Subscribe to Updates

    Get the latest creative news from FooBar about art, design and business.

    What's Hot

    ‘ಗೆಳೆಯರ ಬಳಗ ಕಾರಂತ ಪುರಸ್ಕಾರ – 2025 ಪ್ರಶಸ್ತಿ’ಗೆ ಎಚ್. ಶಕುಂತಳಾ ಭಟ್ ಆಯ್ಕೆ

    September 17, 2025

    ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ‘ಸುವರ್ಣ ಪರ್ವ -13’ | ಸೆಪ್ಟೆಂಬರ್ 21

    September 17, 2025

    ಕಥೆಗಳು ಮನಸ್ಸಿನಲ್ಲಿ ಅನುರಣಿಸುವಂತೆ ಇರಬೇಕು – ಕಾಸರಗೋಡು ಚಿನ್ನ

    September 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಯುವ ಸಂಗೀತೋತ್ಸವ 2024’
    Music

    ಮಂಗಳೂರಿನಲ್ಲಿ ‘ಯುವ ಸಂಗೀತೋತ್ಸವ 2024’

    May 7, 2024Updated:May 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸಂಗೀತ ಪರಿಷತ್ ಮಂಗಳೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಾರತೀಯ ವಿದ್ಯಾಭವನ ಮಂಗಳೂರು ಮತ್ತು ಶ್ರೀ ರಾಮಕೃಷ್ಣ ಮಠದ ಸಹಯೋಗದಲ್ಲಿ ‘ಯುವ ಸಂಗೀತೋತ್ಸವ 2024’ ಕಾರ್ಯಕ್ರಮವು ದಿನಾಂಕ 05-05-2024ರ ರವಿವಾರದಂದು ಮಂಗಳೂರಿನ ಮಂಗಳಾದೇವಿಯಲ್ಲಿರುವ ಶ್ರೀ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನೆರವೇರಿತು.

    ಖ್ಯಾತ ಯುವ ಗಾಯಕಿ ಸೂರ್ಯ ಗಾಯತ್ರಿ ಅವರ ಹಾಡುಗಾರಿಕೆ ಸಂಗೀತೋತ್ಸವದಲ್ಲಿ ವಿಶೇಷ ಆಕರ್ಷಣೆಯಾಗಿತ್ತು. ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭಿಸಿದ ಅವರು ಶಾಸ್ತ್ರೀಯವಾದ ಹಲವು ಹಾಡುಗಳನ್ನು ಹಾಡಿ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಸುಮಾರು ಮೂರು ಗಂಟೆಗಳ  ಕಾಲ ಸಂಗೀತ ಕಾರ್ಯಕ್ರಮ ನೆರವೇರಿತು. ಸೂರ್ಯ ಗಾಯತ್ರಿಯ ಅಭಿಮಾನಿಗಳು ಹಾಗೂ ಸಂಗೀತ ಪ್ರೇಮಿಗಳು ಸಂಗೀತ ಆಸ್ವಾದಿಸಿದರು.
    ಸೂರ್ಯ ಗಾಯತ್ರಿ ಅವರಿಗೆ ವಯಲಿನ್ ನಲ್ಲಿ ಗಣರಾಜ ಕಾರ್ಲೆ, ಮೃದಂಗದಲ್ಲಿ ಅನಿಲ್ ಕುಮಾರ್ ವಡಗರ ಮತ್ತು ಘಟಂ ನಲ್ಲಿ ಮಂಜೂರ್ ಉಣ್ಣಿಕೃಷ್ಣನ್ ಸಾಥ್ ನೀಡಿದರು.

    ದಿನವಿಡೀ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಚಿನ್ಮಯಿ ವಿ. ಭಟ್ ಅವರಿಂದ ನಡೆದ ಹಾಡುಗಾರಿಕೆಗೆ ವಯಲಿನ್‌ನಲ್ಲಿ ಗೌತಮ್ ಭಟ್ ಪಿ.ಜಿ., ಮೃದಂಗದಲ್ಲಿ ಅವಿನಾಶ್ ಬೆಳ್ಳಾರೆ ಸಹಕರಿಸಿದರು. ಬಳಿಕ ವೆಂಕಟ ಯಶಸ್ವಿ ಮತ್ತು ವಿಜೇತಾ ಸುಬ್ರಹ್ಮಣ್ಯ ಇವರಿಂದ ನಡೆದ ಹಾಡುಗಾರಿಕೆಗೆ ವಯಲಿನ್‌ನಲ್ಲಿ ಧನಶ್ರೀ ಶಬರಾಯ ಮತ್ತು ಮೃದಂಗದಲ್ಲಿ ಪ್ರಣವ್ ಸುಬ್ರಹ್ಮಣ್ಯ ಸಹಕರಿಸಿದರು.

    ಅಪರಾಹ್ನ ಮೇಧಾ ಉಡುಪ ಅವರಿಂದ ಪ್ರಸ್ತುತಗೊಂಡ ಕೊಳಲು ವಾದನಕ್ಕೆ ವಯಲಿನ್‌ನಲ್ಲಿ ಗೌತಮ್ ಭಟ್ ಪಿ.ಜಿ. ಹಾಗೂ ಮೃದಂಗದಲ್ಲಿ ಅವಿನಾಶ್ ಬೆಳ್ಳಾರೆ ಸಹಕರಿಸಿದರು. ಬಳಿಕ ತನ್ಮಯಿ ಹಸನಡ್ಕ ಅವರಿಂದ ನಡೆದ ಹಾಡುಗಾರಿಕೆಗೆ ವಯಲಿನ್‌ನಲ್ಲಿ ಧನಶ್ರೀ ಶಬರಾಯ ಹಾಗೂ ಮೃದಂಗದಲ್ಲಿ ಪ್ರಣವ್ ಸುಬ್ರಹ್ಮಣ್ಯ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಜಿರೆಯಲ್ಲಿ ವಿದ್ಯಾರ್ಥಿಗಳ ತಂಡದಿಂದ ಯಕ್ಷಗಾನ ಪ್ರದರ್ಶನ
    Next Article ಉದ್ಯಾವರ ಮಾಡದಲ್ಲಿ ಆಯೋಜಿಸಿದ ‘ಹರಿಕಥಾ ಸಪ್ತಾಹ’ದ ಉದ್ಘಾಟನೆ
    roovari

    Add Comment Cancel Reply


    Related Posts

    ಮೂಡುಬಿದಿರೆಯಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಸೆಪ್ಟೆಂಬರ್ 20

    September 17, 2025

    ಬೆಂಗಳೂರಿನ ವಿಜಯನಗರ ಬಿಂಬದಲ್ಲಿ ಒಂದು ವರ್ಷದ ರಂಗಭೂಮಿ ಡಿಪ್ಲೋಮೋ   

    September 16, 2025

    ಬೈಲೂರಿನಲ್ಲಿ ಕೃತಿಯ ನರ್ಸಿಂಗ್ ರಾಣ ಇವರಿಂದ ಒಡಿಸ್ಸಿ ನೃತ್ಯ | ಸೆಪ್ಟೆಂಬರ್ 19

    September 16, 2025

    ಮಂಚಿ ಲಯನ್ಸ್ ಕ್ಲಬ್ ನಲ್ಲಿ ನೃತ್ಯಸರಣಿ ಮಾಲಿಕೆ ‘ಕಲಾಧಾರಾ’

    September 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.