Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಾಂಗಣದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ 2024’ ಸಂಘಟನಾ ಪರ್ವ ಮತ್ತು ಪ್ರಶಸ್ತಿ ಪ್ರದಾನ | ನವೆಂಬರ್ 11ರಿಂದ 17
    Awards

    ಯಕ್ಷಾಂಗಣದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ 2024’ ಸಂಘಟನಾ ಪರ್ವ ಮತ್ತು ಪ್ರಶಸ್ತಿ ಪ್ರದಾನ | ನವೆಂಬರ್ 11ರಿಂದ 17

    November 9, 2024Updated:January 7, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಮತ್ತು ಕರ್ನಾಟಕ ಯಕ್ಷಭಾರತಿ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸಲ್ಪಡುವ ಹನ್ನೆರಡನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ 2024’ ದ್ವಾದಶ ಸರಣಿಯು ದಿನಾಂಕ 11 ನವೆಂಬರ್ 2024ರಿಂದ 17 ನವೆಂಬರ್ 2024ರವರೆಗೆ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಜರಗಲಿದೆ. ‘ಸಂಘಟನಾ ಪರ್ವ’ ಎಂಬ ಹೆಸರಿನಲ್ಲಿ ಜಿಲ್ಲೆಯ ವಿವಿಧ ಯಕ್ಷಗಾನ ಸಂಘಗಳ ಸಹಕಾರದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

    ದಿನಾಂಕ 11 ನವೆಂಬರ್ 2024ರಿಂದ ಕ್ರಮವಾಗಿ ಹವ್ಯಾಸಿ ಬಳಗ ಕದ್ರಿ – ‘ರಾಜಾ ದಂಡಕ’, ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಬೆಟ್ಟಂಪಾಡಿ – ‘ಕಚ ದೇವಯಾನಿ’, ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ – ‘ಸೈಂಧವ ವಧೆ’, ಶ್ರೀ ವಾಣೀ ವಿಲಾಸ ಯಕ್ಷ ಬಳಗ ಕಟೀಲು – ‘ತ್ರಿಶಂಕು ಸ್ವರ್ಗ’, ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ – ‘ಬಿನದ ದಾಂಪತ್ಯ’, ಶ್ರೀ ಚಾಮುಂಡೇಶ್ವರೀ ಯಕ್ಷಕೂಟ ಕಣಿಯೂರು ಕನ್ಯಾನ – ‘ಸುದರ್ಶನೋಪಖ್ಯಾನ’, ಕರ್ನಾಟಕ ಯಕ್ಷಭಾರತಿ ಪುತ್ತೂರು – ‘ಸತೀ ಶಕುಂತಲೆ’ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದಲ್ಲಿ ‘ರೆಂಜೆ ಬನೊತ ಲೆಕ್ಯೆಸಿರಿ’ ಹೀಗೆ ವಿನೂತನ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ.

    ಯಕ್ಷಾಂಗಣದ ಹನ್ನೆರಡನೇ ವರ್ಷದ ತಾಳಮದ್ದಳೆ ಸಪ್ತಾಹ ಉದ್ಘಾಟನಾ ಸಮಾರಂಭವು ದಿನಾಂಕ 11 ನವೆಂಬರ್ 2024ರಂದು ಸಾಯಂಕಾಲ 4-30 ಗಂಟೆಗೆ ಜರಗಲಿದ್ದು, ಗೌರವಾಧ್ಯಕ್ಷ ಡಾ. ಎ.ಜಿ. ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಂಬಯಿ ಉದ್ಯಮಿ ಕೆ.ಪಿ. ರೈ ಕುತ್ತಿಕ್ಕಾರು ಸಪ್ತಾಹವನ್ನು ಉದ್ಘಾಟಿಸುವರು. ಇದೇ ಸಂದರ್ಭ ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಇವರಿಗೆ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ ನೀಡಲಾಗುವುದು. ಮಾಜಿ ಸಚಿವ ಜೆ. ಕೃಷ್ಣ ಪಾಲೇಮಾರ್ ಪ್ರಶಸ್ತಿ ಪ್ರದಾನ ಮಾಡುವರು. ಬಹುಶ್ರುತ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಶುಭಾಶಂಸನೆಗೈಯುವರು. ಡಾ. ಹರಿಕೃಷ್ಣ ಪುನರೂರು, ಡಾ. ಮಂಜುನಾಥ ಎಸ್. ರೇವಣ್ಕರ್, ವಿ. ಕರುಣಾಕರ, ಐ, ಸುಬ್ಬಯ್ಯ ರೈ, ವೇಣುಗೋಪಾಲ್ ಶೆಟ್ಟಿ ಥಾಣೆ, ಜಿತೇಂದ್ರ ಕೊಟ್ಟಾರಿ, ಅರುಣ ಪ್ರಭ ಕೆ.ಎಸ್, ಸಿ.ಎಸ್. ಭಂಡಾರಿ, ಪ್ರವೀಣ್ ಮುಖ್ಯ ಅತಿಥಿಗಳಾಗಿರುವರು.

    ದಿನಾಂಕ 17 ನವೆಂಬರ್ 2024ರಂದು ಜರಗುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳ್ತೆ ಮೊಕ್ತೇಸರ, ಉದ್ಯಮಿ ಕೆ.ಪಿ. ಸುಚರಿತ ಶೆಟ್ಟಿ ಇವರು ವಹಿಸುವರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ಹವ್ಯಾಸಿ ಭಾಗವತ ಹಾಗೂ ಪ್ರಸಂಗಕರ್ತ ಕೆ.ಎಸ್. ಮಂಜುನಾಥ ಶೇರೆಗಾರ ಹರಿಹರಪುರ ಇವರಿಗೆ 2024ನೇ ಸಾಲಿನ ‘ಯಕ್ಷಾಂಗಣ ಗೌರವ ಪ್ರಶಸ್ತಿ’ ಪ್ರದಾನ ಮಾಡುವರು. ಪದ್ಮರಾಜ್ ಆರ್. ಪೂಜಾರಿ, ಚಿತ್ತರಂಜನ್ ಬೋಳಾರ, ಸುಮನಾ ಘಾಟಿ, ಶಕೀಲಾ ಕಾವ ಅತಿಥಿಗಳಾಗಿರುವರು.

    ಸಪ್ತಾಹದ ಎಲ್ಲಾ ದಿನಗಳಲ್ಲಿ ಯಕ್ಷಗಾನಕ್ಕಾಗಿ ದುಡಿದ ಹಿರಿಯ ಚೇತನಗಳು ಕೀರ್ತಿಶೇಷ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ, ವಿದ್ವಾನ್ ಕೆ. ಕಾಂತ ರೈ ಮೂಡಬಿದಿರೆ, ಕುಂಬಳೆ ಶ್ರೀಧರ ರಾವ್, ಬೊಟ್ಟಿಕೆರೆ ಪುರುಷೋತ್ತಮ ಪೂಂಜ, ಎ.ಕೆ. ನಾರಾಯಣ ಶೆಟ್ಟಿ ಮತ್ತು ಎ.ಕೆ. ಮಹಾಬಲ ಶೆಟ್ಟಿ ಫರಂಗಿಪೇಟೆ ಇವರ ಸಂಸ್ಮರಣೆ ನಡೆಯಲಿದೆ. ಅಲ್ಲದೆ ರಾಜ್ಯ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರಿಗೆ “ದಿ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಪ್ರಶಸ್ತಿ’ ಹಾಗೂ ಯಕ್ಷಾಂಗಣದ ಹಿರಿಯ ಸದಸ್ಯರಾದ ವಾಸುದೇವ ಆರ್. ಕೊಟ್ಟಾರಿ ಮತ್ತು ವಕ್ವಾಡಿ ಶೇಖರ ಶೆಟ್ಟಿಯವರಿಗೆ ಸನ್ಮಾನ ಗೌರವಗಳನ್ನು ನೀಡಲಾಗುವುದು.

    ಸಪ್ತಾಹದ ಕೊನೆಯಲ್ಲಿ ದಿನಾಂಕ 17 ನವೆಂಬರ್ 2024ರ ಆದಿತ್ಯವಾರ ಪೂರ್ವಾಹ್ನ 10-30 ಗಂಟೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ‘ತುಳು ಯಕ್ಷಗಾನ ವಿಚಾರಗೋಷ್ಠಿ : ತುಳು ಆಟೊ ಪ್ರಸಂಗ ಬೊಕ್ಕ ಪ್ರಯೋಗ’ ಏರ್ಪಡಿಸಲಾಗಿದೆ. ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಗೋಷ್ಠಿಯನ್ನು ಉದ್ಘಾಟಿಸುವರು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ತಾರಾನಾಥ ವರ್ಕಾಡಿ – ‘ತುಳುಟು ಪುರಾಣ ಪ್ರಸಂಗೊಲು’ ಹಾಗೂ ಹರೀಶ್ ಶೆಟ್ಟಿ ಸೂಡ – ‘ತುಳು ಜಾನಪದ ಪ್ರಸಂಗೊ ಬೊಕ್ಕ ಕಲ್ಪ ಕತೆಕುಲು’ ಪ್ರಬಂಧ ಮಂಡನೆ ಮಾಡುವರು. ಇದೇ ಸಂದರ್ಭದಲ್ಲಿ ಭಾಸ್ಕರ ರೈ ಕುಕ್ಕುವಳ್ಳಿ ಅವರ ನೂತನ ಕೃತಿ ‘ಸೀಯನ’ ಚೀಪೆ-ಕೋಪದ ಪಾಕ ಪದೊಕ್ಕು ತುಳು ಕವಿತಾ ಸಂಕಲನವನ್ನು ಹಿರಿಯ ಸಾಹಿತಿ ಮತ್ತು ಸಂಶೋಧಕ ಪ್ರೊ. ಎ.ವಿ. ನಾವಡ ಬಿಡುಗಡೆಗೊಳಿಸುವರು. ಗಾಯಕ ತೋನ್ಸೆ ಪುಷ್ಕಳ ಕುಮಾರ್ ಮತ್ತು ಸಂಗಡಿಗರು ‘ಸೀಯನ ಪದರಂಗಿತೊ’ ನಡೆಸಿಕೊಡುವರು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleರಿಷಿಕಾ ಕುಂದೇಶ್ವರ ಇವರಿಗೆ ‘ನಂದಗೋಕುಲ ಪ್ರತಿಭಾ ಪುರಸ್ಕಾರ’
    Next Article ಪುತ್ತೂರಿನಲ್ಲಿ ಮಧುಕುಮಾರ್ ಬೋಳೂರು ವಿರಚಿತ ‘ಸುದರ್ಶನ ವಿಜಯ’ ತಾಳಮದ್ದಳೆ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025

    ಉದ್ಘಾಟನೆಗೊಂಡ ಪುತ್ರಕಾಮೇಷ್ಠಿ ಯಕ್ಷಗಾನ ತಾಳಮದ್ದಳೆ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.