Subscribe to Updates

    Get the latest creative news from FooBar about art, design and business.

    What's Hot

    ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದಿಂದ ಸಂವಾದ ಕಾರ್ಯಕ್ರಮ

    January 28, 2026

    ಎಂ.ಜಿ. ಹೆಗಡೆ ಕೃತಿಗೆ ‘ಗಾಂಧಿ ಸಾಹಿತ್ಯ ಪ್ರಶಸ್ತಿ’

    January 28, 2026

    ಡಾ. ವಸಂತಕುಮಾರ ಪೆರ್ಲ ಇವರಿಗೆ ಹವ್ಯಕ ಸಭಾದಿಂದ ಸನ್ಮಾನ

    January 28, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂಪಿಗೆದಡಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ 
    Yakshagana

    ಸಂಪಿಗೆದಡಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ 

    October 12, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಹರೇಕಳ ಗ್ರಾಮದ ಸಂಪಿಗೆದಡಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯು ದಿನಾಂಕ 09 ಅಕ್ಟೋಬರ್ 2024ರಂದು ನಡೆಯಿತು.
    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಯಕ್ಷಗಾನ ಅರ್ಥಧಾರಿ ಮತ್ತು ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಇವರು ಮಾತನಾಡಿ “ನಮ್ಮ ಸಂಸ್ಕೃತಿ ಮತ್ತು ಜನಜೀವನದೊಂದಿಗೆ ಹಾಸು ಹೊಕ್ಕಾಗಿರುವುದು ಭಾರತೀಯ ಲಲಿತ ಕಲೆಗಳು. ಪ್ರಾಚೀನ ಕಾಲದಿಂದಲೂ ಅವುಗಳಿಗೆ ಆಸರೆಯಾಗಿರುವುದು ಇಲ್ಲಿನ ದೇಗುಲಗಳು. ವಿಶೇಷ ಪರ್ವಕಾಲಗಳಲ್ಲಿ ಸಂಗೀತ, ನೃತ್ಯ, ಯಕ್ಷಗಾನಗಳು ನಡೆಯದಿರುವ ದೈವ ಸಾನಿಧ್ಯಗಳೇ ನಮ್ಮಲ್ಲಿಲ್ಲ. ಅದರಲ್ಲೂ ಯಕ್ಷಗಾನ ತಾಳಮದ್ದಳೆ, ಪುರಾಣ ಪ್ರವಚನ ಮತ್ತು ಬಯಲಾಟಗಳು ಆರಂಭಗೊಂಡಿರುವುದು ಈ ದೇವಸ್ಥಾನಗಳಿಂದಲೇ” ಎಂದು ಹೇಳಿದರು.
    ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಶುಭಾಶಂಸನೆಗೈದರು. ಮುಂಬೈ ಉದ್ಯಮಿ ಜಗದೀಶ ಪೂಜಾರಿ ಇರಾ ಆಚೆಬೈಲು ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮೋಹನ್ ದಾಸ್ ರೈ ದೆಬ್ಬೇಲಿ ಗುತ್ತು ಅವರ ನೇತೃತ್ವದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಮಹಾಬಲ ಹೆಗ್ಡೆ ದೆಬ್ಬೇಲಿ, ಪ್ರಮುಖರಾದ ಕಡೆಂಜ ಜಗಜೀವನ್ ದಾಸ್ ಶೆಟ್ಟಿ, ಶಾಂತಾರಾಮ ರೈ ಎಲಿಯಾರ್, ಪದ್ಮನಾಭ ಶೆಟ್ಟಿ ದೋಟ, ಭಾಸ್ಕರ ರೈ ಸಂಪಿಗೆದಡಿ ಉಪಸ್ಥಿತರಿದ್ದರು. ತಾಳಮದ್ದಳೆಯ ಸಂಘಟಕ ಪ್ರವೀಣ್ ರೈ ಎಲಿಯಾರ್ ಸ್ವಾಗತಿಸಿ, ಕೆ. ಲಕ್ಷ್ಮೀನಾರಾಯಣ ರೈ ಹರೇಕಳ ವಂದಿಸಿದರು. ಹರೀಶ್ ಆಚಾರ್ಯ ಮತ್ತು ವಾಮನ್ ರಾಜ್ ಪಾವೂರು ಸಹಕರಿಸಿದರು. ಸದಾಶಿವ ಆಚಾರ್ಯ ಹರೇಕಳ ಕಾರ್ಯಕ್ರಮ ನಿರೂಪಿಸಿದರು.
    ಉತ್ಸವದ ಅಂಗವಾಗಿ ಪ್ರಸಿದ್ಧ ಕಲಾವಿದರಿಂದ ‘ಯಾಗ ಸಂಕಲ್ಪ – ಮಾಗಧ ವಧೆ’ ಯಕ್ಷಗಾನ ತಾಳಮದ್ದಳೆ ಜರಗಿತು. ಶಂಭು ಶರ್ಮ ವಿಟ್ಲ, ಭಾಸ್ಕರ ರೈ ಕುಕ್ಕುವಳ್ಳಿ, ಪ್ರಭಾಕರ ಶೆಟ್ಟಿ ಕುತ್ತಾರು ಗುತ್ತು, ಗಣೇಶ ಕಾವ ಅಂಡಾಲ ಬೀಡು, ವಿಶ್ವನಾಥ ಆಳ್ವ ನಾಡಾಜೆ, ಪ್ರವೀಣ ರೈ ಎಲಿಯಾರ್ ಅರ್ಥಧಾರಿಗಳಾಗಿದ್ದರು. ರಾಜಾರಾಮ ಹೊಳ್ಳ ಕೈರಂಗಳ ಮತ್ತು ಶಿಶಿರ್ ಕೃಷ್ಣ ಬಲ್ಲಾಳ್ ಚಿಪ್ಪಾರು ಅವರ ಭಾಗವತಿಗೆ ಕೃಷ್ಣಪ್ಪ ಕಿನ್ಯಾ, ರಾಜಾರಾಮ್ ಬಳ್ಳಾಲ್ ಚಿಪ್ಪಾರು, ರಾಜೇಶ್ ಆಚಾರ್ಯ ಕಂಡಿಲ ಮತ್ತು ಪ್ರಕಾಶ್ ಕಿನ್ಯಾ ಹಿಮ್ಮೇಳದಲ್ಲಿ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊರ್ಗಿ ಜಯಪ್ರಕಾಶ್ ಹೆಗ್ಡೆ ಇವರ ನಿವಾಸದಲ್ಲಿ ಸಿನ್ಸ್ 1999 ಶ್ವೇತಯಾನದ 71ನೇ ಕಾರ್ಯಕ್ರಮ
    Next Article ‘ಸಿನ್ಸ್ 1999 ಶ್ವೇತಯಾನ-72ನೇ ಕಾರ್ಯಕ್ರಮ ‘ಚಿಣ್ಣರ ಗಾನ ವೈಭವ’
    roovari

    Add Comment Cancel Reply


    Related Posts

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಹನ್ನೊಂದನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

    January 27, 2026

    ಪುತ್ತೂರು ಪರ್ಲಡ್ಕದಲ್ಲಿ ಎಸ್.ಡಿ.ಪಿ. ವತಿಯಿಂದ ‘ಕಲೋಪಾಸನಾ 2026’ | ಜನವರಿ 31, ಫೆಬ್ರುವರಿ 1 ಮತ್ತು 2

    January 27, 2026

    ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ‘ಜನ ಗಣ ಮನ’ | ಜನವರಿ 24

    January 23, 2026

    ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದ ‘ವಾರ್ಷಿಕೋತ್ಸವ ಸಮಾರಂಭ’ | ಜನವರಿ 25

    January 22, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.