ಮಂಗಳೂರು: ಮಂಗಳೂರಿನ ಬಿಜೈಯಲ್ಲಿರುವ ನೃತ್ಯಾಂಗನ್ ಸಂಸ್ಥೆ ಆಯೋಜಿಸುವ ‘ಯುವ ನೃತ್ಯೋತ್ಸವ – 2025’ ಕಾರ್ಯಕ್ರಮವು ಡಾ. ಅರುಣ್ ಕುಮಾರ್ ಮೈಯಾ ಇವರ ಸ್ಮರಣಾರ್ಥ ದಿನಾಂಕ 08 ಜೂನ್ 2025ರಂದು ಮಂಗಳೂರಿನ ಡಾನ್ಬಾಸ್ಕೋ ಸಭಾಂಗಣದಲ್ಲಿ ನಡೆಯಲಿದೆ.
ಅಂದು ಸಾಯಂಕಾಲ ಘಂಟೆ 5.30ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಭರತಾಂಜಲಿ ನಿರ್ದೇಶಕಿ ವಿದುಷಿ ಪ್ರತಿಮಾ ಶ್ರೀಧರ್ ಚಾಲನೆ ನೀಡುವರು. ಯುವ ನೃತ್ಯೋತ್ಸವ-2025ರ ಪ್ರಯುಕ್ತ ಉದಯೋನ್ಮುಖ ಕಲಾವಿದೆಯರಾದ ಶ್ರೇಷ್ಠಾ ಆರ್. ದೇವಾಡಿಗ, ಪೂಜಾ ಸುಗಮ್, ಶ್ರೇಯಾ ಜಿ. ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಪಡಿಸುವರು. ಪೃಥ್ವಿ ನಾಯಕ್ ಏಕವ್ಯಕ್ತಿ ಒಡಿಸ್ಸಿ ನೃತ್ಯ ಪ್ರಸ್ತುತಪಡಿಸುವರು. ಬಳಿಕ ಗುರು ವಿದುಷಿ ಪ್ರತಿಮಾ ಶ್ರೀಧರ್ ಅವರ ಶಿಷ್ಯೆಯಂದಿರು ಸಮೂಹ ನೃತ್ಯ ಪ್ರಸ್ತುತಪಡಿಸುವರು. ಆಸಕ್ತರಿಗೆ ಉಚಿತ ಪ್ರವೇಶ ಎಂದು ನೃತ್ಯಾಂಗನ್ ಸಂಸ್ಥೆಯ ನಿರ್ದೇಶಕಿ, ಕಲಾವಿದೆ ರಾಧಿಕಾ ಶೆಟ್ಟಿ ತಿಳಿಸಿದ್ದಾರೆ.