Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಜಾಗೃತಿ ಟ್ರಸ್ಟ್ ವತಿಯಿಂದ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ | ಫೆಬ್ರವರಿ 25
    Uncategorized

    ಜಾಗೃತಿ ಟ್ರಸ್ಟ್ ವತಿಯಿಂದ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ | ಫೆಬ್ರವರಿ 25

    February 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಜಾಗೃತಿ ಟ್ರಸ್ಟ್ (ರಿ.) ಬೆಂಗಳೂರು ಇದರ ವತಿಯಿಂದ ರೋಟರಿ ಕ್ಲಬ್ ಮತ್ತು ರಿಚ್ ಮಂಡ್ ಟೌನ್ ಬೆಂಗಳೂರು ಇವುಗಳ ಸಹಯೋಗದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದಲ್ಲಿ ಭಾವಜೀವಿ ಡಾ. ಬಿ.ಎಸ್. ಮಂಜುನಾಥ್ ಇವರ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 25 ಫೆಬ್ರವರಿ 2025ರಂದು ಬೆಳಿಗೆ 9-30 ಗಂಟೆಗೆ ಬೆಂಗಳೂರಿನ ಕೆ.ಆರ್. ವೃತ್ತ, ಕಬ್ಬನ್ ಪಾರ್ಕ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡ, ಮೇರಿ ದೇವಾಸಿಯಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ನಾಡಪ್ರಭು ಶ್ರೀ ಕೆಂಪೇಗೌಡ ಸಾರ್ವಜನಿಕ ಸೇವಾವೇದಿಕೆ ಇದರ ಅಧ್ಯಕ್ಷರಾದ ಪಿ. ಶಿವಕುಮಾರ್ ಇವರ ಅಧ್ಯಕ್ಷತೆಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕರಾದ ಶ್ರೀಮತಿ ಲಕ್ಷ್ಮೀದೇವಿ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದಾರೆ. ಶ್ರೀಮತಿ ಆರ್. ಅಂಬುಜಾಕ್ಷಿ ಬೀರೇಶ್ ತಂಡದವರಿಂದ ಜಾನಪದ ಗೀತಗಾಯನ, ಸರಿಗಮಪ ಸ್ಪರ್ಧಿ ನಾಗರಾಜ ತುಂಬ್ರಿರವರಿಂದ ಗಾಯನ, ಇಂಡಿಯನ್ ಪ್ರೈಮರಿ ಅಂಡ್ ಹೈಸ್ಕೂಲ್ ಮಕ್ಕಳಿಂದ ಕಾರ್ಯಕ್ರಮಗಳು ಹಾಗೂ ಸುಡುಗಾಡು ಸಿದ್ದ ಅಲೆಮಾರಿ ಜಾನಪದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಧ್ಯಾಹ್ನ 12-00 ಗಂಟೆಗೆ ಕವಿಗೋಷ್ಠಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. 1-30 ಗಂಟೆಗೆ ನಿವೃತ್ತ ಪ್ರಾಧ್ಯಾಪಕರಾದ ಡಾ. ಪ್ರಧಾನ ಗುರುದತ್ತ ಇವರ ಅಧ್ಯಕ್ಷತೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರ ಇವರು ಕೃತಿ ಬಿಡುಗಡೆ ಮಾಡಲಿದ್ದು, ರಾಜ್ಯ ಸಾಂಸ್ಕೃತಿಕ ಕಾರ್ಯದರ್ಶಿಯಾದ ಹೆಚ್.ಸಿ. ಮಧು ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ‘ಚಿರನೂತನ ಗೀತ ಗಾಯನ’ | ಫೆಬ್ರವರಿ 23
    Next Article ಈರಮಂಡ ಹರಿಣಿ ವಿಜಯ್ ಇವರಿಗೆ ‘ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿ’ | ಫೆಬ್ರವರಿ 23
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಕಾರಂತರ ಸುಳಿಯಲ್ಲಿ’ ಅನುವಾದಿತ ಕೃತಿ ಲೋಕಾರ್ಪಣೆ

    April 24, 2026

    ವಿಕಾಸ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮ

    February 24, 2026

    ಭಾಸ್ಕರ ರೈ ಕುಕ್ಕುವಳ್ಳಿಯವರ ‘ಕಲ್ಲುರ್ಟಿ ಕಥನ’ ನಮ್ಮ ಕೊಂಬಾರು ಯೂಟ್ಯೂಬ್ ನಲ್ಲಿ ಬಿಡುಗಡೆ

    January 29, 2026

    ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಕ್ಕಳಿಂದ ನಾಟಕ ಪ್ರದರ್ಶನ | ಜನವರಿ 06

    January 5, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.