯ್ಕೆ | ಪ್ರಶಸ್ತಿ ಪ್ರದಾನ ಜನವರಿ 28
    roovari

    Add Comment Cancel Reply


    Related Posts

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.