Subscribe to Updates

    Get the latest creative news from FooBar about art, design and business.

    What's Hot

    ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

    January 5, 2026

    ವಿದ್ಯಾರ್ಥಿ ಜಾನಪದ ಲೋಕೋತ್ಸವ : ಕಲಾತಂಡಕ್ಕೆ ಆಹ್ವಾನ | ಕೊನೆಯ ದಿನಾಂಕ ಜನವರಿ 10

    January 5, 2026

    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 10’ ಕೊಂಕಣಿ ಕವಿಗೋಷ್ಠಿ 

    January 5, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತುಳು ತಾಳಮದ್ದಳೆ ಸಪ್ತಾಹದಲ್ಲಿ ಯಕ್ಷ ಕಲಾವಿದ ಜಬ್ಬಾರ್ ಸಮೋರಿಗೆ ಗೌರವ
    Yakshagana

    ತುಳು ತಾಳಮದ್ದಳೆ ಸಪ್ತಾಹದಲ್ಲಿ ಯಕ್ಷ ಕಲಾವಿದ ಜಬ್ಬಾರ್ ಸಮೋರಿಗೆ ಗೌರವ

    December 12, 2025Updated:December 15, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ತುಳು ಕೂಟ ಕುಡ್ಲ ಮತ್ತು ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇವರ ವತಿಯಿಂದ ನಡೆಯುತ್ತಿರುವ ಮರೋಳಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ-ತುಳು ತಾಳಮದ್ದಳೆ ಸಪ್ತಾಹದ ಐದನೇ ದಿನದ ಕಾರ್ಯಕ್ರಮ ದಿನಾಂಕ 11 ಡಿಸೆಂಬರ್ 2025ರಂದು ಮಂಗಳೂರಿನ ಕಂಕನಾಡಿ ಗರೋಡಿಯ ದೇವಿ ಬೈದೆತಿ ಬಾವಡಿಯಲ್ಲಿ ನಡೆಯಿತು.

    ತುಳು ಸಪ್ತಾಹದಲ್ಲಿ ಭಾಗವಹಿಸಿದ ಹಿರಿಯ ವಿದ್ವಾಂಸರಾದ ಡಾ. ಎಂ. ಪ್ರಭಾಕರ ಜೋಷಿ “ಸಮಾಜಕ್ಕೆ ಉತ್ತಮ ಸಂದೇಶವನ್ನು ಯಕ್ಷಗಾನ ಪೌರಾಣಿಕ ಪ್ರಸಂಗಗಳು ನೀಡುತ್ತವೆ. ಸಂಘಟನಾ ಬಲ ಸಮಾಜಕ್ಕೆ ಧೈರ್ಯ ತುಂಬುತ್ತದೆ. ಅದರ ಪ್ರಸಾರ ಇಂದು ವಿಶ್ವದ ಮೂಲೆ ಮೂಲೆಗಳಲ್ಲಿ ಪಸರಿದೆ. ಯಕ್ಷಗಾನದಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ದಾಮೋದರ ನಿಸರ್ಗರು ಇಂತಹಾ ಅನೇಕ ಸಪ್ತಾಹಗಳನ್ನು ನಡೆಸಿದ್ದಾರೆ. ಇಂದು ಗರೋಡಿಯ ಬ್ರಹ್ಮ ಬೈದ್ಯರ್ಕಳ ಪುಣ್ಯಸ್ಥಳದಲ್ಲಿ ನಿಸರ್ಗರ ನೆನಪಿನ ಸಪ್ತಾಹ ನಡೆಸುತ್ತಿರುವುದರಿಂದ ಅದು ಆ ಚೇತನಕ್ಕೆ ತೃಪ್ತಿಯಾಗುವುದು. ಹಾಗಾಗಿ ತುಳು ಕೂಟದ ಸಂಘಟನಾ ಪರ್ವ ಕಾರ್ಯ ಮುಂದುವರಿಯಲಿ” ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಯಕ್ಷ ಕಲಾವಿದ ಜಬ್ಬಾರ್ ಸಮೋರನ್ನು ತುಳು ಕೂಟದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗರು ಗೌರವಿಸಿದರು. ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ನಾಗೇಶ ದೇವಾಡಿಗ, ವರ್ಕಾಡಿ ರವಿ ಅಲೆವೂರಾಯ, ಮಾಧುಸೂದನ ಅಲೆವೂರಾಯ, ಶಶಿಧರ ಪೊಯ್ಯುತ್ತಬೈಲ್, ನ್ಯಾಯವಾದಿ ಗೋಪಾಲಕೃಷ್ಣ ಭಟ್ ಗುತ್ತಿಗಾರ್ ಉಪಸ್ಥಿತರಿದ್ದರು. ಬಳಿಕ ಸರಯೂ ಯಕ್ಷವೃಂದದಿಂದ ‘ಕಾನದ ಕೌಶಿಕೆ’ ತಾಳಮದ್ದಲೆ ಪ್ರಸ್ತುತಗೊಂಡಿತು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪದ್ಯಾಣ ಶಂಕರನಾರಾಯಣ ಭಟ್ ಇವರಿಗೆ ‘ಶ್ರೀ ಹರಿಲೀಲಾ ಯಕ್ಷನಾದ ಪುರಸ್ಕಾರ’ ಪ್ರದಾನ
    Next Article ಮಡಿಕೇರಿಯ ಹಿರಿಯರ ಕವಿಗೋಷ್ಠಿಯಲ್ಲಿ ಜೀವನೋತ್ಸಾಹ ತುಂಬಿದ ಹಿರಿಯರ ಕವನ ವಾಚನ
    roovari

    Add Comment Cancel Reply


    Related Posts

    ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

    January 5, 2026

    ವಿದ್ಯಾರ್ಥಿ ಜಾನಪದ ಲೋಕೋತ್ಸವ : ಕಲಾತಂಡಕ್ಕೆ ಆಹ್ವಾನ | ಕೊನೆಯ ದಿನಾಂಕ ಜನವರಿ 10

    January 5, 2026

    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 10’ ಕೊಂಕಣಿ ಕವಿಗೋಷ್ಠಿ 

    January 5, 2026

    ಬೆಂಗಳೂರಿನ ಸ್ವಾಮಿ ವಿವೇಕಾನಂದ ಶತಾಬ್ಧಿ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ | ಜನವರಿ 07

    January 5, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.