Subscribe to Updates

    Get the latest creative news from FooBar about art, design and business.

    What's Hot

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025

    ಪುಸ್ತಕ ವಿಮರ್ಶೆ | ವಿಜಯಲಕ್ಷ್ಮಿ ಶಾನುಭೋಗ್ ಇವರ ‘ವ್ಯೂಹ’ (ಕಥಾಸಂಕಲನ)

    May 15, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲ್ಲಡ್ಕದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿಯ ಉದ್ಘಾಟನಾ ಕಾರ್ಯಕ್ರಮ
    Yakshagana

    ಕಲ್ಲಡ್ಕದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

    June 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ದಿನಾಂಕ 25-06-2024ನೇ ಮಂಗಳವಾರದಂದು ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಶ್ರೀವತ್ಸ ದೇವರ ಸ್ತುತಿಯನ್ನು ಹಾಡಿದನು.

    ಈ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀರಾಮ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ, ಶ್ರೀರಾಮ ವಿದ್ಯಾ ಕೇಂದ್ರದ ಟ್ರಸ್ಟಿ ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲಾ ಗ್ರಾಮಾವಿಕಾಸ ಸಂಯೋಜಕರಾದ ಶ್ರೀ ಸುಜಿತ್ ಕುಮಾರ್ ಇವರು ಮಾತನಾಡಿ “ಯಕ್ಷಗಾನವು ಶಿಕ್ಷಣದ ಜೊತೆ ಇರುವಂತಹ ಒಂದು ಕಲೆ. ಈ ಕಲೆಯನ್ನು ಮತ್ತು ಸಂಸ್ಕೃತಿಯನ್ನು ಉಳಿಸುವುದು ನಮ್ಮ ಕರ್ತವ್ಯ ಹಾಗೂ ವಿಶ್ವಗುರು ಭಾರತ ನಿರ್ಮಾಣದಲ್ಲಿ ಯಕ್ಷಗಾನದ ಕಲೆಯ ಪಾತ್ರವು ಮುಖ್ಯವಾಗಬೇಕು” ಎಂದು ತಿಳಿಸಿದರು.

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಇವರು “ಯಕ್ಷಗಾನವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಯಕ್ಷಗಾನದ ಜೊತೆ ಸಮಾಜಕ್ಕೆ ನಮ್ಮಿಂದಾಗುವ ಸೇವೆ ಮಾಡಬೇಕು” ಎಂದು ಹೇಳಿ ಶುಭ ಹಾರೈಸಿದರು.

    ಅತಿಥಿಯಾಗಿ ಭಾಗವಹಿಸಿದ ವಿಟ್ಲ ಘಟಕ ಪ್ರಧಾನ ಕಾರ್ಯದರ್ಶಿಗಳು ನಿವೃತ್ತ ಉಪನ್ಯಾಸಕರಾದ ಶ್ರೀಯುತ ಪಿ. ಪೂವಪ್ಪ ಶೆಟ್ಟಿ ಇವರ ಹಿತ ನುಡಿಗಳಲ್ಲಿ ಕಥೆಗಳನ್ನು ಮುಂದಿನ ಪೀಳಿಗೆಗೆ ತಿಳಿಸಲು ಇರುವ ಸುಲಭ ಸಾಧನ ಯಕ್ಷಗಾನ. ಅಳಿವಿನಂಚಿನಲ್ಲಿರುವ ಈ ಕಲೆಯನ್ನು ಪಟ್ಲ ಫೌಂಡೇಷನ್ ಸಂಸ್ಥಾಪಕರಾದ ಸತೀಶ್ ಪಟ್ಲರವರು ಕಲೆಯ ಅಭಿಮಾನ ಹಾಗೂ ಛಲದಿಂದ ಯಕ್ಷಗಾನಕ್ಕೆ ಹೇಗೆ ಶ್ರಮಿಸಿದ್ದಾರೆ ಎಂಬುವುದರ ಬಗ್ಗೆ ತಿಳಿಸಿದರು.

    ಯಕ್ಷಗಾನ ಶಿಕ್ಷಕರಾದ ಶ್ರೀಯುತ ಅಮ್ಮುಂಜೆ ಮೋಹನ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಯಕ್ಷಗಾನದ ಮೊದಲ ಹೆಜ್ಜೆಯ ತರಬೇತಿಯನ್ನು ಕೊಟ್ಟರು. ವೇದಿಕೆಯಲ್ಲಿ ಪ್ರಧಾನ ಸಂಚಾಲಕರು ವಿಟ್ಲ ಘಟಕ ಶ್ರೀ ಅರವಿಂದ ರೈ ಮೂರ್ಜೆಬೆಟ್ಟು ಹಾಗೂ ಶ್ರೀರಾಮ ಪ್ರೌಢಶಾಲೆಯ ಮುಖ್ಯ ಗುರುಗಳಾದ ಗೋಪಾಲ್ ಶ್ರೀಮಾನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಾದ ಜಿನ್ನಪ್ಪ ಶ್ರೀಮಾನ್ ಸ್ವಾಗತಿಸಿ, ಸಹ ಶಿಕ್ಷಕಿ ಮೇಘಶ್ರೀ ವಂದಿಸಿ, ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜುಲೈ 20
    Next Article ಪೂಪಾಡಿಕಲ್ಲಿನಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 30 
    roovari

    Add Comment Cancel Reply


    Related Posts

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications