ದಾವಣಗೆರೆ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ.) ಇದರ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಿಂದ ದಿನಾಂಕ 11 ಫೆಬ್ರವರಿ 2025ರಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಯಕ್ಷರಂಗ, ಯಕ್ಷಗಾನ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಇವರಿಗೆ ‘ಯಕ್ಷಗಾನ ಗೊಂಬೆಸಿರಿ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಲಾಯಿತು ಎಂದು ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ತಿಳಿಸಿದ್ದಾರೆ.
“ದಾವಣಗೆರೆಯಲ್ಲಿ ಯಕ್ಷಗಾನ ಸೇರಿದಂತೆ ಕಲೆ, ಸಾಹಿತ್ಯ, ಸಂಗೀತ ಹೀಗೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಯಾವುದೇ ಸ್ವಾರ್ಥವಿಲ್ಲದೇ ಹೊಸ ಹೊಸ ಪರಿಕಲ್ಪನೆಗಳೊಂದಿಗೆ ಸಾಧನೆಯ ಜತೆಯಲ್ಲಿ ದಾವಣಗೆರೆಯ ಮಹಿಳೆಯರಿಗೆ ಯಕ್ಷಗಾನ ಪ್ರದರ್ಶನ ಯಶಸ್ವಿಗೊಳಿಸಿದ ಶೆಣೈಯರಿಗೆ ಅಭಿಮಾನದಿಂದ ಅಭಿನಂದಿಸಲಾಗಿದೆ” ಎಂದು ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗೀತಾಂಜಲಿ ಭಾಸ್ಕರ್ ಕಾಮತ್ ತಿಳಿಸಿದ್ದಾರೆ. ವೇದಿಕೆಯಲ್ಲಿ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಶ್ರೀಮತಿ ಸನ್ನಿಧಿ ಸಂದೀಪ್ ಶೆಣೈ, ಕುಮಾರಿ ಮಾನ್ಯ ಶೆಣೈಯವರು ಉಪಸ್ಥಿತರಿದ್ದರು.