Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಶಾಶ್ವತ ಪರಿಹಾರ’ ಹಾಸ್ಯ ನಾಟಕ | ನವೆಂಬರ್ 09

    November 8, 2025

    ಕೋಲಾರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ‘ಮಕ್ಕಳ ರಂಗ ಉತ್ಸವ’ | ನವೆಂಬರ್ 09

    November 8, 2025

    ಮಂಗಳ ಸಭಾಂಗಣದಲ್ಲಿ ಗಿಳಿವಿಂಡು ನಾಲ್ಕನೇ ಮಹಾ ಸಮಾವೇಶ | ನವೆಂಬರ್ 09

    November 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರಸಿದ್ಧ ಛಾಂದಸ ಗಣೇಶ ಕೊಲೆಕಾಡಿ ನಿಧನ
    Yakshagana

    ಪ್ರಸಿದ್ಧ ಛಾಂದಸ ಗಣೇಶ ಕೊಲೆಕಾಡಿ ನಿಧನ

    November 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಲ್ಕಿ : ಪ್ರಸಿದ್ಧ ಛಾಂದಸ ಯಕ್ಷಗಾನ ಕವಿ, ವಿಮರ್ಶಕ, ಪಾರ್ಥಿಸುಬ್ಬ ಪ್ರಶಸ್ತಿ ಪುರಸ್ಕೃತ ಗಣೇಶ ಕೊಲೆಕಾಡಿಯವರು (54) ದಿನಾಂಕ 07 ನವೆಂಬರ್ 2025ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು.

    ಅವರು ಪ್ರಸಿದ್ಧ ಹಿಮ್ಮೇಳ ವಾದಕರಾದ ದಿವಾಣ ಭೀಮ ಭಟ್ಟರಲ್ಲಿ ಭಾಗವತಿಕೆ ಮತ್ತು ಮದ್ದಳೆ ವಾದನವನ್ನು ಹಾಗೂ ಛಾಂದಸರಾದ ಡಾ. ಶಿಮಂತೂರು ನಾರಾಯಣ ಶೆಟ್ಟಿಯವರಲ್ಲಿ ಯಕ್ಷಗಾನ ಕಾವ್ಯ ರಚನೆಯನ್ನು ಅಭ್ಯಾಸ ಮಾಡಿದ್ದರು. ಸುಮಾರು 50ಕ್ಕಿಂತಲೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದರು. ಯಕ್ಷಗಾನದಲ್ಲಿ ಬಳಕೆಯಾಗಿರುವ ಛಂದಸ್ಸಿನ ವೈಶಿಷ್ಟ್ಯದ ಕುರಿತು ವಿದ್ವತ್ಪೂ ಣವಾಗಿ ಮಾತನಾಡಬಲ್ಲವರಾಗಿದ್ದರು. ತಮ್ಮ ಮನೆಯಲ್ಲೇ ಆಸಕ್ತರಿಗೆ ಛಂದಸ್ಸಿನ ಸೂಕ್ಷ್ಮತೆಗಳನ್ನು, ವಿವಿಧ ಮಟ್ಟುಗಳನ್ನು ತಿಳಿಸಿಕೊಟ್ಟು ಬಹುಸಂಖ್ಯೆಯಲ್ಲಿ ಭಾಗವತರನ್ನು ರೂಪಿಸಿದ ಹೆಗ್ಗಳಿಕೆ ಕೊಲೆಕಾಡಿಯವರದ್ದು. ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೊಳಗಾಗಿದ್ದರು. ತಾಯಿಯೊಂದಿಗೆ ಮುಲ್ಕಿ ಬಳಿಯ ಮೈಲೊಟ್ಟು ಎಂಬಲ್ಲಿ ವಾಸಿಸುತ್ತಿದ್ದ ಅವರಿಗೆ ಯಕ್ಷಗಾನ ಕಲಾರಂಗವು 2014ರಲ್ಲಿ ಮನೆಯನ್ನು ನಿರ್ಮಿಸಿ ಕೊಟ್ಟಿತ್ತು. ಯಕ್ಷಗಾನ ಕಲಾರಂಗ ಅವರ ನಿರ್ದೇಶನದಲ್ಲಿ ಭಾಗವತಿಕೆಯ ಕಮ್ಮಟವನ್ನು ಆಯೋಜಿಸಿತ್ತು. ಇವರಿಗೆ ಸಂಸ್ಥೆಯು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬಹುಮುಖ ನೃತ್ಯಪ್ರತಿಭೆ ಆರತಿ ನಾಯರ್ ‘ಕುಚಿಪುಡಿ ನಾಟ್ಯಕಲಾ ಲಲಿತಂ’ | ನವೆಂಬರ್ 09
    Next Article ಮಂಗಳ ಸಭಾಂಗಣದಲ್ಲಿ ಗಿಳಿವಿಂಡು ನಾಲ್ಕನೇ ಮಹಾ ಸಮಾವೇಶ | ನವೆಂಬರ್ 09
    roovari

    Add Comment Cancel Reply


    Related Posts

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಶಾಶ್ವತ ಪರಿಹಾರ’ ಹಾಸ್ಯ ನಾಟಕ | ನವೆಂಬರ್ 09

    November 8, 2025

    ಕೋಲಾರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ‘ಮಕ್ಕಳ ರಂಗ ಉತ್ಸವ’ | ನವೆಂಬರ್ 09

    November 8, 2025

    ಮಂಗಳ ಸಭಾಂಗಣದಲ್ಲಿ ಗಿಳಿವಿಂಡು ನಾಲ್ಕನೇ ಮಹಾ ಸಮಾವೇಶ | ನವೆಂಬರ್ 09

    November 8, 2025

    ಬಹುಮುಖ ನೃತ್ಯಪ್ರತಿಭೆ ಆರತಿ ನಾಯರ್ ‘ಕುಚಿಪುಡಿ ನಾಟ್ಯಕಲಾ ಲಲಿತಂ’ | ನವೆಂಬರ್ 09

    November 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.