Subscribe to Updates

    Get the latest creative news from FooBar about art, design and business.

    What's Hot

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನಲ್ಲಿ ಯಕ್ಷಗಾನ ಬೊಂಬೆಯಾಟ ಕಲಿಕಾ ತರಗತಿ
    Puppetry

    ಕಾಸರಗೋಡಿನಲ್ಲಿ ಯಕ್ಷಗಾನ ಬೊಂಬೆಯಾಟ ಕಲಿಕಾ ತರಗತಿ

    August 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಕಲಾ-ದೀಕ್ಷಾ (ಗುರು ಶಿಷ್ಯ ಪರಂಪರೆ) ಯೋಜನೆಯನ್ವಯ ಯಕ್ಷಗಾನ ಬೊಂಬೆಯಾಟ ಕಲಿಕಾ ತರಗತಿಯು ದಿನಾಂಕ 17 ಜುಲೈ 2024ರಂದು ಪ್ರಾರಂಭವಾಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ ಇವರು ಮಾತನಾಡಿ “ಕರ್ನಾಟಕದಿಂದ ಹೊರಗುಳಿದಿರುವ ಅಚ್ಚಗನ್ನಡ ಪ್ರದೇಶವಾದ ಗಡಿನಾಡು ಕಾಸರಗೋಡಿನಲ್ಲಿ ಪ್ರಾಚೀನ ಹಾಗೂ ಪರಂಪರಾಗತ ಕಲೆ ಯಕ್ಷಗಾನ ಬೊಂಬೆಯಾಟಕ್ಕೆ ಕಾಯಕಲ್ಪ ನೀಡುತ್ತಿರುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಸಾಧನೆ ಸ್ತುತ್ಯರ್ಹ. ನಯನ ಮನೋಹರವಾದ ಚಂದ್ರಗಿರಿಯ ತೀರದಲ್ಲಿ ನೆಲೆ ನಿಂತಿರುವ ಸಂಘದ ಯಕ್ಷಪುತ್ಥಳಿ ಬೊಂಬೆ ಮನೆಗೆ ರಾಷ್ಟ್ರದ ಪ್ರವಾಸೋದ್ಯಮ ನಕಾಶೆಯಲ್ಲಿ ವಿಶೇಷ ಸ್ಥಾನ ಕಲ್ಪಿಸಲು ಕೇಂದ್ರ, ರಾಜ್ಯ ಸರಕಾರಗಳು ಇನ್ನಾದರೂ ಪ್ರಯತ್ನಿಸಬೇಕು” ಎಂದು ಹೇಳಿದರು.

    ಪಿಲಿಕುಂಜೆ ಯಕ್ಷಪುತ್ಥಳಿ ಬೊಂಬೆ ಮನೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕವಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ವಹಿಸಿದ್ದರು. ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಪ್ರೊಫೆಸರ್ ಎ. ಶ್ರೀನಾಥ್, ಡಾ. ಸದಾನಂದ ಪೆರ್ಲ, ಜಗದೀಶ ಕೂಡ್ಲು, ಮನೋರಮ ಎಡನೀರು ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಹಾಗೂ ಪ್ರಧಾನ ಸೂತ್ರಧಾರಿ ಕೆ.ವಿ. ರಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬಳಿಕ ಬೊಂಬೆಯಾಟ ಪ್ರದರ್ಶನ ಜರಗಿತು.

    Share. Facebook Twitter Pinterest LinkedIn Tumblr WhatsApp Email
    Previous Articleಉಮೇಶ್ ತೆಂಕನಹಳ್ಳಿ ಇವರ ಚೊಚ್ಚಲ ಕಾದಂಬರಿ ಲೋಕಾರ್ಪಣೆ | ಆಗಸ್ಟ್ 12
    Next Article ಕ.ಸಾ.ಪ. ವತಿಯಿಂದ ಪ್ರಬಂಧ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ
    roovari

    Comments are closed.

    Related Posts

    ಶಿವರಾಮ ಜೋಗಿ ಮತ್ತು ಗೋಪಾಲ ಭಟ್ ಇವರಿಗೆ ‘ಯಕ್ಷದೇಗುಲ ಪ್ರಶಸ್ತಿ’

    June 28, 2025

    ಪಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷ ಶಿಕ್ಷಣ ಅಭಿಯಾನ

    June 28, 2025

    ಕಾರ್ಕಳ ಕಾರೋಲ್ ಗುಡ್ಡೆ ಕಲ್ಲಗುಪ್ಪೆ ಶಾಲೆಯಲ್ಲಿ ಯಕ್ಷ ಶಿಕ್ಷಣ ಆರಂಭ

    June 28, 2025

    ತೆಕ್ಕಟ್ಟೆಯಲ್ಲಿ ಯಕ್ಷ-ಗಾನ-ನಮನ

    June 27, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.