Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಾಂಗಣ ತಾಳಮದ್ದಳೆ ಸಪ್ತಾಹ ಸಮಾರೋಪ – ಪ್ರಶಸ್ತಿ ಪ್ರದಾನ
    Awards

    ಯಕ್ಷಾಂಗಣ ತಾಳಮದ್ದಳೆ ಸಪ್ತಾಹ ಸಮಾರೋಪ – ಪ್ರಶಸ್ತಿ ಪ್ರದಾನ

    December 20, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಡಾ. ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಸಹಯೋಗದಲ್ಲಿ ನವಂಬರ 19ರಿಂದ ನಗರದ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2013’ ಹನ್ನೊಂದನೇ ವರ್ಷದ ನುಡಿ ಹಬ್ಬ ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 25-11-2023ರಂದು ನಡೆಯಿತು.

    ಈ ಸಮಾರಂಭದಲ್ಲಿ ಪ್ರಧಾನ ಅತಿಥಿಗಳಾಗಿ ಭಾಗವಹಿಸಿದ ಮಾಜಿ ಸಚಿವ ಹಾಗೂ ಲ್ಯಾಂಡ್ ಲಿಂಕ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಜೆ.ಕೃಷ್ಣ ಪಾಲೆಮಾರ್ “ಕನ್ನಡ ಕರಾವಳಿಯ ಸಮಗ್ರ ಕಲೆಯಾದ ಯಕ್ಷಗಾನದ ಬಗ್ಗೆ ಮುಂದಿನ ಪೀಳಿಗೆಗೆ ಆಸಕ್ತಿ ಹುಟ್ಟಿಸುವುದು ನಮ್ಮ ಜವಾಬ್ದಾರಿ. ಪರಂಪರಾಗತವಾದ ಜೀವನ ಮೌಲ್ಯಗಳು ಹಾಗೂ ನಮ್ಮ ಸಂಸ್ಕೃತಿಯ ಬೇರುಗಳನ್ನು ಅದು ಸಹಜವಾಗಿ ಬಿಂಬಿಸುತ್ತದೆ. ಯಕ್ಷಗಾನ ಈಗಿನ ಮಟ್ಟಕ್ಕೆ ಬೆಳೆದಿರುವುದು ನೈಜ ಕಲಾಭಿಮಾನಿಗಳಿಂದ. ‘ಯಕ್ಷಗಾನ ತಾಳಮದ್ದಳೆ ಕೇಳುಗರ ಬುದ್ಧಿಯನ್ನು ಹರಿತಗೊಳಿಸುವ ವಿಶಿಷ್ಟ ಕಲಾ ಪ್ರಕಾರ. ಅದನ್ನು ನಮ್ಮ ಕನ್ನಡದ ನುಡಿ ಹಬ್ಬವಾಗಿ ಹತ್ತು ವರ್ಷಗಳಿಂದ ನವೆಂಬರ್ ತಿಂಗಳಿನಲ್ಲೇ ನಡೆಸಿಕೊಂಡು ಬರುತ್ತಿರುವ ‘ಯಕ್ಷಾಂಗಣ’ ಕನ್ನಡಿಗರೆಲ್ಲರೂ ಅಭಿಮಾನ ಪಡಬೇಕಾದ ಸಂಸ್ಥೆ. ಇದಕ್ಕೆ ಕಲಾಭಿಮಾನಿಗಳಿಂದ ನಿರಂತರ ಪ್ರೋತ್ಸಾಹ ಲಭಿಸಲಿ’ ಎಂದವರು ಹಾರೈಸಿದರು.

    ಕರುಣಾ ಇನ್ಫ್ರಾ ಪ್ರಾಪರ್ಟೀಸ್ ಇಂಡಿಯಾ ಪ್ರೈ.ಲಿ. ಮಾಲಕ ವಿ.ಕರುಣಾಕರ ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಹಿರಿಯ ಅರ್ಥದಾರಿ ಮತ್ತು ಹರಿದಾಸರಾದ ಕೆ.ಮಹಾಬಲ ಶೆಟ್ಟಿ ಕೂಡ್ಲು ಅವರಿಗೆ 2022-23ನೇ ಸಾಲಿನ ‘ಯಕ್ಷಾಂಗಣ ಗೌರವ ಪ್ರಶಸ್ತಿ’ಯನ್ನು ರೂ.10,000/- ನಗದಿನೊಂದಿಗೆ ನೀಡಲಾಯಿತು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಕ.ಸಾ.ಪ.ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಕ್ಲಾಸಿಕ್ ಸಮೂಹ ಸಂಸ್ಥೆಗಳ ಅಶೋಕ್ ಕುಮಾರ್ ಚೌಟ, ಮುಂಬೈ ಉದ್ಯಮಿ ಜಗದೀಶ ಶೀನಾ ಪೂಜಾರಿ ಇರಾ ಆಚೆ ಬೈಲು ಮುಖ್ಯ ಅತಿಥಿಗಳಾಗಿದ್ದರು.

    ಇದೇ ಸಂದರ್ಭದಲ್ಲಿ ಹೆಸರಾಂತ ನಾಟಕಕಾರ ‘ತುಳು ನಾಟಕ ಬ್ರಹ್ಮ’ ದಿ| ಬಿ. ರಾಮ ಕಿರೋಡಿಯನ್ ಅವರ ಶತಮಾನದ ಸಂಸ್ಮರಣೆಯನ್ನು ನೆರವೇರಿಸಲಾಯಿತು. ಪ್ರಸಿದ್ದ ರಂಗ ನಿರ್ದೇಶಕ ತಮ್ಮ ಲಕ್ಷ್ಮಣ ಅವರಿಗೆ ‘ರಾಮ ಕಿರೋಡಿಯನ್ – 100’ ಶತಮಾನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಹಿರಿಯ ನಾಟಕಕಾರ ಡಾ. ಸಂಜೀವ ದಂಡಕೇರಿ ಸಂಸ್ಮರಣ ಭಾಷಣ ಮಾಡಿ ದಿವಂಗತ ಕಿರೋಡಿಯನ್ ಅವರ ಸಾಧನೆಯನ್ನು ಸ್ಮರಿಸಿದರು. ರಾಮ ಕಿರೋಡಿಯನ್ ಅವರ ಮಕ್ಕಳಾದ ನರೇಂದ್ರ ಕಿರೋಡಿಯನ್ ಮತ್ತು ಜಯಶ್ರೀ ವೇದಿಕೆಯಲ್ಲಿದ್ದರು. ಮೊಮ್ಮಗಳು ಸ್ವಪ್ನ ಕೋಟ್ಯಾನ್ ನುಡಿ ನಮನ ಸಲ್ಲಿಸಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ ದ.ಕ ಹಾಲುತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ಮಾತನಾಡಿ “ಯಕ್ಷಗಾನದ ಸಮೃದ್ಧತೆ ಹಾಗೂ ಕಲಾ ಮೌಲ್ಯವನ್ನು ಯುವ ಮನಸ್ಸುಗಳು ಅರ್ಥಮಾಡಿಕೊಳ್ಳಬೇಕು. ಇದರೊಂದಿಗೆ ಇತರ ಕಲೆಗಳನ್ನೂ ಗೌರವಿಸುವ ಮನೋಭಾವ ಬೆಳೆದು ಬರಬೇಕು. ಯಕ್ಷಾಂಗಣವು ಸತ್ವಯುತ ಪ್ರಸಂಗಗಳ ತಾಳಮದ್ದಳೆಯೊಂದಿಗೆ ಅಗಲಿದ ಕಲಾವಿದರ-ಕಲಾಪೋಷಕರ ಸರಣಿ ಸಂಸ್ಮರಣೆ ಹಾಗೂ ನಾಟಕ ರಂಗದ ಹಿರಿಯ ಚೇತನ ರಾಮಕಿರೋಡಿಯನ್ ಅವರ ನೂರರ ನೆನಪನ್ನು ಮಾಡಿ ಸಮಾಜಕ್ಕೆ ಉತ್ತಮ ಸಂದೇಶ ನೀಡಿದೆ” ಎಂದು ಶ್ಲಾಘಿಸಿದರು.

    ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯ ಕಾರ್ಯಾಧ್ಯಕ್ಷ  ಪ್ರೊ‌. ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಮತ್ತು ಸುಧಾಕರ ರಾವ್ ಪೇಜಾವರ ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷ ರವೀಂದ್ರ ರೈ ಕಲ್ಲಿಮಾರು ವಂದಿಸಿದರು. ಕಾರ್ಯದರ್ಶಿಗಳಾದ ಲಕ್ಷ್ಮೀನಾರಾಯಣ ರೈ ಹರೇಕಳ ಮತ್ತು ಸುಮಾ ಪ್ರಸಾದ್ ಸನ್ಮಾನ ಪತ್ರ ವಾಚಿಸಿದರು. ಸಮಿತಿ ಪ್ರಮುಖರಾದ ಕರುಣಾಕರ ಶೆಟ್ಟಿ ಪಣಿಯೂರು, ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಉಮೇಶ ಆಚಾರ್ಯ ಗೇರುಕಟ್ಟೆ, ಸಿದ್ಧಾರ್ಥ ಆಜ್ರಿ, ನಿವೇದಿತಾ ಎನ್. ಶೆಟ್ಟಿ ಉಪಸ್ಥಿತರಿದ್ದರು. ಸಪ್ತಾಹದ ಕೊನೆಯಲ್ಲಿ ‘ಶ್ರೀಹರಿ ಚರಿತ್ರೆ’ ಏಕಾದಶ ಸರಣಿಯ ಏಳನೆಯ ಆಖ್ಯಾನ ‘ಕರ್ಣ ಚರಿತ್ರೊ : ಏಕಿನಿ ಕರ್ಣೆ – ದೇವರೆಗ್ ಅರ್ಪಣೆ’ ತುಳು ತಾಳಮದ್ದಳೆ ಜರಗಿತು. ಗಣೇಶ್ ಕುಮಾರ್ ಹೆಬ್ರಿ ಮತ್ತು ಪ್ರಶಾಂತ ರೈ ಪುತ್ತೂರು ಅವರ ಭಾಗವತಿಕೆಯಲ್ಲಿ ಜಿಲ್ಲೆಯ ಪ್ರಸಿದ್ಧ ಅರ್ಥಧಾರಿಗಳು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ‘ಕದ್ರಿ ಸಂಗೀತ ಸೌರಭ 2023’ | ಡಿಸೆಂಬರ್ 23
    Next Article ಡಾ. ವಾಣಿಶ್ರೀ ಕಾಸರಗೋಡು ಇವರಿಗೆ ‘ಮೈಲಾರ ಬಸವಲಿಂಗ ಶರಣಶ್ರೀ’ ರಾಜ್ಯಮಟ್ಟದ ಗೌರವ ಪ್ರಶಸ್ತಿ ಪ್ರದಾನ 
    roovari

    Add Comment Cancel Reply


    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    ಸರಯೂ ಸಪ್ತಾಹದಲ್ಲಿ ರೊ. ಜೆ. ವಿ. ಶೆಟ್ಟರಿಗೆ ಸನ್ಮಾನ.

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.