Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ತಾಳಮದ್ದಳೆ ಸಪ್ತಾಹ ಕರೆಯೋಲೆ ಬಿಡುಗಡೆ | ನವೆಂಬರ್ 19ರಿಂದ 25ರವರೆಗೆ
    Yakshagana

    ಯಕ್ಷಗಾನ ತಾಳಮದ್ದಳೆ ಸಪ್ತಾಹ ಕರೆಯೋಲೆ ಬಿಡುಗಡೆ | ನವೆಂಬರ್ 19ರಿಂದ 25ರವರೆಗೆ

    November 17, 2023No Comments4 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ. ಡಾ.ದಯಾನಂದ ಪೈ, ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಸಹಯೋಗದೊಂದಿಗೆ ನಡೆಸುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ, ಹನ್ನೊಂದನೇ ವರ್ಷದ ನುಡಿ ಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023’ ಶ್ರೀ ಹರಿ ಚರಿತ್ರೆ’ ಏಕಾದಶ ಸರಣಿಯು ದಿನಾಂಕ 19-11-2023ರಿಂದ 25-11-2023ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರಗಲಿದೆ. ಈ ಸಮಾರಂಭದ ಕರೆಯೋಲೆಯನ್ನು ಕದ್ರಿ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಳಿಸಿದ ಯಕ್ಷಾಂಗಣದ ಗೌರವಾಧ್ಯಕ್ಷ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ಎ.ಜೆ. ಶೆಟ್ಟಿಯವರು ಮಾತನಾಡುತ್ತಾ “ಕರ್ನಾಟಕದಲ್ಲಿ ಪರಿಶುದ್ಧವಾದ ಕನ್ನಡ ಭಾಷೆಯನ್ನು ಬಳಸುವ ಒಂದು ಕಲಾಪ್ರಕಾರವಿದ್ದರೆ ಅದು ಯಕ್ಷಗಾನ ಮಾತ್ರ. ಕಳೆದ ಹತ್ತು ವರ್ಷಗಳಿಂದ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಪ್ರತೀ ನವೆಂಬರ್ ತಿಂಗಳಲ್ಲಿ ನಡೆಸುತ್ತಿರುವ ಯಕ್ಷಗಾನ ತಾಳಮದ್ದಳೆಯ ನುಡಿ ಹಬ್ಬ ಕನ್ನಡ ಜನತೆಗೆ ಯಕ್ಷಾಂಗಣದ ಮಹೋನ್ನತ ಕೊಡುಗೆ. ಅದಕ್ಕಾಗಿ ಈ ಬಾರಿ ಹನ್ನೊಂದನೇ ಸಪ್ತಾಹವು ಕಲಾಭಿಮಾನಿಗಳ ಪ್ರೋತ್ಸಾಹದಿಂದ ಯಶಸ್ವಿಯಾಗಲಿ” ಎಂದು ಹೇಳಿದ್ದಾರೆ.

    ಮುಖ್ಯ ಅತಿಥಿಗಳಾಗಿದ್ದ ಮಹೇಶ್ ಮೋಟರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಶುಭ ಹಾರೈಸಿದರು. ಬಳಿಕ ದೇವರ ಮುಂದೆ ಆಮಂತ್ರಣ ಪತ್ರಿಕೆಯನ್ನಿರಿಸಿ ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ವಂದಿಸಿದರು. ಉಪಾಧ್ಯಕ್ಷರುಗಳಾದ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಕೆ.ರವೀಂದ್ರ ರೈ ಕಲ್ಲಿಮಾರು; ಕಾರ್ಯದರ್ಶಿ ಉಮೇಶ ಆಚಾರ್ಯ ಗೇರುಕಟ್ಟೆ, ಪದಾಧಿಕಾರಿಗಳಾದ ಕರುಣಾಕರ ಶೆಟ್ಟಿ ಪಣಿಯೂರು, ನಿವೇದಿತಾ ಎನ್. ಶೆಟ್ಟಿ, ಸುಮಾ ಪ್ರಸಾದ್ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಯಕ್ಷಗಾನ ಕಲಾ ಪೋಷಕರಿಗಾಗಿ ನೀಡಲಾಗುವ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ಕ್ಕೆ ಉದ್ಯಮಿ – ಸಮಾಜ ಸೇವಕ ಶ್ರೀ ಯಾದವ ಕೋಟ್ಯಾನ್ ಪೆರ್ಮುದೆ ಮತ್ತು ಕಲಾವಿದರಿಗಾಗಿಯೇ ಇರುವ ‘ಯಕ್ಷಾಂಗಣ ಗೌರವ ಪ್ರಶಸ್ತಿ’ಗೆ ಯಕ್ಷಗಾನ ಅರ್ಥದಾರಿ – ಹರಿದಾಸ ಮಹಾಬಲ ಶೆಟ್ಟಿ ಕೂಡ್ಲು ಆಯ್ಕೆಯಾಗಿದ್ದಾರೆ.

    ಶ್ರೀ ಯಾದವ ಕೋಟ್ಯಾನ್ ಪೆರ್ಮುದೆ
    ಬಜ್ಪೆ ಬಳಿಯ ಪೆರ್ಮುದೆ ‘ಕನ್ನಿಕಾ ನಿಲಯ’ ನಿವಾಸಿ ಶ್ರೀ ಯಾದವ ಕೋಟ್ಯಾನ್ ತಮ್ಮ ‘ದಿವ್ಯರೂಪ ಕನ್ಸ್ಟ್ರಕ್ಷನ್’ ಮೂಲಕ ಉದ್ಯಮ ರಂಗದಲ್ಲಿ ವಿಶಿಷ್ಟ ಸ್ಥಾನ ಪಡೆದವರು. ಸ್ವಂತ ಪರಿಶ್ರಮದಿಂದ ಮೇಲೆ ಬಂದ ಸಾಹಸಿ. ದಿನಾಂಕ 05-05-1964ರಲ್ಲಿ ನೇಮು ಪೂಜಾರಿ ಹಾಗೂ ಕಮಲ ದಂಪತಿಗೆ ಜನಿಸಿದ ಅವರು ಸಣ್ಣಪುಟ್ಟ ಗುತ್ತಿಗೆದಾರರಾಗಿ ಬದುಕು ಕಟ್ಟಿಕೊಂಡು ಮುಂದೆ ಎಂ.ಆರ್‌.ಪಿ.ಎಲ್., ಒ‌.ಎನ್.ಜಿ.ಸಿ., ಎಸ್.ಇ.ಝಡ್ ಗುತ್ತಿಗೆಗಳನ್ನು ವಹಿಸಿ ಯಶಸ್ಸಿನ ಶಿಖರವೇರಿದರು.

    ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಯಾದವ ಕೋಟ್ಯಾನ್ ಅವರ ಸೇವೆ ಅನುಪಮ. ಬರಿಗಾಲಲ್ಲಿ ನಡೆದು ನಿರಂತರ ಮೂರು ದಶಕಗಳ ಕಾಲ ಶಬರಿಮಲೆ ಯಾತ್ರೆ ಕೈಗೊಂಡ ಅವರು 1982ರಿಂದ ಪ್ರತಿ ವರ್ಷ 20ಕ್ಕಿಂತಲೂ ಹೆಚ್ಚು ಭಕ್ತರನ್ನು ಶಬರಿಮಲೆ ಯಾತ್ರೆ ಮಾಡಿಸುವ ಸಹೃದಯಿ. ಪೆರ್ಮುದೆ ಗ್ರಾಮ ಬಿಲ್ಲವ ಸಮಾಜದ ಮೂರನೇ ಗುರಿಕಾರರಾಗಿ, ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿ, ಕನ್ನಿಕಾ ನಿಲಯ ಮೂಲ ಬ್ರಹ್ಮ ಸ್ಥಾನದ ಅಧ್ಯಕ್ಷರಾಗಿ ದುಡಿದವರು. ನೀರು ಪೂರೈಕೆ, ಅಕ್ಕಿ ವಿತರಣೆ, ಹೈನುಗಾರಿಕೆ, ಧಾರ್ಮಿಕ ಕ್ಷೇತ್ರಗಳಿಗೆ ದೇಣಿಗೆ, ಶೈಕ್ಷಣಿಕ ನೆರವು ಇವೆಲ್ಲ ಅವರ ಸೇವಾ ಪ್ರಕಲ್ಪಗಳು.

    ಉತ್ತಮ ಯಕ್ಷಗಾನ ಮತ್ತು ನಾಟಕ ಕಲಾವಿದರಾಗಿರುವ ಯಾದವರು ಪೆರ್ಮುದೆ ಶ್ರೀ ಶಾರದಾ ಯಕ್ಷಗಾನ ಮಂಡಳಿಯ ಸದಸ್ಯರು. ತಮ್ಮ ಕನ್ನಿಕಾ ನಿಲಯದಲ್ಲಿ ವರ್ಷಂಪ್ರತಿ ಕಟೀಲು, ಧರ್ಮಸ್ಥಳ, ಸುಂಕದಕಟ್ಟೆ, ಕೊಲ್ಲೂರು, ಮುಂಡ್ಕೂರು, ರಾಮಚಂದ್ರಾಪುರ, ಪಾವಂಜೆ ಮೇಳಗಳ ಸೇವೆಯಾಟಗಳನ್ನು ಮಾಡಿಸುತ್ತಿರುವುದು ಅವರ ಕಲಾ ಪ್ರೇಮಕ್ಕೆ ಸಾಕ್ಷಿ. ಶನಿ ಕಥೆಯೇ ಮೊದಲಾದ ತಾಳಮದ್ದಳೆ ಕೂಟಗಳನ್ನೂ ನಡೆಸಿದ್ದಾರೆ. ಯಕ್ಷ ಕೌಮುದಿ, ಯಕ್ಷಕಲಾ ರತ್ನ, ಕಲಾ ಶ್ರೀ ಚೂಡಾಮಣಿ, ಕಲಾಪೋಷಕ ಪುರಸ್ಕಾರ ಇತ್ಯಾದಿ ಗೌರವಗಳು ಅವರಿಗೆ ಲಭಿಸಿವೆ.

    ಶ್ರೀ ಮಹಾಬಲ ಶೆಟ್ಟಿ ಕೂಡ್ಲು:
    ವೃತ್ತಿಯಲ್ಲಿ ವಕೀಲರಾದ ಕೂಡ್ಲು ಶ್ರೀ ಮಹಾಬಲ ಶೆಟ್ಟರು ಯಕ್ಷಗಾನ, ಹರಿಕಥೆ, ತಾಳಮದ್ದಳೆ ಹಾಗೂ ಪುರಾಣ ವಾಚನ ಕ್ಷೇತ್ರಗಳಲ್ಲಿ ಪರಿಣತರು. ಕಾಸರಗೋಡು ಜಿಲ್ಲೆಯ ಕೂಡ್ಲು ಗ್ರಾಮದಲ್ಲಿ ದಿನಾಂಕ 29-11-1944ರಂದು ಜನಿಸಿದ ಅವರ ತಂದೆ ದಿವಂಗತ ಬಳ್ಳೂರು ಗುತ್ತು ರಾಮಯ್ಯ ಶೆಟ್ಟಿ ಮತ್ತು ತಾಯಿ ಬಿ. ದೇವಕಿ. ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸದ ನಂತರ ಧಾರವಾಡ ವಿಶ್ವವಿದ್ಯಾನಿಲಯದಿಂದ ಬಿ.ಎ. ಪದವಿ ಗಳಿಸಿದ ಅವರು ಮಂಗಳೂರಿನ ಎಸ್‌.ಡಿ.ಎಂ. ಕಾನೂನು ಕಾಲೇಜಿನಲ್ಲಿ ಕಾನೂನು ವ್ಯಾಸಂಗ ಮಾಡಿದ್ದರು. 1963ರಲ್ಲಿ ಕೇರಳ ಸರಕಾರದ ನ್ಯಾಯಾಂಗ ಇಲಾಖೆ ಸೇರಿ 20 ವರ್ಷ ಸರಕಾರಿ ಸೇವೆ ಮಾಡಿ ಸ್ವಯಂ ನಿವೃತ್ತಿ ಪಡೆದರು. ಕಾಸರಗೋಡಿನಲ್ಲಿ 3 ವರ್ಷ ವಕೀಲಿ ವೃತ್ತಿ ಕೈಗೊಂಡು, ಬಳಿಕ ಮಂಗಳೂರಿಗೆ ಬಂದು ಆರು ವರ್ಷ ಸರಕಾರಿ ವಕೀಲರಾಗಿ ಸೇವೆ ಸಲ್ಲಿಸಿದರು. ಹತ್ತು ವರ್ಷ ಕಾಲ ತಾನು ಕಲಿತ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಗೌರವ ಉಪನ್ಯಾಸಕರಾಗಿಯೂ ದುಡಿದರು.

    ಹವ್ಯಾಸಿ ಯಕ್ಷಗಾನ ಕಲಾವಿದನಾಗಿ, ತಾಳಮದ್ದಳೆ ಅರ್ಥಧಾರಿಯಾಗಿ, ನಾಟಕ ರಂಗ ಮತ್ತು ಸಾಹಿತ್ಯ ಕ್ಷೇತ್ರದಲ್ಲೂ ಕೈಯಾಡಿಸಿದ ಶೆಟ್ಟಿಯವರು 1971ರಲ್ಲಿ ಹರಿಕಥಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದರು. ದಿ. ಶೇಣಿ ಗೋಪಾಲಕೃಷ್ಣ ಭಟ್ಟರು ಅವರ ಹರಿಕಥಾ ಗುರುಗಳು. ‘ದೇವಕಿತನಯ ಕೂಡ್ಲು’ ಎಂಬ ಅಂಕಿತ ನಾಮದಲ್ಲಿ ಮಹಾಬಲ ಶೆಟ್ಟರು ನೂರಾರು ಹರಿ ಕೀರ್ತನೆಗಳನ್ನು ನಡೆಸಿಕೊಟ್ಟರು. ಮಂಗಳೂರಿನಲ್ಲಿ ಹರಿಕಥಾ ಪರಿಷತ್ ಸ್ಥಾಪಿಸಿ ಅದರ ಮೂಲಕ ವಿವಿಧೆಡೆ ಹರಿಕಥಾ ಸಪ್ತಾಹಗಳನ್ನು ಆಯೋಜಿಸಿದರು. ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿದ್ದಲ್ಲದೆ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳಲ್ಲೂ ಗುರುತಿಸಿಕೊಂಡರು.

    ಬ್ರಹ್ಮೈಕ್ಯರಾದ ಶ್ರೀ ಕೊಲ್ಯ ಮಠಾಧೀಶರಿಂದ ‘ಕೀರ್ತನ ಕೇಸರಿ’ ಬಿರುದು ಪಡೆದಿರುವ ದೇವಕೀ ತನಯರು ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ, ಮಂತ್ರಾಲಯ ರಾಘವೇಂದ್ರ ಮಠದ ಪ್ರಶಸ್ತಿ, ಕಲ್ಕೂರ ಪ್ರತಿಷ್ಠಾನ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ಪತ್ನಿ ಶ್ರೀಮತಿ ಜಯಂತಿ ಬಳ್ಳಂಬೆಟ್ಟು ನಿವೃತ್ತ ಸರಕಾರಿ ನೌಕರರು ಮಗ ಶ್ರೀ ಗುರುಪ್ರಸಾದ್ ಶೆಟ್ಟಿ ನ್ಯಾಯವಾದಿ. ಶ್ರೀಮತಿ ಪರಿಣತಾ ಜಿ.ಶೆಟ್ಟಿ ಮತ್ತು ಶ್ರೀಮತಿ ಪರಿಮಳ ಇಬ್ಬರು ಪುತ್ರಿಯರು. ಯಕ್ಷಗಾನ ಮತ್ತು ಹರಿಕಥಾ ಕ್ಷೇತ್ರದ 50 ವರ್ಷಗಳ ಸಾಧನೆಗಾಗಿ ಅವರಿಗೆ ಮಂಗಳೂರಿನಲ್ಲಿ ಸಾರ್ವಜನಿಕ ಸನ್ಮಾನ ಮತ್ತು ‘ಮಹಾಯಾನ’ ಅಭಿನಂದನ ಗ್ರಂಥ ಸಮರ್ಪಣೆಯಾಗಿದೆ.

    ದಿನಾಂಕ 19-11-2023ರಿಂದ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಜರಗುವ ‘ಶ್ರೀಹರಿ ಚರಿತ್ರೆ’ ಏಕಾದಶ ಸರಣಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭಗಳಲ್ಲಿ ಈ ಈರ್ವರು ಸಾಧಕರಿಗೆ ಪ್ರತ್ಯೇಕವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ. ಯಕ್ಷಾಂಗಣದ ಗೌರವಾಧ್ಯಕ್ಷ ಡಾ. ಎ.ಜೆ. ಶೆಟ್ಟಿ ಮತ್ತು ವಿವಿಧ ಕ್ಷೇತ್ರದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleರಂಗಭೂಮಿ (ರಿ.) ಉಡುಪಿ ಆಯೋಜಿಸುವ 44ನೇಯ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ | ನವಂಬರ್ 22 ರಿಂದ ದಶಂಬರ್ 03ರ ವರೆಗೆ
    Next Article ಸಂಗೀತ ಪರಿಷತ್ ಮಂಗಳೂರು (ರಿ.) – ‘ಮಂಗಳೂರು ಸಂಗೀತೋತ್ಸವ 2023’ | ನವೆಂಬರ್ 22ರಿಂದ 26ರವರೆಗೆ
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.