ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ‘ಯಕ್ಷಶ್ರಾವಣ – 2’ ತಾಳಮದ್ದಲೆ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಭೀಷ್ಮ ವಿಜಯ’ದೊಂದಿಗೆ ದಿನಾಂಕ 18 ಆಗಸ್ಟ್ 2026ನೇ ಮಂಗಳವಾರ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಸತೀಶ ಇರ್ದೆ ಹಾಗೂ ಚೆಂಡೆ ಮದ್ದಲೆಗಳಲ್ಲಿ ಪಿ.ಟಿ. ಜಯರಾಮ ಭಟ್, ಸಮರ್ಥ ವಿಷ್ಣು ಕಡಂಬಳಿಕೆ ಭಾಗವಹಿಸಿದರು. ಮುಮ್ಮೇಳದಲ್ಲಿ ಭೀಷ್ಮನಾಗಿ ಗುಂಡ್ಯಡ್ಕ ಈಶ್ವರ ಭಟ್, ಅಂಬೆಯಾಗಿ ಭಾಸ್ಕರ ಬಾರ್ಯ, ಪರಶುರಾಮನ ಪಾತ್ರದಲ್ಲಿ ಗುಡ್ಡಪ್ಪ ಬಲ್ಯ, ವೃದ್ಧಬ್ರಾಹ್ಮಣನಾಗಿ ಮಾಂಬಾಡಿ ವೇಣುಗೋಪಾಲ ಭಟ್, ಸಾಲ್ವನಾಗಿ ಬಡೆಕ್ಕಿಲ ಚಂದ್ರಶೇಖರ ಭಟ್ ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಾಂಬಾಡಿ ವೇಣುಗೋಪಾಲ್ ಭಟ್ ಪ್ರಾಯೋಜಿಸಿದರು. ಭಾಸ್ಕರ ಬಾರ್ಯ ಸ್ವಾಗತಿಸಿ, ದೇವಳದ ಪ್ರಬಂಧಕ ಸುಬ್ರಹ್ಮಣ್ಯ ಭಟ್ ವಂದಿಸಿದರು.
