Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸಿನ್ಸ್ 1999 ಶ್ವೇತಯಾನ’ ಸರಣಿಯ 30ನೇಯ ಕಾರ್ಯಕ್ರಮ ಮಕ್ಕಳ ‘ಯುಗಳ ಸಂವಾದ’
    Yakshagana

    ‘ಸಿನ್ಸ್ 1999 ಶ್ವೇತಯಾನ’ ಸರಣಿಯ 30ನೇಯ ಕಾರ್ಯಕ್ರಮ ಮಕ್ಕಳ ‘ಯುಗಳ ಸಂವಾದ’

    May 31, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಣೂರು: ಮಣೂರು ಮಳಲುತಾಯಿ ಶ್ರೀ ದುರ್ಗಾಪರಮೇಶ್ವರಿ ದೇಗುಲದ 2ನೇ ವರ್ಷದ ಪ್ರತಿಷ್ಠಾ ವರ್ದಂತಿ ಕಾರ್ಯಕ್ರಮದ ಅಂಗವಾಗಿ ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆಯ ‘ಸಿನ್ಸ್ 1999 ಶ್ವೇತಯಾನ’ದ 30ನೆಯ ಕಾರ್ಯಕ್ರಮವಾಗಿ ಮಕ್ಕಳ ‘ಯುಗಳ ಸಂವಾದ’ವು ದಿನಾಂಕ 29-05-2024 ರಂದು ನಡೆಯಿತು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಭಾಗವತರಾದ ಹರೀಶ್ ಕಾವಡಿ ಮಾತನಾಡಿ “ಸಾಂಸ್ಕೃತಿಕ ಲೋಕದ ಭವಿಷ್ಯದ ರೂವಾರಿಗಳು ತೆಕ್ಕಟ್ಟೆ ಸಂಸ್ಥೆಯಲ್ಲಿ ದಿನದಿನವೂ ವೃದ್ಧಿಗೊಳ್ಳುತ್ತಿದ್ದಾರೆ. ಯಕ್ಷಕಲೆಯಲ್ಲಿನ ವಿವಿಧ ಆಯಾಮಗಳಲ್ಲಿ ಕರಗತಗೊಂಡಿರುವ ಯಶಸ್ವಿ ಸಂಸ್ಥೆಯ ಪುಟಾಣಿಗಳು ಕರಾವಳಿ ಭಾಗದಲ್ಲಿ ಮನೆ ಮಾತಾಗಿದ್ದಾರೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಕಾಣುತ್ತದೆ. ರಂಗ ಒದಗುತ್ತಾ ಹೋದಾಗ ಮಕ್ಕಳಲ್ಲಿನ ಕಲೆ ಪ್ರಬುದ್ಧಗೊಳ್ಳುತ್ತದೆ. ಹಲವಾರು ರಂಗದಲ್ಲಿ ಮಿಂಚುತ್ತಾ ಕಳೆಕಟ್ಟುವ ಮಕ್ಕಳು ಕಲಾ ವಲಯದಲ್ಲಿ ಸೈ ಎನಿಸಿಕೊಂಡಿರುವುದಂತೂ ನಿಜ.” ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಯ ರಘುರಾಮ ಶೆಟ್ಟಿಯವರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ ಅತಿಥಿಗಳಾಗಿ ವಿಜಯ್ ಶೆಟ್ಟಿ, ಸುರೇಶ್, ಚಂಡೆಯ ರಾಹುಲ್ ಕುಂದರ್ ಕೋಡಿ ಉಪಸ್ಥಿತರಿದ್ದರು.

    ಲಂಕಾದಹನದ ಹನುಮಂತ-ಲಂಕಿಣಿ, ದ್ರೌಪದಿ ಪ್ರತಾಪದ ದ್ರೌಪದಿ-ಅರ್ಜುನ, ಕೃಷ್ಣಾರ್ಜುನದ ಸುಭದ್ರೆ-ರುಕ್ಮಿಣಿ, ಸುಧನ್ವಾರ್ಜುನದ ಸುಧನ್ವ-ಪ್ರಭಾವತಿ, ಅಭಿಮನ್ಯು-ಸುಭದ್ರೆ, ಭೀಮ-ಅರ್ಜುನರ ಸಂವಾದಗಳು ಯುಗಳ ಸಂವಾದವಾಗಿ ರಂಗ ಪ್ರಸ್ತುತಿಗೊಂಡಿತು. ಉಪನ್ಯಾಸಕ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರಂಗಶಂಕರದಲ್ಲಿ ‘ಕಾಯುವ ಕಾಯಕ’ | ಜೂನ್ 5
    Next Article ಪರಿಚಯ ಲೇಖನ | ‘ಯಕ್ಷ ಕಲಾ ಲಲನೆ’ ಬಿಂದಿಯಾ ಶೆಟ್ಟಿ
    roovari

    Add Comment Cancel Reply


    Related Posts

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.