ಮಂಗಳೂರು : ಯಕ್ಷ ಸ್ನೇಹ ಕಲಾ ಪ್ರತಿಷ್ಠಾನ (ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನ ಇದರ ಆಶ್ರಯದಲ್ಲಿ ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮವನ್ನು ದಿನಾಂಕ 01ರಿಂದ 08 ಮಾರ್ಚ್ 2026ರವರೆಗೆ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದ ಆವರಣದಲ್ಲಿರುವ ಶ್ರೀಮತಿ ಲೀಲಾವತಿ ಬೈಪಡಿತ್ತಾಯ ವೇದಿಕೆಯಲ್ಲಿ ಹಮ್ಮಿಕೊಂಡಿದ್ದಾರೆ.
ದಿನಾಂಕ 01 ಮಾರ್ಚ್ 2026ರಂದು ಅಪರಾಹ್ನ 2-00 ಗಂಟೆಗೆ ಯಕ್ಷ ಸ್ನೇಹ ಕಲಾ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಗೀತಾ ಲಕ್ಷ್ಮೀಶ್ ಇವರ ಅಧ್ಯಕ್ಷತೆಯಲ್ಲಿ ಭಾರತ ಮಾತ ಪೂಜನಾ ಕಾರ್ಯಕ್ರಮದೊಂದಿಗೆ ಚಾಲನೆ ದೊರೆಯಲಿದೆ. ಗಾನಗಂಗೋತ್ರಿ ಸಂಗೀತ ಶಾಲೆಯ ಶ್ರೀಮತಿ ರಶ್ಮಿ ರವಿ ಕುಮಾರ್ ಇವರ ಶಿಷ್ಯ ವೃಂದದವರಿಂದ ವಂದೇ ಮಾತರಂ ಗೀತಾ ಗಾಯನ ಮತ್ತು ಯಕ್ಷ ಸ್ನೇಹ ಕಲಾ ಪ್ರತಿಷ್ಠಾನದ ಕಲಾವಿದರಿಂದ ಮಧುಸೂದನ್ ಅಲೆವೂರಾಯ ವರ್ಕಾಡಿ ಇವರ ನಿರ್ದೇಶನದಲ್ಲಿ ‘ಸುದರ್ಶನ ಗರ್ವಭಂಗ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ. ಸಂಜೆ 5-00 ಗಂಟೆಗೆ ಬಾಲಕೃಷ್ಣ ಕೊಟ್ಟಾರಿ ಇವರ ಅಧ್ಯಕ್ಷತೆಯಲ್ಲಿ ಉದ್ಘಟನ ಸಮಾರಂಭ ನಡೆಯಲಿದೆ. 6-00 ಗಂಟೆಗೆ ಮಂಗಳೂರು ಕದ್ರಿ ಯಕ್ಷ ಮಂಜುಳಾ ಮಹಿಳಾ ತಂಡದವರಿಂದ ರವಿ ಅಲೆವೂರಾಯ ವರ್ಕಾಡಿ ಇವರ ನಿರ್ದೇಶನದಲ್ಲಿ ‘ಇಂದ್ರಜಿತು ಕಾಳಗ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.
ದಿನಾಂಕ 02 ಮಾರ್ಚ್ 2026ರಂದು ಸಂಜೆ 5-00 ಗಂಟೆಗೆ ಶ್ರೀ ದುರ್ಗಾಪದಮೇಶ್ವರಿ ವೆಂಕಟರಮಣ ದೇವಸ್ಥಾನದ ಅಧ್ಯಕ್ಷರಾದ ಲಕ್ಷ್ಮಣ್ ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ 6-00 ಗಂಟೆಗೆ ಕಾರಿಂಜ ಯಕ್ಷಾವಾಸ್ಯಮ್ (ರಿ.) ತಂಡದ ಸದಸ್ಯರಿಂದ ‘ಇಂದ್ರ ಕೀಲಕ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.
ದಿನಾಂಕ 03 ಮಾರ್ಚ್ 2026ರಂದು ಸಂಜೆ 5-00 ಗಂಟೆಗೆ ಖ್ಯಾತ ನಿರೂಪಕ ಕದ್ರಿ ನವನೀತ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ 6-00 ಗಂಟೆಗೆ ಸುರತ್ಕಲ್ ಯಕ್ಷ ಕಲಾ ಮಹಿಳಾ ತಂಡದ ಸದಸ್ಯರಿಂದ ‘ಕದಂಬ ಕೌಶಿಕೆ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.
ದಿನಾಂಕ 04 ಮಾರ್ಚ್ 2026ರಂದು ಸಂಜೆ 5-00 ಗಂಟೆಗೆ ಗುತ್ತಿಗೆದಾರರಾದ ಮಹಾಬಲ ಕೊಟ್ಟಾರಿ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ 6-00 ಗಂಟೆಗೆ ತಳಪಾಡಿ ಯಕ್ಷ ಸಿಂಧೂರ ಮಹಿಳಾ ಯಕ್ಷಗಾನ ಕೂಟದ ಸದಸ್ಯರಿಂದ ‘ಭಕ್ತ ಸುಧನ್ವ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.
ದಿನಾಂಕ 05 ಮಾರ್ಚ್ 2026ರಂದು ಸಂಜೆ 5-00 ಗಂಟೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದ ಗೌರವಾಧ್ಯಕ್ಷರಾದ ಶ್ರೀಮತಿ ಆರತಿ ಆಳ್ವ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ 6-00 ಗಂಟೆಗೆ ಅಶೋಕ ನಗರ ಶ್ರೀ ಭ್ರಾಮರಿ ಮಹಿಳಾ ಕಲಾವೃಂದದ ಸದಸ್ಯರಿಂದ ‘ಸುದರ್ಶನ ವಿಜಯ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.
ದಿನಾಂಕ 06 ಮಾರ್ಚ್ 2026ರಂದು ಸಂಜೆ 5-00 ಗಂಟೆಗೆ ಮಾಜಿ ಸಚಿವರಾದ ಬಿ. ನಾಗರಾಜ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ 6-00 ಗಂಟೆಗೆ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ಸದಸ್ಯರಿಂದ ಭಾಸ್ಕರ ಬಾರ್ಯ ಇವರ ನಿರ್ದೇಶನದಲ್ಲಿ ‘ಶ್ಯಮಂತಕ ಮಣಿ, ಜಾಂಬವತಿ ಕಲ್ಯಾಣ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.
ದಿನಾಂಕ 07 ಮಾರ್ಚ್ 2026ರಂದು ಸಂಜೆ 5-00 ಗಂಟೆಗೆ ಸಹಾಯಕ ಪೊಲೀಸ್ ಆಯುಕ್ತರು ಶ್ರೀಮತಿ ಗೀತಾ ಕುಲಕರ್ಣಿ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ 6-00 ಗಂಟೆಗೆ ಮಂಗಳೂರು ಕೋಡಿಕಲ್ ಸರಯೂ ಮಹಿಳಾ ವೃಂದದ ಸದಸ್ಯರಿಂದ ರವಿ ಅಲೆವೂರಾಯ ವರ್ಕಾಡಿ ಇವರ ನಿರ್ದೇಶನದಲ್ಲಿ ‘ಶ್ರೀ ಏಕಾದಶಿ ದೇವಿ ಮಹಾತ್ಮೆ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.
ದಿನಾಂಕ 08 ಮಾರ್ಚ್ 2026ರಂದು ಸಂಜೆ 5-00 ಗಂಟೆಗೆ ಕಲಾ ಪೋಷಕರಾದ ಶ್ರೀಮತಿ ಆಶಾ ಪ್ರಭಾಕರ ರಾವ್ ಆರೂರು ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ 6-00 ಗಂಟೆಗೆ ಯಕ್ಷ ಸ್ನೇಹ ಕಲಾ ಪ್ರತಿಷ್ಠಾನದ ಕಲಾವಿದರಿಂದ ಮಧುಸೂದನ್ ಅಲೆವೂರಾಯ ವರ್ಕಾಡಿ ಇವರ ನಿರ್ದೇಶನದಲ್ಲಿ ‘ಗಿರಿಜಾ ಕಲ್ಯಾಣ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ. ಇದೇ ಸಂದರ್ಭದಲ್ಲಿ ನೃತ್ಯ ಗುರು ವಿದುಷಿ ಸೌಮ್ಯ ಸುಧೀಂದ್ರ ರಾವ್ ಮತ್ತು ಯಕ್ಷಗಾನ ಕಲಾವಿದೆ ಶ್ರೀಮತಿ ಯೋಗಾಕ್ಷಿ ಗಣೇಶ್ ತಲಕಳ ಇವರನ್ನು ಸನ್ಮಾನಿಸಲಾಗುವುದು.

