Subscribe to Updates

    Get the latest creative news from FooBar about art, design and business.

    What's Hot

    ಪರಿಚಯ | ಸುನಾದ ಚತುರ – ವಿಶ್ವಂಭರ ಅಲ್ಸೆ, ಐರೋಡಿ

    July 12, 2025

    ನಾದಾವಧಾನ ಪ್ರತಿಷ್ಠಾನದಿಂದ ಆನ್ಲೈನ್ ಯಕ್ಷಗಾನ ಭಾಗವತಿಕೆ-ಮದ್ದಳೆ-ಚಂಡೆ-ನೃತ್ಯಗಳ ತರಗತಿ

    July 12, 2025

    ಶಿರಿಯಾರದ ಸಾಹೇಬರಕಟ್ಟೆಯಲ್ಲಿ ‘ಪಂಚಸ್ವರ ಯಕ್ಷಗಾನ ವೈಭವ’

    July 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
    Yakshagana

    ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

    July 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಯಕ್ಷ ಶಿಕ್ಷಣ ನಾಟ್ಯ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 01.07.2024 ರಂದು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ವಿಟ್ಲ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

    ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಅಳಿಕೆ ಪಟ್ಲ ಫೌಂಡೇಶನ್ನಿನ ಕಾರ್ಯಚಟುವಟಿಕೆಗಳು, ಧ್ಯೇಯೋದ್ದೇಶಗಳ ಬಗ್ಗೆ ಸವಿವರ ಮಾಹಿತಿ ನೀಡಿ ನಾಟ್ಯ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಲಾ ನೈಪುಣ್ಯತೆ ಪಡೆಯುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ ವಹಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಕುಮಾರ್ ಬಾಳೆಕಲ್ಲು ಮಾತನಾಡಿ ತರಬೇತಿ ತರಗತಿಗಳಿಗೆ ಶುಭ ಕೋರಿದರು. ಎಸ್.ಡಿ.ಎಂ.ಸಿ. ಸದಸ್ಯರಾದ ವಿಷ್ಣು ಕನ್ನಡಗುಳಿ ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳಿಗೆ ನೀಡಲಾಗುವ ಈ ಉಚಿತ ಯಕ್ಷಗಾನ ನಾಟ್ಯ ತರಗತಿಗಳಿಗಾಗಿ ಪ್ರಾಯೋಜಕರನ್ನು ಅಭಿನಂದಿಸಿದರು.

    ಯಕ್ಷ ಗುರು ಗಣೇಶ್ ಕೊಂದಲಕೋಡಿ ಪ್ರಶಿಕ್ಷಣಾರ್ಥಿಗಳಿಗೆ ಸಾಂಕೇತಿಕವಾಗಿ ಮೊದಲ ತರಬೇತಿ ನಡೆಸಿದರು. ಪಟ್ಲ ಫೌಂಡೇಶನ್ ಟ್ರಸ್ಟಿನ ಸಂಘಟನಾ ಕಾರ್ಯದರ್ಶಿ ಭಾಸ್ಕರ ಶೆಟ್ಟಿ, ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಉಮಾನಾಥ ರೈ ಮೇರಾವು ಭಾಗವಹಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಲತಾ ಯು. ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನೂ ಸ್ವಾಗತಿಸಿ, ಕನ್ನಡ ಭಾಷಾ ಶಿಕ್ಷಕ ಸುಧೀಶ್ ಕೆ. ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಕ ಉಮಾನಾಥ ರೈ ಮೇರಾವು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಿವೃತ್ತ ಕನ್ನಡ ಉಪನ್ಯಾಸಕ ಹಿರಿಯ ಸಾಹಿತಿ ಪ್ರೊ. ಎನ್.ಜಿ. ಪಟವರ್ಧನ್
    Next Article ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಪುಸ್ತಕ ಖರೀದಿ ಯೋಜನೆ
    roovari

    Add Comment Cancel Reply


    Related Posts

    ಪರಿಚಯ | ಸುನಾದ ಚತುರ – ವಿಶ್ವಂಭರ ಅಲ್ಸೆ, ಐರೋಡಿ

    July 12, 2025

    ನಾದಾವಧಾನ ಪ್ರತಿಷ್ಠಾನದಿಂದ ಆನ್ಲೈನ್ ಯಕ್ಷಗಾನ ಭಾಗವತಿಕೆ-ಮದ್ದಳೆ-ಚಂಡೆ-ನೃತ್ಯಗಳ ತರಗತಿ

    July 12, 2025

    ಶಿರಿಯಾರದ ಸಾಹೇಬರಕಟ್ಟೆಯಲ್ಲಿ ‘ಪಂಚಸ್ವರ ಯಕ್ಷಗಾನ ವೈಭವ’

    July 12, 2025

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ ಪ್ರಸಂಗ ರಚನೆ ಕಮ್ಮಟ ಮತ್ತು ಪ್ರಶಸ್ತಿ ಪ್ರದಾನ

    July 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.