Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸಿನ್ಸ್ 1999 ಶ್ವೇತಯಾನ’ ಸರಣಿಯ 30ನೇಯ ಕಾರ್ಯಕ್ರಮ ಮಕ್ಕಳ ‘ಯುಗಳ ಸಂವಾದ’
    Yakshagana

    ‘ಸಿನ್ಸ್ 1999 ಶ್ವೇತಯಾನ’ ಸರಣಿಯ 30ನೇಯ ಕಾರ್ಯಕ್ರಮ ಮಕ್ಕಳ ‘ಯುಗಳ ಸಂವಾದ’

    May 31, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಣೂರು: ಮಣೂರು ಮಳಲುತಾಯಿ ಶ್ರೀ ದುರ್ಗಾಪರಮೇಶ್ವರಿ ದೇಗುಲದ 2ನೇ ವರ್ಷದ ಪ್ರತಿಷ್ಠಾ ವರ್ದಂತಿ ಕಾರ್ಯಕ್ರಮದ ಅಂಗವಾಗಿ ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆಯ ‘ಸಿನ್ಸ್ 1999 ಶ್ವೇತಯಾನ’ದ 30ನೆಯ ಕಾರ್ಯಕ್ರಮವಾಗಿ ಮಕ್ಕಳ ‘ಯುಗಳ ಸಂವಾದ’ವು ದಿನಾಂಕ 29-05-2024 ರಂದು ನಡೆಯಿತು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಭಾಗವತರಾದ ಹರೀಶ್ ಕಾವಡಿ ಮಾತನಾಡಿ “ಸಾಂಸ್ಕೃತಿಕ ಲೋಕದ ಭವಿಷ್ಯದ ರೂವಾರಿಗಳು ತೆಕ್ಕಟ್ಟೆ ಸಂಸ್ಥೆಯಲ್ಲಿ ದಿನದಿನವೂ ವೃದ್ಧಿಗೊಳ್ಳುತ್ತಿದ್ದಾರೆ. ಯಕ್ಷಕಲೆಯಲ್ಲಿನ ವಿವಿಧ ಆಯಾಮಗಳಲ್ಲಿ ಕರಗತಗೊಂಡಿರುವ ಯಶಸ್ವಿ ಸಂಸ್ಥೆಯ ಪುಟಾಣಿಗಳು ಕರಾವಳಿ ಭಾಗದಲ್ಲಿ ಮನೆ ಮಾತಾಗಿದ್ದಾರೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಕಾಣುತ್ತದೆ. ರಂಗ ಒದಗುತ್ತಾ ಹೋದಾಗ ಮಕ್ಕಳಲ್ಲಿನ ಕಲೆ ಪ್ರಬುದ್ಧಗೊಳ್ಳುತ್ತದೆ. ಹಲವಾರು ರಂಗದಲ್ಲಿ ಮಿಂಚುತ್ತಾ ಕಳೆಕಟ್ಟುವ ಮಕ್ಕಳು ಕಲಾ ವಲಯದಲ್ಲಿ ಸೈ ಎನಿಸಿಕೊಂಡಿರುವುದಂತೂ ನಿಜ.” ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಯ ರಘುರಾಮ ಶೆಟ್ಟಿಯವರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ ಅತಿಥಿಗಳಾಗಿ ವಿಜಯ್ ಶೆಟ್ಟಿ, ಸುರೇಶ್, ಚಂಡೆಯ ರಾಹುಲ್ ಕುಂದರ್ ಕೋಡಿ ಉಪಸ್ಥಿತರಿದ್ದರು.

    ಲಂಕಾದಹನದ ಹನುಮಂತ-ಲಂಕಿಣಿ, ದ್ರೌಪದಿ ಪ್ರತಾಪದ ದ್ರೌಪದಿ-ಅರ್ಜುನ, ಕೃಷ್ಣಾರ್ಜುನದ ಸುಭದ್ರೆ-ರುಕ್ಮಿಣಿ, ಸುಧನ್ವಾರ್ಜುನದ ಸುಧನ್ವ-ಪ್ರಭಾವತಿ, ಅಭಿಮನ್ಯು-ಸುಭದ್ರೆ, ಭೀಮ-ಅರ್ಜುನರ ಸಂವಾದಗಳು ಯುಗಳ ಸಂವಾದವಾಗಿ ರಂಗ ಪ್ರಸ್ತುತಿಗೊಂಡಿತು. ಉಪನ್ಯಾಸಕ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರಂಗಶಂಕರದಲ್ಲಿ ‘ಕಾಯುವ ಕಾಯಕ’ | ಜೂನ್ 5
    Next Article ಪರಿಚಯ ಲೇಖನ | ‘ಯಕ್ಷ ಕಲಾ ಲಲನೆ’ ಬಿಂದಿಯಾ ಶೆಟ್ಟಿ
    roovari

    Add Comment Cancel Reply


    Related Posts

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ಕೊಂಚಾಡಿಯಲ್ಲಿ ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.