Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೆ. ಸುರೇಂದ್ರ ಶೆಣೈಯವರಿಗೆ ‘ಯಕ್ಷಗಾನ ಕಲಾರಾಧಕ ಪ್ರಶಸ್ತಿ’
    Awards

    ಕೆ. ಸುರೇಂದ್ರ ಶೆಣೈಯವರಿಗೆ ‘ಯಕ್ಷಗಾನ ಕಲಾರಾಧಕ ಪ್ರಶಸ್ತಿ’

    March 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಎರಡುವರೆ ದಶಕ ಕಾಂತಾವರ, ಪುತ್ತೂರು, ಬಪ್ಪನಾಡು, ಸುಂಕದಕಟ್ಟೆ, ಸುರತ್ಕಲ್ ಮೇಳಗಳಲ್ಲಿ ಹಾಗೂ ದೀರ್ಘಕಾಲ ಹಲವು ಸಂಘಗಳಲ್ಲಿ ಕಲಾ ಸೇವೆಗೖದ ತೆಂಕುತಿಟ್ಟಿನ ಹಿರಿಯ ಭಾಗವತ ಕೆ. ಸುರೇಂದ್ರ ಶೆಣೈ ದಂಪತಿಗಳನ್ನು ಪುರಸ್ಕರಿಸುವ ಒಂದು ಆತ್ಮೀಯ ಕಾರ್ಯಕ್ರಮ ಕೆರ್ವಾಶೆ ಮಹಾಲಿಂಗೇಶ್ವರ ದೇವಳದ ಆವರಣದಲ್ಲಿ ದಿನಾಂಕ 19 ಮಾರ್ಚ್ 2025ರಂದು ಜರಗಿತು.

    ಯು. ವಿಶ್ವನಾಥ ಶೆಣೈ, ಪ್ರಭಾವತಿ ವಿ. ಶೆಣೈ ದಂಪತಿಗಳ ಪ್ರಾಯೋಜಕತ್ವದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಆಯೋಜಿಸಿದ್ದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ದೇವಳದ ಮೊಕ್ತೇಸರರಾದ ರಮೇಶ ಕಾರ್ಣಿಕ್ “ತಂತ್ರಜ್ಞಾನದ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿರುವ ನಮ್ಮ ಕಲೆ, ಸಂಸ್ಕೃತಿಯನ್ನು ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಉಡುಪಿ ಕಲಾರಂಗದ ಕಾರ್ಯ ಪ್ರಶಂಸಾರ್ಹ” ಎಂದು ಹೇಳಿದರು.

    ಮಹಾವೀರ ಪಾಂಡಿ ಸಮ್ಮಾನಿತರನ್ನು ಪರಿಚಯಿಸಿದರು. ನಿರಂಜನ ಭಟ್ ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು. ನಾರಾಯಣ ಎಂ. ಹೆಗಡೆ ಪ್ರಶಸ್ತಿ ಪತ್ರ ವಾಚಿಸಿದರು. ಪ್ರಶಸ್ತಿಯು ರೂ.20,000/- ನಗದು ಪುರಸ್ಕಾರ, ಪ್ರಶಸ್ತಿ ಪರಿಕರ ಒಳಗೊಂಡಿತ್ತು. ಈ ಸಂದರ್ಭದಲ್ಲಿ ಸಂಸ್ಥೆಯ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ಸದಸ್ಯರಾದ ಯು.ಎಸ್. ರಾಜಗೋಪಾಲ ಆಚಾರ್ಯ, ಅನಂತರಾಜ ಉಪಾಧ್ಯ, ವಿನಾಯಕ ಬಾಳಿಗಾ, ಅರ್ಚಕರಾದ ಪದ್ಮನಾಭ ಭಟ್, ಜಗದೀಶ್ ಭಟ್, ಪಂಚಾಯತ್ ಅಧ್ಯಕ್ಷೆ ಸುನೀತಾ, ಧರ್ಮರಾಜ ಹೆಗ್ಡೆ, ರಾಮರಾಯ ನಾಯಕ್ ಮತ್ತು ಕೆರ್ವಾಶೆಯ ನಾಗರಿಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

    award baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಶಿವರಾಮ ಕಾರಂತ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ | ಏಪ್ರಿಲ್ 20
    Next Article ‘ಕಾವ್ಯ ಸಂಸ್ಕೃತಿ ಯಾನ’ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜನರೆಡೆಗೆ ಕಾವ್ಯ ಒಂಭತ್ತನೇ ಕವಿಗೋಷ್ಠಿ | ಮಾರ್ಚ್ 23
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.